ಕ್ರೀಡೆ

ಮುಂಬೈ ತಂಡ ತೊರೆದು ಗೋವಾ ಸೇರಿದ ಜೈಸ್ವಾಲ್‌

ಮುಂಬೈ: ಭಾರತದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ ವೈಯುಕ್ತಿಕ ಕಾರಣಗಳಿಂದ ಮುಂಬೈ ತಂಡವನ್ನು ತ್ಯಜಿಸಿ ಗೋವಾ ತಂಡ ಸೇರಲು ನಿರ್ಧರಿಸಿದ್ದಾರೆ.

ಈ ಕುರಿತು ಮುಂಬೈ ಕ್ರಿಕೆಟ್‌ ಆಸೋಸಿಯೇಷನ್‌ಗೆ ಪತ್ರ ಬರೆದು ಗೋವಾ ತಂಡ ಸೇರುವ ಇಚ್ಚೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ಯಶಸ್ವಿ ಅಂತಹ ನಿರ್ಧಾರ ಕೈಗೊಳ್ಳಲು ಏನೋ ಕಾರಣವಿರಬಹುದು. ನಾವು ಅವರ ವಿನಂತಿಯನ್ನು ಸ್ವೀಕರಿಸುತ್ತೇವೆ ಎಂದು ಅಧಿಕಾರಿಯೊಬ್ಬರು ತಿಳಸಿದ್ದಾರೆ.

ಹೀಗಾಗಿ, ಯಶಸ್ವಿ ಜೈಸ್ವಾಲ್‌ 2025-26ರ ಋತುವಿನಿಂದ ಗೋವಾ ತಂಡದ ಪರ ಆಡಲಿದ್ದಾರೆ.

ಯಶಸ್ವಿ ಜೈಸ್ವಾಲ್‌ ಅವರು ನಮಗಾಗಿ ಆಡಲು ಬಯಸುತ್ತಾರೆ. ನಾವು ಅವರನ್ನು ಸ್ವಾಗತಿಸುತ್ತೇವೆ. ಮುಂದಿನ ಋತುವಿನಿಂದ ಅವರು ನಮಗಾಗಿ ಆಡಲಿದ್ದಾರೆ ಎಂದು ಗೋವಾ ಕ್ರಿಕೆಟ್‌ ಅಸೋಸಿಯೇಷನ್‌ ಕಾರ್ಯದರ್ಶಿ ಶಂಬಾ ದೇಸಾಯಿ ತಿಳಿಸಿದ್ದಾರೆ.

 

 

 

 

ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

8 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

8 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

9 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

12 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

14 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

15 hours ago