Categories: ಕ್ರೀಡೆ

ಮೆಕಲಮ್‌ ಹೆಸರಿನಲ್ಲಿದ್ದ ವಿಶ್ವದಾಖಲೆ ಸರಿಗಟ್ಟಿದ ಜೈಸ್ವಾಲ್‌

ಕಳೆದ ಒಂದು ವರ್ಷದಿಂದ ಭಾರತದ ಟೆಸ್ಟ್‌ ಟೀಮ್‌ನಲ್ಲಿ ಆರಂಭಿಕ ಬ್ಯಾಟರ್ ಆಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿರುವ ಯಶಸ್ವಿ ಜೈಸ್ವಾಲ್‌ ಟೆಸ್ಟ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಸ್ಕಾರ್‌ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯದಲ್ಲಿ‌ ಮೆಕಲಮ್‌ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಈ ಪಂದ್ಯದಲ್ಲಿ ಪ್ಯಾಟ್‌ ಕಮಿನ್ಸ್‌ ಬೌಲಿಂಗ್‌ನಲ್ಲಿ ಸಿಕ್ಸರ್‌ ಸಿಡಿಸುವ ಮೂಲಕ ಬ್ರೆಂಡನ್‌ ಮೆಕಲಮ್‌ ಅವರ 10 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ. ಒಂದೇ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯಲ್ಲಿ ಮೊದಲಿಗರಾದರು.

ಮೆಕಲಮ್‌ 2013ರಲ್ಲಿ ವರ್ಷದಲ್ಲಿ 33 ಸಿಕ್ಸರ್‌ಗಳನ್ನು ಬಾರಿಸಿದ್ದು ಟೆಸ್ಟ್‌ ಇತಿಹಾಸದಲ್ಲಿ ದಾಖಲೆಯಾಗಿತ್ತು. ಈಗ 12 ಟೆಸ್ಟ್‌ನಲ್ಲಿ 34 ಸಿಕ್ಸರ್‌ಗಳನ್ನು ಸಿಡಿಸುವ ಮೂಲಕ ಯಶಸ್ವಿ ಜೈಸ್ವಾಲ್‌ ಈ ಸಾಧನೆ ಮಾಡಿದ್ದಾರೆ.

ಒಂದು ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್‌ ಸಿಡಿಸಿದವರ ಪಟ್ಟಿಯಲ್ಲಿ ಜೈಸ್ವಾಲ್ ಮೊದಲ ಸ್ಥಾನದಲ್ಲಿದ್ದರೆ, ಮೆಕಲಮ್‌ 33, ಬೆನ್‌ ಸ್ಟೋಕ್ಸ್ 26, ಗಿಲ್‌ಕ್ರಿಸ್ಟ್‌ 22, ಸೆಹ್ವಾಗ್‌ 22 ನಂತರದ ಸ್ಥಾನದಲ್ಲಿದ್ದಾರೆ.

2023ರಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ಟೆಸ್ಟ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಯಶಸ್ವಿ ಜೈಸ್ವಾಲ್‌ ಭಾರತ ತಂಡದ ಪರವಾಗಿ ಆಡಿದ 15 ಟೆಸ್ಟ್‌ ಪಂದ್ಯಗಳಲ್ಲಿ 1495 ರನ್‌ ಗಳಿಸಿದ್ದು, ಇದರಲ್ಲಿ 3 ಶತಕ, 8 ಅರ್ಧ ಶತಕಗಳು ದಾಖಲಾಗಿವೆ. 214 ರನ್‌ ಅವರ ಗರಿಷ್ಠ ಸ್ಕೋರ್‌ ಆಗಿದೆ. 60.94ರ ಸರಾಸರಿಯಲ್ಲಿ ಜೈಸ್ವಾಲ್‌ ಬ್ಯಾಟ್‌ ಬೀಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago