ಕ್ರೀಡೆ

ಟೆಸ್ಟ್‌ ಕ್ರಿಕೆಟ್‌ನಲ್ಲಿ 34ನೇ ಶತಕ ಬಾರಿಸಿ ಹಲವು ದಾಖಲೆ ಪುಡಿಗಟ್ಟಿದ ರೂಟ್‌!

ಲಂಡನ್‌: ತವರಿನಂಗಳದಲ್ಲಿ ಶ್ರೀಲಂಕಾ ವಿರುದ್ಧ ನಡೆಯತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಬ್ಯಾಟರ್‌ ಜೋ ರೂಟ್‌ ಅವರು ಹಲವು ದಾಖಲೆಗಳನ್ನು ನಿರ್ಮಿಸಿ, ಹಿರಿಯ ಕ್ರಿಕೆಟ್‌ ಆಟಗಾರರ ದಾಖಲೆಗಳನ್ನು ಪುಡಿಗಟ್ಟಿದ್ದಾರೆ.

ಶ್ರೀಲಂಕಾ ವಿರುದ್ಧದ ಪಂದ್ಯ ಒಂದರಲ್ಲಿ ಎರಡೂ ಇನ್ನಿಂಗ್ಸ್‌ನಲ್ಲಿ ಎರಡು ಸೆಂಚುರಿ (143 ಮತ್ತು 103ರನ್‌) ದಾಖಲಿಸಿದ ರೂಟ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ ತಮ್ಮ ವೈಯಕ್ತಿಕ 34ನೇ ಶತಕ ಬಾರಿಸಿದರು. ಈ ಶತಕದೊಂದಿಗೆ ಹಲವು ವಿಶ್ವ ದಾಖಲೆಗಳನ್ನು ಸಹಾ ರೂಟ್‌ ನಿರ್ಮಿಸಿದರು.

ಇಂಗ್ಲೆಂಡ್‌ನ ಮಾಜಿ ಕ್ಯಾಪ್ಟನ್‌ ಅಲಿಸ್ಟಾರ್‌ ಕುಕ್‌ ಅವರ ಇಂಗ್ಲೆಂಡ್‌ ಪರ ಅತೀಹೆಚ್ಚು ಶತಕ ದಾಖಲಿಸಿದ (33 ಶತಕ) ರೆಕಾರ್ಡ್‌ನ್ನು ರೂಟ್‌ ಮುರಿದು ನೂತನ ದಾಖಲೆ ನಿರ್ಮಿಸಿದರು. ಇಂಗ್ಲೆಂಡ್‌ ಪರ ವೈಯಕ್ತಿಕ ಗರಿಷ್ಠ ಸೆಂಚುರಿ ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆ ರೂಟ್‌ ಪಾಲಾಯಿತು.

ಇದರೊಂದಿಗೆ ಕ್ರಿಕೆಟ್‌ ದಿಗ್ಗಜರಾದ ಸುನೀಲ್‌ ಗವಾಸ್ಕರ್‌, ಮಹೇಲಾ ಜಯವರ್ಧನೆ, ಬ್ರಿಯಾನ್‌ ಲಾರಾ, ಯೂನಿಸ್‌ ಖಾನ್‌ ಅವರ ಹಲವು ದಾಖಲೆಗಳನ್ನು ಪುಡಿಗಟ್ಟಿದರು. ಇನ್ನು ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೆಚ್ಚು ಶತಕ ದಾಖಲಿಸಿದ ಆಟಗಾರ ಎಂಬ ದಾಖಲೆ ಸಚಿನ್‌ ತೆಂಡುಲ್ಕರ್‌ (51 ಶತಕ) ಅವರ ಹೆಸರಿನಲ್ಲಿದೆ.

ಇನ್ನು ಸಕ್ರಿಯ ಆಟಗಾರರ ಪೈಕಿ ಅತಿಹೆಚ್ಚು ಶತಕ ದಾಖಲಿಸಿದ ದಾಖಲೆ ರೂಟ್‌ ಹೆಸರಿನಲ್ಲಿದೆ. ರೂಟ್‌ 34 ಶತಕ ಬಾರಿಸಿ ಅಗ್ರಸ್ಥಾನದಲ್ಲಿದ್ದೇ, ನಂತರದ ಸ್ಥಾನದಲ್ಲಿ ನ್ಯೂಜಿಲೆಂಡ್ಸ್‌ನ ಕೇನ್‌ ವಿಲಿಯಮ್ಸ್‌ 32 ಶತಕ, ಆಸೀಸ್‌ನ ಸ್ಟೀವ್‌ ಸ್ಮಿತ್‌ 32 ಶತಕ ಹಾಗೂ ಭಾರತದ ವಿರಾಟ್‌ ಕೊಹ್ಲಿ 29 ಶತಕ ದಾಖಲಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

18 mins ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

36 mins ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

1 hour ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

4 hours ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

6 hours ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

6 hours ago