ಕ್ರೀಡೆ

ಜೈಸ್ವಾಲ್‌, ಅಶ್ವಿನ್‌ ಕಮಾಲ್‌: ವಿಂಡೀಸ್ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ

ಡೊಮೆನಿಕಾ: ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಹಾಗೂ 141 ರನ್ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಮೊದಲ ಇನ್ನಿಂಗ್ಸ್ ನಲ್ಲಿ 271 ರನ್ ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ವೆಸ್ಟ್ ಇಂಡೀಸ್ ತಂಡ 2ನೇ ಇನ್ನಿಂಗ್ಸ್ ನಲ್ಲೂ ಆರ್ ಅಶ್ವಿನ್ ಸ್ಪಿನ್ ದಾಳಿಗೆ ತತ್ತರಿಸಿ ಕೇವಲ 130 ರನ್ ಗಳಿಗೆ ಆಲೌಟ್ ಆಗುವ ಮೂಲಕ ಮೊದಲ ಟೆಸ್ಟ್ ಪಂದ್ಯದಲ್ಲಿ  ಇನ್ನಿಂಗ್ಸ್ ಮತ್ತು 141 ರನ್ ಗಳ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಎರಡು ಪಂದ್ಯಗಳ ಸರಣಿಯಲ್ಲಿ ಪ್ರವಾಸಿ ಭಾರತ ತಂಡ 1–0 ಅಂತರದ ಮುನ್ನಡೆ ಸಾಧಿಸಿದೆ.

ಪದಾರ್ಪಣೆ ಪಂದ್ಯವಾಡಿದ ಯಶಸ್ವಿ ಜೈಸ್ವಾಲ್ (171), ನಾಯಕ ರೋಹಿತ್ ಶರ್ಮಾ (103) ಶತಕ ಹಾಗೂ ಅನುಭವಿ ವಿರಾಟ್‌ ಕೊಹ್ಲಿ 76 ರನ್‌ ಕಲೆಹಾಕಿ ಟೀಂ ಇಂಡಿಯಾ ಇನಿಂಗ್ಸ್‌ಗೆ ಬಲ ತುಂಬಿದ್ದರು.

ಆರ್‌.ಅಶ್ವಿನ್‌ ಕೈಚಳಕ
ಮೊದಲ ಇನ್ನಿಂಗ್ಸ್‌ನಲ್ಲಿ 150 ರನ್‌ ಗಳಿಗೆ ಸರ್ವಪತನ ಕಂಡಿದ್ದ ವೆಸ್ಟ್‌ ಇಂಡೀಸ್‌ ತಂಡ, ಭಾರತದ ನೀಡಿದ 421 ರನ್‌ ಗಳ ಗುರಿಯನ್ನು ಬೆನ್ನಟ್ಟಲು ಮುಂದಾಯಿತು.  270 ರನ್ ಹಿನ್ನಡೆಯೊಂದಿಗೆ ಕಣಕ್ಕಿಳಿದ ವಿಂಡೀಸ್ ತಂಡದ ಬ್ಯಾಟಿಂಗ್‌, ಆರ್‌.ಅಶ್ವಿನ್‌ ಕೈಚಳಕದ ಎದುರು ಎರಡನೇ ಇನಿಂಗ್ಸ್‌ನಲ್ಲೂ ಸುಧಾರಿಸಲಿಲ್ಲ.

ಸ್ಪಿನ್‌ ಬಲೆಗೆ ಬಿದ್ದ ಆತಿಥೇಯ ತಂಡದ ಬ್ಯಾಟರ್‌ಗಳು ರನ್‌ ಗಳಿಸಲು ಪರದಾಡಿದರು. ಅಲಿಕ್ ಅತಾಂಜೆ 27 ರನ್‌ ಗಳಿಸಿದ್ದೇ, ಈ ತಂಡದ ಪರ ವೈಯಕ್ತಿಕ ಗರಿಷ್ಠ ಮೊತ್ತ ಎನಿಸಿತು. ಹೀಗಾಗಿ, ವಿಂಡೀಸ್‌ ಬಳಗ 130 ರನ್ ಗಳಿಗೆ ಸರ್ವ ಪತನ ಕಂಡು, ಹೀನಾಯ ಸೋಲೊಪ್ಪಿಕೊಳ್ಳಬೇಕಾಯಿತು.

ಭಾರತ ಪರ ಮೊದಲ ಇನಿಂಗ್ಸ್‌ನಲ್ಲಿ 5 ವಿಕೆಟ್‌ ಪಡೆದಿದ್ದ ಅಶ್ವಿನ್, ಎರಡನೇ ಇನಿಂಗ್ಸ್‌ನಲ್ಲಿ 7 ವಿಕೆಟ್‌ ಕಬಳಿಸಿದರು. ಯಶಸ್ವಿ ಜೈಸ್ವಾಲ್ ಪಂದ್ಯಶ್ರೇಷ್ಠ ಪ್ರಸಸ್ತಿಗೆ ಭಾಜನರಾದರು.

ಎರಡನೇ ಪಂದ್ಯ ಟ್ರಿನಿಡಾಡ್‌ನ ಕ್ವೀನ್ಸ್‌ ಪಾರ್ಕ್‌ನಲ್ಲಿ ಜುಲೈ 20ರಿಂದ ಜುಲೈ 24ರ ವರೆಗೆ ನಡೆಯಲಿದೆ.

andolanait

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

3 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

7 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

8 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

8 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

13 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

13 hours ago