ಕ್ರೀಡೆ

ಟೆಸ್ಟ್‌ ಕ್ರಿಕೆಟ್‌ನಲ್ಲಿ 34ನೇ ಶತಕ ಬಾರಿಸಿ ಹಲವು ದಾಖಲೆ ಪುಡಿಗಟ್ಟಿದ ರೂಟ್‌!

ಲಂಡನ್‌: ತವರಿನಂಗಳದಲ್ಲಿ ಶ್ರೀಲಂಕಾ ವಿರುದ್ಧ ನಡೆಯತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಬ್ಯಾಟರ್‌ ಜೋ ರೂಟ್‌ ಅವರು ಹಲವು ದಾಖಲೆಗಳನ್ನು ನಿರ್ಮಿಸಿ, ಹಿರಿಯ ಕ್ರಿಕೆಟ್‌ ಆಟಗಾರರ ದಾಖಲೆಗಳನ್ನು ಪುಡಿಗಟ್ಟಿದ್ದಾರೆ.

ಶ್ರೀಲಂಕಾ ವಿರುದ್ಧದ ಪಂದ್ಯ ಒಂದರಲ್ಲಿ ಎರಡೂ ಇನ್ನಿಂಗ್ಸ್‌ನಲ್ಲಿ ಎರಡು ಸೆಂಚುರಿ (143 ಮತ್ತು 103ರನ್‌) ದಾಖಲಿಸಿದ ರೂಟ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ ತಮ್ಮ ವೈಯಕ್ತಿಕ 34ನೇ ಶತಕ ಬಾರಿಸಿದರು. ಈ ಶತಕದೊಂದಿಗೆ ಹಲವು ವಿಶ್ವ ದಾಖಲೆಗಳನ್ನು ಸಹಾ ರೂಟ್‌ ನಿರ್ಮಿಸಿದರು.

ಇಂಗ್ಲೆಂಡ್‌ನ ಮಾಜಿ ಕ್ಯಾಪ್ಟನ್‌ ಅಲಿಸ್ಟಾರ್‌ ಕುಕ್‌ ಅವರ ಇಂಗ್ಲೆಂಡ್‌ ಪರ ಅತೀಹೆಚ್ಚು ಶತಕ ದಾಖಲಿಸಿದ (33 ಶತಕ) ರೆಕಾರ್ಡ್‌ನ್ನು ರೂಟ್‌ ಮುರಿದು ನೂತನ ದಾಖಲೆ ನಿರ್ಮಿಸಿದರು. ಇಂಗ್ಲೆಂಡ್‌ ಪರ ವೈಯಕ್ತಿಕ ಗರಿಷ್ಠ ಸೆಂಚುರಿ ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆ ರೂಟ್‌ ಪಾಲಾಯಿತು.

ಇದರೊಂದಿಗೆ ಕ್ರಿಕೆಟ್‌ ದಿಗ್ಗಜರಾದ ಸುನೀಲ್‌ ಗವಾಸ್ಕರ್‌, ಮಹೇಲಾ ಜಯವರ್ಧನೆ, ಬ್ರಿಯಾನ್‌ ಲಾರಾ, ಯೂನಿಸ್‌ ಖಾನ್‌ ಅವರ ಹಲವು ದಾಖಲೆಗಳನ್ನು ಪುಡಿಗಟ್ಟಿದರು. ಇನ್ನು ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೆಚ್ಚು ಶತಕ ದಾಖಲಿಸಿದ ಆಟಗಾರ ಎಂಬ ದಾಖಲೆ ಸಚಿನ್‌ ತೆಂಡುಲ್ಕರ್‌ (51 ಶತಕ) ಅವರ ಹೆಸರಿನಲ್ಲಿದೆ.

ಇನ್ನು ಸಕ್ರಿಯ ಆಟಗಾರರ ಪೈಕಿ ಅತಿಹೆಚ್ಚು ಶತಕ ದಾಖಲಿಸಿದ ದಾಖಲೆ ರೂಟ್‌ ಹೆಸರಿನಲ್ಲಿದೆ. ರೂಟ್‌ 34 ಶತಕ ಬಾರಿಸಿ ಅಗ್ರಸ್ಥಾನದಲ್ಲಿದ್ದೇ, ನಂತರದ ಸ್ಥಾನದಲ್ಲಿ ನ್ಯೂಜಿಲೆಂಡ್ಸ್‌ನ ಕೇನ್‌ ವಿಲಿಯಮ್ಸ್‌ 32 ಶತಕ, ಆಸೀಸ್‌ನ ಸ್ಟೀವ್‌ ಸ್ಮಿತ್‌ 32 ಶತಕ ಹಾಗೂ ಭಾರತದ ವಿರಾಟ್‌ ಕೊಹ್ಲಿ 29 ಶತಕ ದಾಖಲಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

22 mins ago

ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…

23 mins ago

ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…

41 mins ago

ಅಜಿತ್‌ ಪವಾರ್‌ ಸಾವು: ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ…

1 hour ago

ಹಿರಿಯ ಸಹೋದರನನ್ನು ಕಳೆದುಕೊಂಡಂತಾಗಿದೆ: ಡಿಸಿಎಂ ಏಕನಾಥ್‌ ಶಿಂಧೆ

ಮಹಾರಾಷ್ಟ್ರ: ಡಿಸಿಎಂ ಅಜಿತ್‌ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…

2 hours ago

ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧ: ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ದಲಿತರು, ಹಿಂದುಳಿದವರು, ಆದಿವಾಸಿಗಳು ಸೇರಿದಂತೆ ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…

2 hours ago