ಕ್ರೀಡೆ

ಟೆಸ್ಟ್‌ ಕ್ರಿಕೆಟ್‌ನಲ್ಲಿ 34ನೇ ಶತಕ ಬಾರಿಸಿ ಹಲವು ದಾಖಲೆ ಪುಡಿಗಟ್ಟಿದ ರೂಟ್‌!

ಲಂಡನ್‌: ತವರಿನಂಗಳದಲ್ಲಿ ಶ್ರೀಲಂಕಾ ವಿರುದ್ಧ ನಡೆಯತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಬ್ಯಾಟರ್‌ ಜೋ ರೂಟ್‌ ಅವರು ಹಲವು ದಾಖಲೆಗಳನ್ನು ನಿರ್ಮಿಸಿ, ಹಿರಿಯ ಕ್ರಿಕೆಟ್‌ ಆಟಗಾರರ ದಾಖಲೆಗಳನ್ನು ಪುಡಿಗಟ್ಟಿದ್ದಾರೆ.

ಶ್ರೀಲಂಕಾ ವಿರುದ್ಧದ ಪಂದ್ಯ ಒಂದರಲ್ಲಿ ಎರಡೂ ಇನ್ನಿಂಗ್ಸ್‌ನಲ್ಲಿ ಎರಡು ಸೆಂಚುರಿ (143 ಮತ್ತು 103ರನ್‌) ದಾಖಲಿಸಿದ ರೂಟ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ ತಮ್ಮ ವೈಯಕ್ತಿಕ 34ನೇ ಶತಕ ಬಾರಿಸಿದರು. ಈ ಶತಕದೊಂದಿಗೆ ಹಲವು ವಿಶ್ವ ದಾಖಲೆಗಳನ್ನು ಸಹಾ ರೂಟ್‌ ನಿರ್ಮಿಸಿದರು.

ಇಂಗ್ಲೆಂಡ್‌ನ ಮಾಜಿ ಕ್ಯಾಪ್ಟನ್‌ ಅಲಿಸ್ಟಾರ್‌ ಕುಕ್‌ ಅವರ ಇಂಗ್ಲೆಂಡ್‌ ಪರ ಅತೀಹೆಚ್ಚು ಶತಕ ದಾಖಲಿಸಿದ (33 ಶತಕ) ರೆಕಾರ್ಡ್‌ನ್ನು ರೂಟ್‌ ಮುರಿದು ನೂತನ ದಾಖಲೆ ನಿರ್ಮಿಸಿದರು. ಇಂಗ್ಲೆಂಡ್‌ ಪರ ವೈಯಕ್ತಿಕ ಗರಿಷ್ಠ ಸೆಂಚುರಿ ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆ ರೂಟ್‌ ಪಾಲಾಯಿತು.

ಇದರೊಂದಿಗೆ ಕ್ರಿಕೆಟ್‌ ದಿಗ್ಗಜರಾದ ಸುನೀಲ್‌ ಗವಾಸ್ಕರ್‌, ಮಹೇಲಾ ಜಯವರ್ಧನೆ, ಬ್ರಿಯಾನ್‌ ಲಾರಾ, ಯೂನಿಸ್‌ ಖಾನ್‌ ಅವರ ಹಲವು ದಾಖಲೆಗಳನ್ನು ಪುಡಿಗಟ್ಟಿದರು. ಇನ್ನು ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೆಚ್ಚು ಶತಕ ದಾಖಲಿಸಿದ ಆಟಗಾರ ಎಂಬ ದಾಖಲೆ ಸಚಿನ್‌ ತೆಂಡುಲ್ಕರ್‌ (51 ಶತಕ) ಅವರ ಹೆಸರಿನಲ್ಲಿದೆ.

ಇನ್ನು ಸಕ್ರಿಯ ಆಟಗಾರರ ಪೈಕಿ ಅತಿಹೆಚ್ಚು ಶತಕ ದಾಖಲಿಸಿದ ದಾಖಲೆ ರೂಟ್‌ ಹೆಸರಿನಲ್ಲಿದೆ. ರೂಟ್‌ 34 ಶತಕ ಬಾರಿಸಿ ಅಗ್ರಸ್ಥಾನದಲ್ಲಿದ್ದೇ, ನಂತರದ ಸ್ಥಾನದಲ್ಲಿ ನ್ಯೂಜಿಲೆಂಡ್ಸ್‌ನ ಕೇನ್‌ ವಿಲಿಯಮ್ಸ್‌ 32 ಶತಕ, ಆಸೀಸ್‌ನ ಸ್ಟೀವ್‌ ಸ್ಮಿತ್‌ 32 ಶತಕ ಹಾಗೂ ಭಾರತದ ವಿರಾಟ್‌ ಕೊಹ್ಲಿ 29 ಶತಕ ದಾಖಲಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

5 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

7 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

8 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

8 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

8 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

9 hours ago