ನವದೆಹಲಿ: ರಂಜಾನ್ ಮಾಸದಲ್ಲಿ ರೋಜಾ (ಉಪವಾಸ) ಪಾಲಿಸುತ್ತಿಲ್ಲ ಎಂಬ ಟೀಕೆಗಳಿಗೆ ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಚಿತ್ರ ಕಥೆಗಾರ ಜಾವೇದ್ ಅಖ್ತರ್ ಬೆಂಬಲ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮತಾಂಧ ಮೂರ್ಖರ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ನಕರಾತ್ಮಕ ವಿಚಾರಗಳತ್ತ ಗಮನ ಹರಿಸದೆ, ಫೈನಲ್ ಪಂದ್ಯದ ಕಡೆ ಗಮನ ನೀಡಬೇಕೆಂದು ಶಮಿಗೆ ಸಲಹೆ ನೀಡಿದ್ದಾರೆ.
ಈ ವಿಚಾರದಲ್ಲಿ ನೀವು ತಲೆಹಾಕುವ ಅಗತ್ಯವಿಲ್ಲ. ಭಾರತ ತಂಡದ ಶ್ರೇಷ್ಠ ಆಟಗಾರರಲ್ಲಿ ನೀವು ಒಬ್ಬರು ಎನ್ನುವುದು ನಮಗೆ ಖುಷಿಯ ವಿಷಯ. ನಿಮಗೆ ಮತ್ತು ನಿಮ್ಮ ತಂಡಕ್ಕೆ ಶುಭವಾಗಲಿ ಎಂದು ಹಾರೈಸಿದ್ದಾರೆ.
ಶಮಿ ಅವರು, ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪಂದ್ಯದ ವೇಳೆ ಪಾನೀಯ ಸೇವಿಸಿದ್ದರು. ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗಳು ವ್ಯಕ್ತವಾಗಿದ್ದವು.
ಭಾರತ ಹಾಗು ನ್ಯೂಜಿಲೆಂಡ್ ತಂಡಗಳ ನಡುವಿನ ಫೈನಲ್ ಪಂದ್ಯವು ನಾಳೆ (ಮಾ.9ರಂದು) ದುಬೈನಲ್ಲಿ ನಡೆಯಲಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…