ಕ್ರೀಡೆ

21 ವರ್ಷಗಳ ಸುದೀರ್ಘ ಕ್ರಿಕೆಟ್‌ ವೃತ್ತಿ ಜೀವನಕ್ಕೆ ಗಡ್‌ಬೈ ಹೇಳಿದ ಜಿಮ್ಮಿ

ಇಂಗ್ಲೆಂಡ್‌ ಕ್ರಿಕೆಟ್‌ ತಂಡದ ವೇಗಿ ಜೇಮ್ಸ್‌ ಆಂಡರ್‌ಸನ್‌ ಅವರು ತಮ್ಮ 21 ವರ್ಷಗಳ ಸುದೀರ್ಘ ಕ್ರಿಕೆಟ್‌ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ.

ಕ್ರಿಕೆಟ್‌ ಕಾಶಿ ಲಾರ್ಡ್ಸ್‌ ಮೈದಾನದಲ್ಲಿ ನಡೆದ ಇಂಗ್ಲೆಂಡ್‌ ಹಾಗೂ ವೆಸ್ಟ್‌ ಇಂಡೀಸ್‌ ನಡುವಣಾ ಮೊದಲ ಟೆಸ್ಟ್‌ ಪಂದ್ಯದ ಬಳಿಕ ಬಲಗೈ ವೇಗಿ ಜೇಮ್ಸ್‌ ಆಂಡರ್‌ಸನ್‌ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇಗ್ಲೆಂಡ್‌ ಪರವಾಗಿ ಅತಿಹೆಚ್ಚು ಟೆಸ್ಟ್‌ ವಿಕೆಟ್‌ ಕಬಳಿಸಿದ ಬೌಲರ್‌ ಎಂಬ ಹೆಗ್ಗಳಿಕೆಯೊಂದಿಗೆ ಇಂಗ್ಲೆಂಡ್‌ ಕ್ರಿಕೆಟ್‌ ದಂತಕಥೆಯಾಗಿ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ್ದಾರೆ ಜೇಮ್ಸ್‌.

21 ವರ್ಷಗಳ ಸುದೀರ್ಘ ಕ್ರಿಕೆಟ್‌ ಆಡುವುದು ಅದರಲ್ಲೂ ಓರ್ವ ಬೌಲರ್‌ ಆಗಿ ಉಳಿಯುವುದು ಸುಲಭದ ಮಾತಲ್ಲ. ಅದರಲ್ಲಿ ಎಲ್ಲರೂ ನಿಬ್ಬೆರಗಾಗುವಂತೆ ತಮ್ಮ ವೃತ್ತಿ ಬದುಕಿನಲ್ಲಿ ಬದುಕುವ ಮೂಲಕ ತಮ್ಮದೇ ಛಾಪನ್ನು ಮೂಡಿಸಿ ಹೊರನಡೆದಿದ್ದಾರೆ ಆಂಡರ್ಸನ್‌

ಆಂಡರ್‌ಸನ್‌ ತಮ್ಮ ವಿದಾಯದ ಪಂದ್ಯದಲ್ಲಿ 26.4 ಓವರ್‌ ಬೌಲ್‌ ಮಾಡಿದ ಜಿಮ್ಮಿ 58 ರನ್‌ ನೀಡಿ 4 ವಿಕೆಟ್‌ ಕಬಳಿಸಿದರು. ಮೊದಲ ಇನ್ನಿಂಗ್ಸ್‌ನಲ್ಲಿ ಒಂದು ವಿಕೆಟ್‌ ಕಬಳಿಸಿದ್ದ ಇವರು ಎರಡನೇ ಇನ್ನಿಂಗ್ಸ್‌ನಲ್ಲಿ ಮೂರು ವಿಕೆಟ್‌ ಕಬಳಿಸಿದರು.

ನಿವೃತ್ತಿಯೊಂದಿಗೆ ಹಲವು ದಾಖಲೆ ಬರೆದ ಜೆಮ್ಸ್‌ ಆಂಡರ್‌ಸನ್‌

ವಿಶ್ವ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಕಬಳಿದ ಮೊದಲ ವೇಗದ ಬೌಲರ್‌ ಎಂಬ ಹೆಗ್ಗಳಿಕೆಗೆ ಇಂಗ್ಲೆಂಡ್‌ ವೇಗಿ ಭಾಜನರಾಗಿದ್ದಾರೆ. ಇವರು ಟೆಸ್ಟ್‌ ಕ್ರಿಕೆಟ್‌ನಲ್ಲಿ 188 ಪಂದ್ಯಗಳಿಂದ 26.43 ಸರಾಸರಿಯಲ್ಲಿ 704 ವಿಕೆಟ್‌ ಕಬಳಿಸಿದ್ದಾರೆ. ಹಾಗೂ ಒಟ್ಟಾರೆ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿಹೆಚ್ಚು ವಿಕೆಟ್‌ ಕಬಳಿಸಿದ ಆಟಗಾರರ ಪೈಕಿ ಮೂರನೇ ಸ್ಥಾನದಲ್ಲಿದ್ದಾರೆ ಜೇಮ್ಸ್‌.

ಟೆಸ್ಟ್‌ ಕ್ರಿಕೆಟ್‌ನಲ್ಲಿ ಬರೋಬ್ಬರಿ 40037 ಬಾಲ್‌ಗಳನ್ನು ಎಸೆಯುವ ಮೂಲಕ ಟೆಸ್ಟ್‌ ಕ್ರಿಕಟ್‌ನಲ್ಲಿ ನಲವತ್ತು ಸಾವಿರ ಎಸೆತಗಳನ್ನು ಎಸೆದ ಮೊದಲ ಬೌಲರ್‌ ಎಂಬ ವಿಶ್ವದಾಖಲೆಯನ್ನು ಬರೆದಿದ್ದಾರೆ. ಜತೆಗೆ ನಲವತ್ತು ಸಾವಿರ ಬಾಲ್‌ಗಳನ್ನು ಎಸೆದು ಕೇವಲ 18627 ರನ್‌ ನೀಡಿದ್ದಾರೆ.

