Categories: ಕ್ರೀಡೆ

ಮೆಕಲಮ್‌ ಹೆಸರಿನಲ್ಲಿದ್ದ ವಿಶ್ವದಾಖಲೆ ಸರಿಗಟ್ಟಿದ ಜೈಸ್ವಾಲ್‌

ಕಳೆದ ಒಂದು ವರ್ಷದಿಂದ ಭಾರತದ ಟೆಸ್ಟ್‌ ಟೀಮ್‌ನಲ್ಲಿ ಆರಂಭಿಕ ಬ್ಯಾಟರ್ ಆಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿರುವ ಯಶಸ್ವಿ ಜೈಸ್ವಾಲ್‌ ಟೆಸ್ಟ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಸ್ಕಾರ್‌ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯದಲ್ಲಿ‌ ಮೆಕಲಮ್‌ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಈ ಪಂದ್ಯದಲ್ಲಿ ಪ್ಯಾಟ್‌ ಕಮಿನ್ಸ್‌ ಬೌಲಿಂಗ್‌ನಲ್ಲಿ ಸಿಕ್ಸರ್‌ ಸಿಡಿಸುವ ಮೂಲಕ ಬ್ರೆಂಡನ್‌ ಮೆಕಲಮ್‌ ಅವರ 10 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ. ಒಂದೇ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯಲ್ಲಿ ಮೊದಲಿಗರಾದರು.

ಮೆಕಲಮ್‌ 2013ರಲ್ಲಿ ವರ್ಷದಲ್ಲಿ 33 ಸಿಕ್ಸರ್‌ಗಳನ್ನು ಬಾರಿಸಿದ್ದು ಟೆಸ್ಟ್‌ ಇತಿಹಾಸದಲ್ಲಿ ದಾಖಲೆಯಾಗಿತ್ತು. ಈಗ 12 ಟೆಸ್ಟ್‌ನಲ್ಲಿ 34 ಸಿಕ್ಸರ್‌ಗಳನ್ನು ಸಿಡಿಸುವ ಮೂಲಕ ಯಶಸ್ವಿ ಜೈಸ್ವಾಲ್‌ ಈ ಸಾಧನೆ ಮಾಡಿದ್ದಾರೆ.

ಒಂದು ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್‌ ಸಿಡಿಸಿದವರ ಪಟ್ಟಿಯಲ್ಲಿ ಜೈಸ್ವಾಲ್ ಮೊದಲ ಸ್ಥಾನದಲ್ಲಿದ್ದರೆ, ಮೆಕಲಮ್‌ 33, ಬೆನ್‌ ಸ್ಟೋಕ್ಸ್ 26, ಗಿಲ್‌ಕ್ರಿಸ್ಟ್‌ 22, ಸೆಹ್ವಾಗ್‌ 22 ನಂತರದ ಸ್ಥಾನದಲ್ಲಿದ್ದಾರೆ.

2023ರಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ಟೆಸ್ಟ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಯಶಸ್ವಿ ಜೈಸ್ವಾಲ್‌ ಭಾರತ ತಂಡದ ಪರವಾಗಿ ಆಡಿದ 15 ಟೆಸ್ಟ್‌ ಪಂದ್ಯಗಳಲ್ಲಿ 1495 ರನ್‌ ಗಳಿಸಿದ್ದು, ಇದರಲ್ಲಿ 3 ಶತಕ, 8 ಅರ್ಧ ಶತಕಗಳು ದಾಖಲಾಗಿವೆ. 214 ರನ್‌ ಅವರ ಗರಿಷ್ಠ ಸ್ಕೋರ್‌ ಆಗಿದೆ. 60.94ರ ಸರಾಸರಿಯಲ್ಲಿ ಜೈಸ್ವಾಲ್‌ ಬ್ಯಾಟ್‌ ಬೀಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

4 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

4 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

5 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

6 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

6 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

9 hours ago