ಕ್ರೀಡೆ

ಟೆಸ್ಟ್‌ ಕ್ರಿಕೆಟ್‌ನಲ್ಲಿ 34ನೇ ಶತಕ ಬಾರಿಸಿ ಹಲವು ದಾಖಲೆ ಪುಡಿಗಟ್ಟಿದ ರೂಟ್‌!

ಲಂಡನ್‌: ತವರಿನಂಗಳದಲ್ಲಿ ಶ್ರೀಲಂಕಾ ವಿರುದ್ಧ ನಡೆಯತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಬ್ಯಾಟರ್‌ ಜೋ ರೂಟ್‌ ಅವರು ಹಲವು ದಾಖಲೆಗಳನ್ನು ನಿರ್ಮಿಸಿ, ಹಿರಿಯ ಕ್ರಿಕೆಟ್‌ ಆಟಗಾರರ ದಾಖಲೆಗಳನ್ನು ಪುಡಿಗಟ್ಟಿದ್ದಾರೆ.

ಶ್ರೀಲಂಕಾ ವಿರುದ್ಧದ ಪಂದ್ಯ ಒಂದರಲ್ಲಿ ಎರಡೂ ಇನ್ನಿಂಗ್ಸ್‌ನಲ್ಲಿ ಎರಡು ಸೆಂಚುರಿ (143 ಮತ್ತು 103ರನ್‌) ದಾಖಲಿಸಿದ ರೂಟ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ ತಮ್ಮ ವೈಯಕ್ತಿಕ 34ನೇ ಶತಕ ಬಾರಿಸಿದರು. ಈ ಶತಕದೊಂದಿಗೆ ಹಲವು ವಿಶ್ವ ದಾಖಲೆಗಳನ್ನು ಸಹಾ ರೂಟ್‌ ನಿರ್ಮಿಸಿದರು.

ಇಂಗ್ಲೆಂಡ್‌ನ ಮಾಜಿ ಕ್ಯಾಪ್ಟನ್‌ ಅಲಿಸ್ಟಾರ್‌ ಕುಕ್‌ ಅವರ ಇಂಗ್ಲೆಂಡ್‌ ಪರ ಅತೀಹೆಚ್ಚು ಶತಕ ದಾಖಲಿಸಿದ (33 ಶತಕ) ರೆಕಾರ್ಡ್‌ನ್ನು ರೂಟ್‌ ಮುರಿದು ನೂತನ ದಾಖಲೆ ನಿರ್ಮಿಸಿದರು. ಇಂಗ್ಲೆಂಡ್‌ ಪರ ವೈಯಕ್ತಿಕ ಗರಿಷ್ಠ ಸೆಂಚುರಿ ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆ ರೂಟ್‌ ಪಾಲಾಯಿತು.

ಇದರೊಂದಿಗೆ ಕ್ರಿಕೆಟ್‌ ದಿಗ್ಗಜರಾದ ಸುನೀಲ್‌ ಗವಾಸ್ಕರ್‌, ಮಹೇಲಾ ಜಯವರ್ಧನೆ, ಬ್ರಿಯಾನ್‌ ಲಾರಾ, ಯೂನಿಸ್‌ ಖಾನ್‌ ಅವರ ಹಲವು ದಾಖಲೆಗಳನ್ನು ಪುಡಿಗಟ್ಟಿದರು. ಇನ್ನು ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೆಚ್ಚು ಶತಕ ದಾಖಲಿಸಿದ ಆಟಗಾರ ಎಂಬ ದಾಖಲೆ ಸಚಿನ್‌ ತೆಂಡುಲ್ಕರ್‌ (51 ಶತಕ) ಅವರ ಹೆಸರಿನಲ್ಲಿದೆ.

ಇನ್ನು ಸಕ್ರಿಯ ಆಟಗಾರರ ಪೈಕಿ ಅತಿಹೆಚ್ಚು ಶತಕ ದಾಖಲಿಸಿದ ದಾಖಲೆ ರೂಟ್‌ ಹೆಸರಿನಲ್ಲಿದೆ. ರೂಟ್‌ 34 ಶತಕ ಬಾರಿಸಿ ಅಗ್ರಸ್ಥಾನದಲ್ಲಿದ್ದೇ, ನಂತರದ ಸ್ಥಾನದಲ್ಲಿ ನ್ಯೂಜಿಲೆಂಡ್ಸ್‌ನ ಕೇನ್‌ ವಿಲಿಯಮ್ಸ್‌ 32 ಶತಕ, ಆಸೀಸ್‌ನ ಸ್ಟೀವ್‌ ಸ್ಮಿತ್‌ 32 ಶತಕ ಹಾಗೂ ಭಾರತದ ವಿರಾಟ್‌ ಕೊಹ್ಲಿ 29 ಶತಕ ದಾಖಲಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

9 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

9 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

9 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

9 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

10 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

11 hours ago