1990ರ ಬಳಿಕ ಅತಿಹೆಚ್ಚು ವರ್ಷಗಳ ಕಾಲ ಟೆಸ್ಟ್‌ ಕ್ರಿಕೆಟ್‌ನಲ್ಲಿ ಆಟವಾಡಿದ ಏಕೈಕ ಆಟಗಾರ ಎಂಬ ಹಿರಿಮೆ ಜೇಮ್ಸ್‌ ಅವರ ಪಾಲಾಗಿದೆ. ಅವರು ಟೆಸ್ಟ್‌ ಕ್ರಿಕೆಟ್‌ನಲ್ಲಿ 21 ವರ್ಷ 53 ದಿನಗಳನ್ನು ಪೂರೈಸಿದ್ದಾರೆ.

ಎಲ್ಲಾ ಮೂರು ಮಾದರಿ ಸೇರಿದಂತೆ ಇಂಗ್ಲೆಂಡ್‌ ಪರವಾಗಿ ಹೆಚ್ಚು ವಿಕೆಟ್‌ ಕಿತ್ತ ಏಕೈಕ ಆಟಗಾರ ಎಂಬ ವಿಶ್ವದಾಖಲೆಯನ್ನು ಆಂಡರ್‌ಸನ್‌ ಬರೆದಿದ್ದಾರೆ. ಇವರು ಇಂಗ್ಲೆಂಡ್‌ ಪರವಾಗಿ ಒಟ್ಟು 501 ಪಂದ್ಯಗಳಿಂದ 991 ವಿಕೆಟ್‌ ಕಬಳಿಸಿದ್ದಾರೆ. ಅದರಲ್ಲಿ ಟೆಸ್ಟ್‌ನಲ್ಲಿ 704 ವಿಕೆಟ್‌, ಏಕದಿನ 269 ವಿಕೆಟ್‌ ಮತ್ತು ಟಿ20 ಯಲ್ಲಿ 18 ವಿಕೆಟ್‌ ಕಿತ್ತಿದ್ದಾರೆ.

ಅತಿಹೆಚ್ಚು ಬಾರಿ ಟೆಸ್ಟ್‌ನಲ್ಲಿ ನಾಟ್ಔಟ್‌ ಆಗಿ ಉಳಿದ ಆಟಗಾರ ಎಂಬ ವಿಶ್ವದಾಖಲೆಯೂ ಜೇಮ್ಸ್‌ ಆಂಡರ್‌ಸನ್‌ ಬಳಿಯಿದೆ. 188 ಟೆಸ್ಟ್‌ ಪಂದ್ಯಗಳಲ್ಲಿ ಬರೋಬ್ಬರಿ 114 ಬಾರಿ ನಾಟ್‌ಔಟ್‌ ಆಗಿದ್ದಾರೆ.

ವಿಶ್ವ ಕ್ರಿಕೆಟ್‌ನಲ್ಲಿ 50 ಸಾವಿರ ಎಸೆತೆಗಳನ್ನು ಪೂರೈಸಿದ ವಿಶ್ವದ ನಾಲ್ಕನೇ ಆಟಗಾರ ಆಂಡರ್‌ಸನ್‌ ಆಗಿದ್ದಾರೆ. ಇವರು 501 ಪಂದ್ಯಗಳಲ್ಲಿ 50043 ಎಸೆತಗಳನ್ನು ಎಸೆದಿದ್ದಾರೆ.

ಇಂಗ್ಲೆಂಡ್‌ ಹಾಗೂ ವೆಸ್ಟ್‌ ಇಂಡೀಸ್‌ ನಡುವಣಾ ಮೊದಲ ಟೆಸ್ಟ್‌ ಪಂದ್ಯದ ಸಾರಾಂಶ

ವೆಸ್‌ ಇಂಡೀಸ್‌ ಮೊದಲ ಇನ್ನಿಂಗ್ಸ್‌:
121/10 (41.4 ಓವರ್‌)
ಇಂಗ್ಲೆಂಡ್‌ ಮೊದಲ ಇನ್ನಿಂಗ್ಸ್‌:
371/10 (90 ಓವರ್‌)

ವೆಸ್ಟ್‌ ಇಂಡೀಸ್‌ ಎರಡನೇ ಇನ್ನಿಂಗ್ಸ್‌:
136/10 (47 ಓವರ್‌)

ಫಲಿತಾಂಶ: ಇಂಗ್ಲೆಂಡ್‌ಗೆ ಇನ್ನಿಂಗ್ಸ್‌ ಹಾಗೂ 114 ರನ್‌ ಗಳ ಭರ್ಜರಿ ಜಯ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನಾಳೆ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಟಾಕ್ಸಿಕ್‌ ಚಿತ್ರದ 2ನೇ ಟೀಸರ್‌ ರಿಲೀಸ್‌

ಬೆಂಗಳೂರು: ಕೆಜಿಎಫ್‌-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ…

1 hour ago

ದಲಿತರು ಯಾಕೆ ಮುಖ್ಯಮಂತ್ರಿಯಾಗಬಾರದು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…

2 hours ago

ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…

2 hours ago

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.…

2 hours ago

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…

3 hours ago

ರಾಜ್ಯದಲ್ಲಿ ಹೆಚ್ಚಿದ ಗರಿಷ್ಠ ತಾಪಮಾನ: ಚರ್ಮದ ಬಗ್ಗೆ ಇರಲಿ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…

3 hours ago