ಕ್ರೀಡೆ

ಜೈಸ್ವಾಲ್‌, ಅಶ್ವಿನ್‌ ಕಮಾಲ್‌: ವಿಂಡೀಸ್ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ

ಡೊಮೆನಿಕಾ: ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಹಾಗೂ 141 ರನ್ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಮೊದಲ ಇನ್ನಿಂಗ್ಸ್ ನಲ್ಲಿ 271 ರನ್ ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ವೆಸ್ಟ್ ಇಂಡೀಸ್ ತಂಡ 2ನೇ ಇನ್ನಿಂಗ್ಸ್ ನಲ್ಲೂ ಆರ್ ಅಶ್ವಿನ್ ಸ್ಪಿನ್ ದಾಳಿಗೆ ತತ್ತರಿಸಿ ಕೇವಲ 130 ರನ್ ಗಳಿಗೆ ಆಲೌಟ್ ಆಗುವ ಮೂಲಕ ಮೊದಲ ಟೆಸ್ಟ್ ಪಂದ್ಯದಲ್ಲಿ  ಇನ್ನಿಂಗ್ಸ್ ಮತ್ತು 141 ರನ್ ಗಳ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಎರಡು ಪಂದ್ಯಗಳ ಸರಣಿಯಲ್ಲಿ ಪ್ರವಾಸಿ ಭಾರತ ತಂಡ 1–0 ಅಂತರದ ಮುನ್ನಡೆ ಸಾಧಿಸಿದೆ.

ಪದಾರ್ಪಣೆ ಪಂದ್ಯವಾಡಿದ ಯಶಸ್ವಿ ಜೈಸ್ವಾಲ್ (171), ನಾಯಕ ರೋಹಿತ್ ಶರ್ಮಾ (103) ಶತಕ ಹಾಗೂ ಅನುಭವಿ ವಿರಾಟ್‌ ಕೊಹ್ಲಿ 76 ರನ್‌ ಕಲೆಹಾಕಿ ಟೀಂ ಇಂಡಿಯಾ ಇನಿಂಗ್ಸ್‌ಗೆ ಬಲ ತುಂಬಿದ್ದರು.

ಆರ್‌.ಅಶ್ವಿನ್‌ ಕೈಚಳಕ
ಮೊದಲ ಇನ್ನಿಂಗ್ಸ್‌ನಲ್ಲಿ 150 ರನ್‌ ಗಳಿಗೆ ಸರ್ವಪತನ ಕಂಡಿದ್ದ ವೆಸ್ಟ್‌ ಇಂಡೀಸ್‌ ತಂಡ, ಭಾರತದ ನೀಡಿದ 421 ರನ್‌ ಗಳ ಗುರಿಯನ್ನು ಬೆನ್ನಟ್ಟಲು ಮುಂದಾಯಿತು.  270 ರನ್ ಹಿನ್ನಡೆಯೊಂದಿಗೆ ಕಣಕ್ಕಿಳಿದ ವಿಂಡೀಸ್ ತಂಡದ ಬ್ಯಾಟಿಂಗ್‌, ಆರ್‌.ಅಶ್ವಿನ್‌ ಕೈಚಳಕದ ಎದುರು ಎರಡನೇ ಇನಿಂಗ್ಸ್‌ನಲ್ಲೂ ಸುಧಾರಿಸಲಿಲ್ಲ.

ಸ್ಪಿನ್‌ ಬಲೆಗೆ ಬಿದ್ದ ಆತಿಥೇಯ ತಂಡದ ಬ್ಯಾಟರ್‌ಗಳು ರನ್‌ ಗಳಿಸಲು ಪರದಾಡಿದರು. ಅಲಿಕ್ ಅತಾಂಜೆ 27 ರನ್‌ ಗಳಿಸಿದ್ದೇ, ಈ ತಂಡದ ಪರ ವೈಯಕ್ತಿಕ ಗರಿಷ್ಠ ಮೊತ್ತ ಎನಿಸಿತು. ಹೀಗಾಗಿ, ವಿಂಡೀಸ್‌ ಬಳಗ 130 ರನ್ ಗಳಿಗೆ ಸರ್ವ ಪತನ ಕಂಡು, ಹೀನಾಯ ಸೋಲೊಪ್ಪಿಕೊಳ್ಳಬೇಕಾಯಿತು.

ಭಾರತ ಪರ ಮೊದಲ ಇನಿಂಗ್ಸ್‌ನಲ್ಲಿ 5 ವಿಕೆಟ್‌ ಪಡೆದಿದ್ದ ಅಶ್ವಿನ್, ಎರಡನೇ ಇನಿಂಗ್ಸ್‌ನಲ್ಲಿ 7 ವಿಕೆಟ್‌ ಕಬಳಿಸಿದರು. ಯಶಸ್ವಿ ಜೈಸ್ವಾಲ್ ಪಂದ್ಯಶ್ರೇಷ್ಠ ಪ್ರಸಸ್ತಿಗೆ ಭಾಜನರಾದರು.

ಎರಡನೇ ಪಂದ್ಯ ಟ್ರಿನಿಡಾಡ್‌ನ ಕ್ವೀನ್ಸ್‌ ಪಾರ್ಕ್‌ನಲ್ಲಿ ಜುಲೈ 20ರಿಂದ ಜುಲೈ 24ರ ವರೆಗೆ ನಡೆಯಲಿದೆ.

andolanait

Recent Posts

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

2 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

3 hours ago

ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸದಸ್ಯರು

ನವದೆಹಲಿ: ಆಮ್‌ ಆದ್ಮಿ ಪಕ್ಷಕ್ಕೆ ಬಿಗ್‌ ಶಾಕ್‌ ಎದುರಾಗಿದ್ದು, ರಾಘವ್‌ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

4 hours ago

ಮೈಸೂರು| ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಒಡೆಯರ್‌ ದಿಢೀರ್‌ ಭೇಟಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.…

4 hours ago

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್‌ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ…

4 hours ago

ಸಿಇಟಿ ಪರೀಕ್ಷೆ| ಜನಿವಾರ ತೆಗೆಸಿದ ಬೆಂಗಳೂರು ಕಾಲೇಜು: ಪೋಷಕರಿಂದ ಆಕ್ರೋಶ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ…

5 hours ago