ಕ್ರೀಡೆ

ಸಚಿನ್‌ ತೆಂಡೂಲ್ಕರ್ ವಿಶ್ವದಾಖಲೆ ಹಿಂದಿಕ್ಕಿದ ಜೋ ರೂಟ್

ನ್ಯೂಜಿಲ್ಯಾಂಡ್‌ ವಿರುದ್ಧ ಮೊದಲ ಟೆಸ್ಟ್‌ ಪಂದ್ಯದ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಅಜೇಯ 23 ರನ್‌ ಬಾರಿಸುವ ಮೂಲಕ ಇಂಗ್ಲೆಂಡ್‌ ಬ್ಯಾಟರ್‌ ಜೋ ರೂಟ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ನ್ಯೂಜಿಲ್ಯಾಂಡ್‌ ವಿರುದ್ದ ಇಂಗ್ಲೆಂಡ್‌ ತಂಡವು 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಕ್ರೈಸ್ಟ್‌ ಚರ್ಚ್‌ನ ಹ್ಯಾಗ್ಲಿ ಮೈದಾನದಲ್ಲಿ ನಡೆದ ಟೆಸ್ಟ್‌ ಪಂದ್ಯದ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಜೋ ರೂಟ್‌ 23 ರನ್ ಆಡುವ ಮೂಲಕ ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿ 4ನೇ ಇನ್ನಿಂಗ್ಸ್‌ನಲ್ಲಿ ಅತ್ಯಧಿಕ ರನ್‌ ಕಲೆಹಾಕಿ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ದಾಖಲೆಯನ್ನು ಮುರಿದು ಹೊಸ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ರೆಕಾರ್ಡ್‌ ಸಚಿನ್‌ ಹೆಸಲ್ಲಿರಿನಲ್ಲಿತ್ತು. ಮಾಸ್ಟರ್‌ ಬ್ಲಾಸ್ಟರ್‌ ಒಟ್ಟು 60 ಬಾರಿ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಬ್ಯಾಟ್‌ ಬೀಸಿ 1625 ರನ್‌ ಕಲೆ ಹಾಕುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದರು. ಈಗ ಜೋ‌ ರೂಟ್ ಈ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಜೋ ರೂಟ್‌ ಒಟ್ಟು 49 ಬಾರಿ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಬ್ಯಾಟ್‌ ಬೀಸಿದ್ದು, ಇಲ್ಲಿಯವರೆಗೆ 1630 ರನ್‌ ಕಲೆಹಾಕಿದ್ದಾರೆ. 147 ವರ್ಷಗಳ ಟೆಸ್ಟ್‌ ಕ್ರಿಕೆಟ್ ಇತಿಹಾಸವನ್ನು‌ ರೂಟ್‌ ತಮ್ಮದಾಗಿಸಿಕೊಂಡಿದ್ದಾರೆ.

ಜೋ ರೂಟ್‌ 150 ಟೆಸ್ಟ್‌ ಪಂದ್ಯಗಳನ್ನಾಡಿ 12,777 ರನ್‌ ಕಲೆಹಾಕಿದ್ದಾರೆ. ಸಚಿನ್‌ರ 15,921 ರನ್‌ ಮುರಿದು ಮತ್ತೊಂದು ವಿಶ್ವ ದಾಖಲೆ ನಿರ್ಮಿಸಲು ರೂಟ್‌ಗೆ ಇನ್ನೂ 3144 ರನ್‌ಗಳು ಬೇಕಾಗಿದೆ.

ಆಂದೋಲನ ಡೆಸ್ಕ್

Recent Posts

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

19 mins ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

6 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

6 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

7 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

7 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

12 hours ago