ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ 10 ಸಾವಿರ ರನ್‌ ಪೂರ್ಣಗೊಳಿಸಿದ ಜೋಸ್‌ ಬಟ್ಲರ್‌!

ನವದೆಹಲಿ: ಇಂಗ್ಲೆಂಡ್‌ ಟಿ20 ತಂಡದ ನಾಯಕ ಜೋಸ್‌ ಬಟ್ಲರ್ ಅವರು ಚುಟಕು ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಬಟ್ಲರ್‌ 10 ಸಾವಿರ ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ 9ನೇ ಸ್ಥಾನ ಪಡೆದಿದ್ದಾರೆ.

ಪ್ರಸ್ತುತ ವಿಟಾಲಿಟಿ ಬ್ಲಾಸ್ಟ್‌ ಟಿ20 ಟೂರ್ನಿಯಲ್ಲಿ ಲ್ಯಾಂಕಾಷೈರ್‌ ಲೈಟನಿಂಗ್‌ ಪರ ಆಡುತ್ತಿರುವ ಜೋಸ್‌ ಬಟ್ಲರ್‌ ಅವರು ಡರ್ಬಿಷೈರ್‌ ಫಾಲ್ಕನ್ಸ್ ವಿರುದ್ಧದ ಪಂದ್ಯದಲ್ಲಿ 36 ಎಸೆತಗಳಲ್ಲಿ 83 ರನ್‌ ಸಿಡಿಸಿದರು. ಆ ಮೂಲಕ ಲ್ಯಾಂಕಾಷೈರ್‌ ತಂಡದ 27 ರನ್‌ಗಳ ಗೆಲುವಿಗೆ ನೆರವಾದರು. ಈ ಪಂದ್ಯದ ಗೆಲುವಿನ ಮೂಲಕ ಲ್ಯಾಂಕಾಷೈರ್‌ ತಂಡ ಎರಡು ನಿರ್ಣಾಯಕ ಅಂಕಗಳನ್ನು ಪಡೆಯುವ ಮೂಲಕ ಕ್ವಾರ್ಟರ್ ಫೈನಲ್ಸ್‌ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿತು.

https://twitter.com/i/status/1672577388327186433

ಮಳೆ ಅಡ್ಡಿಯಾಗಿದ್ದರಿಂದ ಪಂದ್ಯ ಸ್ವಲ್ಪ ತಡವಾಗಿ ಆರಂಭವಾಗಿತ್ತು. ಜೋಸ್‌ ಬಟ್ಲರ್‌ ಅವರ ಇನಿಂಗ್ಸ್‌ನಲ್ಲಿ 6 ಭರ್ಜರಿ ಸಿಕ್ಸರ್‌ಗಳಿಂದ ಕೂಡಿತ್ತು. ಅಷ್ಟೇ ಅಲ್ಲದೆ ತಮ್ಮ ರಾಷ್ಟ್ರೀಯ ತಂಡದ ಸಹ ಆಟಗಾರ ಲಿಯಾಮ್‌ ಲಿವಿಂಗ್‌ಸ್ಟೋನ್ ಅವರ ಜೊತೆ ಮುರಿಯದ ಎರಡನೇ ವಿಕೆಟ್‌ಗೆ ಜೋಸ್‌ ಬಟ್ಲರ್‌ ಅವರು 41 ಎಸೆತಗಳಲ್ಲಿ 101 ರನ್‌ ಸಿಡಿಸಿದ್ದರು. ಆ ಮೂಲಕ ಲ್ಯಾಂಕಾಷೈರ್‌ ಲೈಟನಿಂಗ್‌ ತಂಡ 15 ಓವರ್‌ಗಳಿಗೆ 4 ವಿಕೆಟ್‌ ನಷ್ಟಕ್ಕೆ 177 ರನ್‌ ಕಲೆ ಹಾಕಿತು.

