ಕ್ರೀಡೆ

ಟೆಸ್ಟ್‌ ಕ್ರಿಕೆಟ್‌ನಲ್ಲಿ 34ನೇ ಶತಕ ಬಾರಿಸಿ ಹಲವು ದಾಖಲೆ ಪುಡಿಗಟ್ಟಿದ ರೂಟ್‌!

ಲಂಡನ್‌: ತವರಿನಂಗಳದಲ್ಲಿ ಶ್ರೀಲಂಕಾ ವಿರುದ್ಧ ನಡೆಯತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಬ್ಯಾಟರ್‌ ಜೋ ರೂಟ್‌ ಅವರು ಹಲವು ದಾಖಲೆಗಳನ್ನು ನಿರ್ಮಿಸಿ, ಹಿರಿಯ ಕ್ರಿಕೆಟ್‌ ಆಟಗಾರರ ದಾಖಲೆಗಳನ್ನು ಪುಡಿಗಟ್ಟಿದ್ದಾರೆ.

ಶ್ರೀಲಂಕಾ ವಿರುದ್ಧದ ಪಂದ್ಯ ಒಂದರಲ್ಲಿ ಎರಡೂ ಇನ್ನಿಂಗ್ಸ್‌ನಲ್ಲಿ ಎರಡು ಸೆಂಚುರಿ (143 ಮತ್ತು 103ರನ್‌) ದಾಖಲಿಸಿದ ರೂಟ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ ತಮ್ಮ ವೈಯಕ್ತಿಕ 34ನೇ ಶತಕ ಬಾರಿಸಿದರು. ಈ ಶತಕದೊಂದಿಗೆ ಹಲವು ವಿಶ್ವ ದಾಖಲೆಗಳನ್ನು ಸಹಾ ರೂಟ್‌ ನಿರ್ಮಿಸಿದರು.

ಇಂಗ್ಲೆಂಡ್‌ನ ಮಾಜಿ ಕ್ಯಾಪ್ಟನ್‌ ಅಲಿಸ್ಟಾರ್‌ ಕುಕ್‌ ಅವರ ಇಂಗ್ಲೆಂಡ್‌ ಪರ ಅತೀಹೆಚ್ಚು ಶತಕ ದಾಖಲಿಸಿದ (33 ಶತಕ) ರೆಕಾರ್ಡ್‌ನ್ನು ರೂಟ್‌ ಮುರಿದು ನೂತನ ದಾಖಲೆ ನಿರ್ಮಿಸಿದರು. ಇಂಗ್ಲೆಂಡ್‌ ಪರ ವೈಯಕ್ತಿಕ ಗರಿಷ್ಠ ಸೆಂಚುರಿ ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆ ರೂಟ್‌ ಪಾಲಾಯಿತು.

ಇದರೊಂದಿಗೆ ಕ್ರಿಕೆಟ್‌ ದಿಗ್ಗಜರಾದ ಸುನೀಲ್‌ ಗವಾಸ್ಕರ್‌, ಮಹೇಲಾ ಜಯವರ್ಧನೆ, ಬ್ರಿಯಾನ್‌ ಲಾರಾ, ಯೂನಿಸ್‌ ಖಾನ್‌ ಅವರ ಹಲವು ದಾಖಲೆಗಳನ್ನು ಪುಡಿಗಟ್ಟಿದರು. ಇನ್ನು ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೆಚ್ಚು ಶತಕ ದಾಖಲಿಸಿದ ಆಟಗಾರ ಎಂಬ ದಾಖಲೆ ಸಚಿನ್‌ ತೆಂಡುಲ್ಕರ್‌ (51 ಶತಕ) ಅವರ ಹೆಸರಿನಲ್ಲಿದೆ.

ಇನ್ನು ಸಕ್ರಿಯ ಆಟಗಾರರ ಪೈಕಿ ಅತಿಹೆಚ್ಚು ಶತಕ ದಾಖಲಿಸಿದ ದಾಖಲೆ ರೂಟ್‌ ಹೆಸರಿನಲ್ಲಿದೆ. ರೂಟ್‌ 34 ಶತಕ ಬಾರಿಸಿ ಅಗ್ರಸ್ಥಾನದಲ್ಲಿದ್ದೇ, ನಂತರದ ಸ್ಥಾನದಲ್ಲಿ ನ್ಯೂಜಿಲೆಂಡ್ಸ್‌ನ ಕೇನ್‌ ವಿಲಿಯಮ್ಸ್‌ 32 ಶತಕ, ಆಸೀಸ್‌ನ ಸ್ಟೀವ್‌ ಸ್ಮಿತ್‌ 32 ಶತಕ ಹಾಗೂ ಭಾರತದ ವಿರಾಟ್‌ ಕೊಹ್ಲಿ 29 ಶತಕ ದಾಖಲಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

7 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

18 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

18 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

18 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

18 hours ago