ಕ್ರೀಡೆ

ಉಪವಾಸ ವಿವಾದ: ಶಮಿಗೆ ಬೆಂಬಲ ಸೂಚಿಸಿದ ಜಾವೇದ್‌ ಅಖ್ತರ್‌

ನವದೆಹಲಿ: ರಂಜಾನ್‌ ಮಾಸದಲ್ಲಿ ರೋಜಾ (ಉಪವಾಸ) ಪಾಲಿಸುತ್ತಿಲ್ಲ ಎಂಬ ಟೀಕೆಗಳಿಗೆ ಭಾರತದ ವೇಗದ ಬೌಲರ್‌ ಮೊಹಮ್ಮದ್‌ ಶಮಿ ಅವರು ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಚಿತ್ರ ಕಥೆಗಾರ ಜಾವೇದ್‌ ಅಖ್ತರ್‌ ಬೆಂಬಲ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಮತಾಂಧ ಮೂರ್ಖರ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ನಕರಾತ್ಮಕ ವಿಚಾರಗಳತ್ತ ಗಮನ ಹರಿಸದೆ, ಫೈನಲ್‌ ಪಂದ್ಯದ ಕಡೆ ಗಮನ ನೀಡಬೇಕೆಂದು ಶಮಿಗೆ ಸಲಹೆ ನೀಡಿದ್ದಾರೆ.

ಈ ವಿಚಾರದಲ್ಲಿ ನೀವು ತಲೆಹಾಕುವ ಅಗತ್ಯವಿಲ್ಲ. ಭಾರತ ತಂಡದ ಶ್ರೇಷ್ಠ ಆಟಗಾರರಲ್ಲಿ ನೀವು ಒಬ್ಬರು ಎನ್ನುವುದು ನಮಗೆ ಖುಷಿಯ ವಿಷಯ. ನಿಮಗೆ ಮತ್ತು ನಿಮ್ಮ ತಂಡಕ್ಕೆ ಶುಭವಾಗಲಿ ಎಂದು ಹಾರೈಸಿದ್ದಾರೆ.

ಶಮಿ ಅವರು, ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ ಪಂದ್ಯದ ವೇಳೆ ಪಾನೀಯ ಸೇವಿಸಿದ್ದರು. ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗಳು ವ್ಯಕ್ತವಾಗಿದ್ದವು.

ಭಾರತ ಹಾಗು ನ್ಯೂಜಿಲೆಂಡ್‌ ತಂಡಗಳ ನಡುವಿನ ಫೈನಲ್‌ ಪಂದ್ಯವು ನಾಳೆ (ಮಾ.9ರಂದು) ದುಬೈನಲ್ಲಿ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

16 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

16 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

16 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

16 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

16 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

16 hours ago