ಝಮಾನ್‌ ಖಾನ್ ಅವರ ಬೌಲಿಂಗ್‌ನಲ್ಲಿ ಕ್ಯಾಚಿತ್ತು ಔಟ್‌ ಆದ ಜೋಸ್‌ ಬಟ್ಲರ್‌ ಅವರು ಕೇವಲ 17 ಅಂತರದಲ್ಲಿ ಶತಕ ವಂಚಿತರಾದರು. ಇದರ ಹೊರತಾಗಿಯೂ ಅವರು ಟಿ20 ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದರು. ಟಿ20 ಕ್ರಿಕೆಟ್‌ನಲ್ಲಿ 10 ಸಾವಿರ ರನ್‌ ಗಳಿಸಿದ ವಿಶ್ವದ ಒಂಬತ್ತನೇ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ 14,562 ರನ್‌ಗಳನ್ನು ಕಲೆ ಹಾಕಿರುವ ವೆಸ್ಟ್ ಇಂಡೀಸ್‌ ದಿಗ್ಗಜ ಕ್ರಿಸ್‌ ಗೇಲ್ ಅವರು ಈ ಪಟ್ಟಿಯಲ್ಲಿ ಅಗ್ರ ಸ್ಥಾನ ಅಲಂಕರಿಸಿದ್ದಾರೆ. 12,528 ರನ್‌ ಗಳಿಸಿರುವ ಶೋಯೆಬ್‌ ಮಲಿಕ್‌ ಎರಡನೇ ಸ್ಥಾನ ಅಲಂಕರಿಸಿದ್ದಾರೆ. ವಿಂಡೀಸ್‌ನ ಮತ್ತೊಬ್ಬ ದಿಗ್ಗಜ ಕೈರೊನ್‌ ಪೊಲಾರ್ಡ್‌ ಅವರು 12,175 ರನ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನು ಟೀಮ್‌ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ 11,965 ರನ್‌ಗಳೊಂದಿಗೆ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ. ಇನ್ನುಳಿದ ಎರಡು ಸ್ಥಾನಗಳಲ್ಲಿ ಡೇವಿಡ್‌ ವಾರ್ನರ್‌ ಹಾಗೂ ಟೀಮ್‌ ಇಂಡಿಯಾ ನಾಯಕ ರೋಹಿತ್ ಶರ್ಮಾ ಇದ್ದಾರೆ.

ಪಂದ್ಯದ ಬಳಿಕ ಇಎಸ್‌ಪಿಎನ್‌ ಕ್ರಿಕ್‌ಇನ್ಪೋ ಜೊತೆ ಮಾತನಾಡಿದ ಜೋಸ್‌ ಬಟ್ಲರ್‌ ಈ ಸಾಧನೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. “ನನ್ನ ಬ್ಯಾಟಿಂಗ್ ಅನ್ನು ನಾನು ನಿಜವಾಗಿಯೂ ಆನಂದಿಸಿದ್ದೇನೆ. ಲಿಯಾಮ್‌ ಲಿವಿಂಗ್‌ಸ್ಟೋನ್‌ ಜೊತೆ ಬ್ಯಾಟಿಂಗ್ ತುಂಬಾ ಮೋಜಿನಿಂದ ಕೂಡಿತ್ತು. ಅವರು ಬೌಲರ್‌ಗಳ ಮೇಲೆ ಸಾಕಷ್ಟು ಒತ್ತಡವನ್ನು ಹಾಕಿದ್ದರು. ಎಲ್ಲ ಸಮಯದಲ್ಲಿಯೂ ರನ್‌ ರೇಟ್‌ ಏರಿಕೆ ಮಾಡುವಂತೆ ಇವತ್ತಿನ ರಾತ್ರಿ ಕೂಡ ನಾವು ರನ್‌ ರೇಟ್‌ ಏರಿಸಿದ್ದೇವೆ,” ಎಂದು ಹೇಳಿದ್ದಾರೆ.

andolanait

Recent Posts

ಸಭೆ ನಡೆಸುತ್ತಿರುವಾಗಲೇ ತೀವ್ರ ಅಸ್ವಸ್ಥ ; ಡಿಸಿಎಂ ಪವನ್‌ ಕಲ್ಯಾಣ್‌ಗೆ ದಿಢೀರ್‌ ಶಸ್ತ್ರ ಚಿಕಿತ್ಸೆ,

ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…

26 mins ago

ಸರ್ವಾಧಿಕಾರಿ ಬಿಜೆಪಿಯೇ ಮಹಿಳಾ ವಿರೋಧಿ : ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್‌ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…

56 mins ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ ಪ್ರಕರಣ : ಎಸ್‌.ಪಿ.ಮಲ್ಲಿಕಾರ್ಜುನ ಹೇಳಿದ್ದೇನು?

ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ…

1 hour ago

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

ರೋಮ್‌ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…

1 hour ago

ಮೈಸೂರು | ಪಬ್‌ನಲ್ಲಿ ಗಲಾಟೆ ; ಓರ್ವ ಯುವಕನ ಕೊಲೆ

ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ…

2 hours ago

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಹಾವೇರಿ: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು…

2 hours ago