ಕ್ರೀಡೆ

ಜಯ್​ ಶಾ ಮುಡಿಗೆ ಸ್ಪೋರ್ಟ್ಸ್ ಬಿಸಿನೆಸ್ ಲೀಡರ್ ಆಫ್​ ದಿ ಇಯರ್ ಪ್ರಶಸ್ತಿ

ಐಸಿಸಿ ಏಕದಿನ ವಿಶ್ವಕಪ್‌ ನಲ್ಲಿ ಸಾಲು ಸಾಲು ಸವಾಲಲುಗಳು ಎದುರಾದರು, ಅವುಗಳನ್ನೆಲ್ಲಾ ಮೆಟ್ಟಿನಿಂತು ಯಶಸ್ವಿಯಾಗಿ ಟೂರ್ನಿ ನಡೆಸಿದ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರಿಗೆ ೨೦೨೩ ನೇ ಸಾಲಿನ ಸ್ಪೋರ್ಟ್ಸ್‌ ಬಿಸಿನೆಸ್‌ ಲೀಡರ್‌ ಆಫ್‌ ದಿ ಇಯರ್‌ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಈ ಸುದ್ದಿಯನ್ನು ಬಿಸಿಸಿಐ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು. ‘2023 ರ ಸ್ಪೋರ್ಟ್ಸ್ ಬಿಸಿನೆಸ್ ಲೀಡರ್ ಆಫ್​ ದಿ ಇಯರ್ ಪ್ರಶಸ್ತಿಗೆ ಭಾಜನರಾದ ಬಿಸಿಸಿಐ ಗೌರವ ಕಾರ್ಯದರ್ಶಿ ಜಯ್ ಶಾ ಅವರಿಗೆ ಅಭಿನಂದನೆಗಳು. ಕ್ರೀಡಾ ಆಡಳಿತದಲ್ಲಿ ಈ ವಿಶೇಷ ಗೌರವವನ್ನು ಪಡೆದ ಮೊದಲ ವ್ಯಕ್ತಿ ಜಯ್ ಶಾ. ಅವರು ನಿಜವಾಗಿಯೂ ಈ ಗೌರವಕ್ಕೆ ಅರ್ಹರು ಎಂದು ಬರೆದುಕೊಂಡಿದೆ.

2019 ರಲ್ಲಿ ಬಿಸಿಸಿಐ ಕಾರ್ಯದರ್ಶಿಯಾಗಿ ಜಯ್ ಶಾ ಆಯ್ಕೆಯಾದರು. ಇತ್ತೀಚೆಗೆ ಮುಕ್ತಾಯಗೊಂಡ 2023ರ ಏಕದಿನ ವಿಶ್ವಕಪ್ ಮತ್ತು ಶ್ರೀಲಂಕಾ ಹಾಗೂ ಪಾಕಿಸ್ತಾನದ ಜಂಟಿ ಆತಿಥ್ಯದಲ್ಲಿ ನಡೆದ ಏಷ್ಯಾಕಪ್ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದ ಕೀರ್ತಿ ಶಾ ಅವರಿಗೆ ಸಲ್ಲುತ್ತದೆ. ಇದೇ ಕಾರಣಕ್ಕೆ ಅವರಿಗೆ 2023ರ ವರ್ಷದ ಕ್ರೀಡಾ ಉದ್ಯಮ ನಾಯಕ ಪ್ರಶಸ್ತಿ ಒಲಿದಿದೆ.

ಜಯ್ ಶಾ ತಮ್ಮ ನಾಯಕತ್ವದ ಗುಣಗಳಿಂದ ವಿಶ್ವ ಕ್ರಿಕೆಟ್‌ನ ಮೇಲೂ ಪ್ರಭಾವ ಬೀರಿದರು. ಒಲಿಂಪಿಕ್ಸ್‌ಗೆ ಕ್ರಿಕೆಟ್ ಸೇರ್ಪಡೆಗೊಳ್ಳುವಲ್ಲಿ ಶಾ ಪ್ರಮುಖ ಪಾತ್ರ ವಹಿಸಿದ್ದಾರೆ. ಕ್ರಿಕೆಟ್‌ಗೆ ಅವರ ಸೇವೆಯನ್ನು ಗುರುತಿಸಿ ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಅವರನ್ನು ಅತ್ಯುತ್ತಮ ಕ್ರೀಡಾ ಉದ್ಯಮ ನಾಯಕ ಎಂದು ಗುರುತಿಸಿದೆ.

ಪಾಕಿಸ್ತಾನದ ಆತಿಥ್ಯದಲ್ಲಿ ನಡೆದಿದ್ದ ಏಷ್ಯಾಕಪ್​ ಟೂರ್ನಿಯ ಭಾರತದ ಪಂದ್ಯವನ್ನು ತಟಸ್ಥ ತಾಣದಲ್ಲೇ ನಡೆಸಬೇಕೆಂದು ಪಟ್ಟು ಹಿಡಿದಿದ್ದ ಜಯ್​ ಶಾ ಇದರಲ್ಲಿ ಯಶಸ್ಸು ಕೂಡ ಕಂಡಿದ್ದರು. ಅದರಂತೆ ಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದಿತ್ತು. ಯಾವುದೇ ಒಂದು ನಿರ್ಧಾರವನ್ನು ಕೈಗೊಂಡರೂ ಅದನ್ನು ಸಾಧಿಸುವವರೆಗೆ ಛಲ ಬಿಡದ ಅವರು ಕ್ರಿಕೆಟ್​ ಕ್ಷೇತ್ರದಲ್ಲಿ ಅನೇಕ ಹೊಸ ಪ್ರಯೋಗಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ.

andolanait

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

2 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

2 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

2 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

2 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

2 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

3 hours ago