Categories: ಕ್ರೀಡೆ

ಮೆಕಲಮ್‌ ಹೆಸರಿನಲ್ಲಿದ್ದ ವಿಶ್ವದಾಖಲೆ ಸರಿಗಟ್ಟಿದ ಜೈಸ್ವಾಲ್‌

ಕಳೆದ ಒಂದು ವರ್ಷದಿಂದ ಭಾರತದ ಟೆಸ್ಟ್‌ ಟೀಮ್‌ನಲ್ಲಿ ಆರಂಭಿಕ ಬ್ಯಾಟರ್ ಆಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿರುವ ಯಶಸ್ವಿ ಜೈಸ್ವಾಲ್‌ ಟೆಸ್ಟ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಸ್ಕಾರ್‌ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯದಲ್ಲಿ‌ ಮೆಕಲಮ್‌ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಈ ಪಂದ್ಯದಲ್ಲಿ ಪ್ಯಾಟ್‌ ಕಮಿನ್ಸ್‌ ಬೌಲಿಂಗ್‌ನಲ್ಲಿ ಸಿಕ್ಸರ್‌ ಸಿಡಿಸುವ ಮೂಲಕ ಬ್ರೆಂಡನ್‌ ಮೆಕಲಮ್‌ ಅವರ 10 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ. ಒಂದೇ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯಲ್ಲಿ ಮೊದಲಿಗರಾದರು.

ಮೆಕಲಮ್‌ 2013ರಲ್ಲಿ ವರ್ಷದಲ್ಲಿ 33 ಸಿಕ್ಸರ್‌ಗಳನ್ನು ಬಾರಿಸಿದ್ದು ಟೆಸ್ಟ್‌ ಇತಿಹಾಸದಲ್ಲಿ ದಾಖಲೆಯಾಗಿತ್ತು. ಈಗ 12 ಟೆಸ್ಟ್‌ನಲ್ಲಿ 34 ಸಿಕ್ಸರ್‌ಗಳನ್ನು ಸಿಡಿಸುವ ಮೂಲಕ ಯಶಸ್ವಿ ಜೈಸ್ವಾಲ್‌ ಈ ಸಾಧನೆ ಮಾಡಿದ್ದಾರೆ.

ಒಂದು ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್‌ ಸಿಡಿಸಿದವರ ಪಟ್ಟಿಯಲ್ಲಿ ಜೈಸ್ವಾಲ್ ಮೊದಲ ಸ್ಥಾನದಲ್ಲಿದ್ದರೆ, ಮೆಕಲಮ್‌ 33, ಬೆನ್‌ ಸ್ಟೋಕ್ಸ್ 26, ಗಿಲ್‌ಕ್ರಿಸ್ಟ್‌ 22, ಸೆಹ್ವಾಗ್‌ 22 ನಂತರದ ಸ್ಥಾನದಲ್ಲಿದ್ದಾರೆ.

2023ರಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ಟೆಸ್ಟ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಯಶಸ್ವಿ ಜೈಸ್ವಾಲ್‌ ಭಾರತ ತಂಡದ ಪರವಾಗಿ ಆಡಿದ 15 ಟೆಸ್ಟ್‌ ಪಂದ್ಯಗಳಲ್ಲಿ 1495 ರನ್‌ ಗಳಿಸಿದ್ದು, ಇದರಲ್ಲಿ 3 ಶತಕ, 8 ಅರ್ಧ ಶತಕಗಳು ದಾಖಲಾಗಿವೆ. 214 ರನ್‌ ಅವರ ಗರಿಷ್ಠ ಸ್ಕೋರ್‌ ಆಗಿದೆ. 60.94ರ ಸರಾಸರಿಯಲ್ಲಿ ಜೈಸ್ವಾಲ್‌ ಬ್ಯಾಟ್‌ ಬೀಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

32 mins ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

1 hour ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

1 hour ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

2 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

5 hours ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

6 hours ago