ಕ್ರೀಡೆ

ಜೈಸ್ವಾಲ್‌, ಅಶ್ವಿನ್‌ ಕಮಾಲ್‌: ವಿಂಡೀಸ್ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ

ಡೊಮೆನಿಕಾ: ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಹಾಗೂ 141 ರನ್ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಮೊದಲ ಇನ್ನಿಂಗ್ಸ್ ನಲ್ಲಿ 271 ರನ್ ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ವೆಸ್ಟ್ ಇಂಡೀಸ್ ತಂಡ 2ನೇ ಇನ್ನಿಂಗ್ಸ್ ನಲ್ಲೂ ಆರ್ ಅಶ್ವಿನ್ ಸ್ಪಿನ್ ದಾಳಿಗೆ ತತ್ತರಿಸಿ ಕೇವಲ 130 ರನ್ ಗಳಿಗೆ ಆಲೌಟ್ ಆಗುವ ಮೂಲಕ ಮೊದಲ ಟೆಸ್ಟ್ ಪಂದ್ಯದಲ್ಲಿ  ಇನ್ನಿಂಗ್ಸ್ ಮತ್ತು 141 ರನ್ ಗಳ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಎರಡು ಪಂದ್ಯಗಳ ಸರಣಿಯಲ್ಲಿ ಪ್ರವಾಸಿ ಭಾರತ ತಂಡ 1–0 ಅಂತರದ ಮುನ್ನಡೆ ಸಾಧಿಸಿದೆ.

ಪದಾರ್ಪಣೆ ಪಂದ್ಯವಾಡಿದ ಯಶಸ್ವಿ ಜೈಸ್ವಾಲ್ (171), ನಾಯಕ ರೋಹಿತ್ ಶರ್ಮಾ (103) ಶತಕ ಹಾಗೂ ಅನುಭವಿ ವಿರಾಟ್‌ ಕೊಹ್ಲಿ 76 ರನ್‌ ಕಲೆಹಾಕಿ ಟೀಂ ಇಂಡಿಯಾ ಇನಿಂಗ್ಸ್‌ಗೆ ಬಲ ತುಂಬಿದ್ದರು.

ಆರ್‌.ಅಶ್ವಿನ್‌ ಕೈಚಳಕ
ಮೊದಲ ಇನ್ನಿಂಗ್ಸ್‌ನಲ್ಲಿ 150 ರನ್‌ ಗಳಿಗೆ ಸರ್ವಪತನ ಕಂಡಿದ್ದ ವೆಸ್ಟ್‌ ಇಂಡೀಸ್‌ ತಂಡ, ಭಾರತದ ನೀಡಿದ 421 ರನ್‌ ಗಳ ಗುರಿಯನ್ನು ಬೆನ್ನಟ್ಟಲು ಮುಂದಾಯಿತು.  270 ರನ್ ಹಿನ್ನಡೆಯೊಂದಿಗೆ ಕಣಕ್ಕಿಳಿದ ವಿಂಡೀಸ್ ತಂಡದ ಬ್ಯಾಟಿಂಗ್‌, ಆರ್‌.ಅಶ್ವಿನ್‌ ಕೈಚಳಕದ ಎದುರು ಎರಡನೇ ಇನಿಂಗ್ಸ್‌ನಲ್ಲೂ ಸುಧಾರಿಸಲಿಲ್ಲ.

ಸ್ಪಿನ್‌ ಬಲೆಗೆ ಬಿದ್ದ ಆತಿಥೇಯ ತಂಡದ ಬ್ಯಾಟರ್‌ಗಳು ರನ್‌ ಗಳಿಸಲು ಪರದಾಡಿದರು. ಅಲಿಕ್ ಅತಾಂಜೆ 27 ರನ್‌ ಗಳಿಸಿದ್ದೇ, ಈ ತಂಡದ ಪರ ವೈಯಕ್ತಿಕ ಗರಿಷ್ಠ ಮೊತ್ತ ಎನಿಸಿತು. ಹೀಗಾಗಿ, ವಿಂಡೀಸ್‌ ಬಳಗ 130 ರನ್ ಗಳಿಗೆ ಸರ್ವ ಪತನ ಕಂಡು, ಹೀನಾಯ ಸೋಲೊಪ್ಪಿಕೊಳ್ಳಬೇಕಾಯಿತು.

ಭಾರತ ಪರ ಮೊದಲ ಇನಿಂಗ್ಸ್‌ನಲ್ಲಿ 5 ವಿಕೆಟ್‌ ಪಡೆದಿದ್ದ ಅಶ್ವಿನ್, ಎರಡನೇ ಇನಿಂಗ್ಸ್‌ನಲ್ಲಿ 7 ವಿಕೆಟ್‌ ಕಬಳಿಸಿದರು. ಯಶಸ್ವಿ ಜೈಸ್ವಾಲ್ ಪಂದ್ಯಶ್ರೇಷ್ಠ ಪ್ರಸಸ್ತಿಗೆ ಭಾಜನರಾದರು.

ಎರಡನೇ ಪಂದ್ಯ ಟ್ರಿನಿಡಾಡ್‌ನ ಕ್ವೀನ್ಸ್‌ ಪಾರ್ಕ್‌ನಲ್ಲಿ ಜುಲೈ 20ರಿಂದ ಜುಲೈ 24ರ ವರೆಗೆ ನಡೆಯಲಿದೆ.

andolanait

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

4 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

4 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

4 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

4 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

16 hours ago