ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ 10 ಸಾವಿರ ರನ್‌ ಪೂರ್ಣಗೊಳಿಸಿದ ಜೋಸ್‌ ಬಟ್ಲರ್‌!

ನವದೆಹಲಿ: ಇಂಗ್ಲೆಂಡ್‌ ಟಿ20 ತಂಡದ ನಾಯಕ ಜೋಸ್‌ ಬಟ್ಲರ್ ಅವರು ಚುಟಕು ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಬಟ್ಲರ್‌ 10 ಸಾವಿರ ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ 9ನೇ ಸ್ಥಾನ ಪಡೆದಿದ್ದಾರೆ.

ಪ್ರಸ್ತುತ ವಿಟಾಲಿಟಿ ಬ್ಲಾಸ್ಟ್‌ ಟಿ20 ಟೂರ್ನಿಯಲ್ಲಿ ಲ್ಯಾಂಕಾಷೈರ್‌ ಲೈಟನಿಂಗ್‌ ಪರ ಆಡುತ್ತಿರುವ ಜೋಸ್‌ ಬಟ್ಲರ್‌ ಅವರು ಡರ್ಬಿಷೈರ್‌ ಫಾಲ್ಕನ್ಸ್ ವಿರುದ್ಧದ ಪಂದ್ಯದಲ್ಲಿ 36 ಎಸೆತಗಳಲ್ಲಿ 83 ರನ್‌ ಸಿಡಿಸಿದರು. ಆ ಮೂಲಕ ಲ್ಯಾಂಕಾಷೈರ್‌ ತಂಡದ 27 ರನ್‌ಗಳ ಗೆಲುವಿಗೆ ನೆರವಾದರು. ಈ ಪಂದ್ಯದ ಗೆಲುವಿನ ಮೂಲಕ ಲ್ಯಾಂಕಾಷೈರ್‌ ತಂಡ ಎರಡು ನಿರ್ಣಾಯಕ ಅಂಕಗಳನ್ನು ಪಡೆಯುವ ಮೂಲಕ ಕ್ವಾರ್ಟರ್ ಫೈನಲ್ಸ್‌ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿತು.

https://twitter.com/i/status/1672577388327186433

ಮಳೆ ಅಡ್ಡಿಯಾಗಿದ್ದರಿಂದ ಪಂದ್ಯ ಸ್ವಲ್ಪ ತಡವಾಗಿ ಆರಂಭವಾಗಿತ್ತು. ಜೋಸ್‌ ಬಟ್ಲರ್‌ ಅವರ ಇನಿಂಗ್ಸ್‌ನಲ್ಲಿ 6 ಭರ್ಜರಿ ಸಿಕ್ಸರ್‌ಗಳಿಂದ ಕೂಡಿತ್ತು. ಅಷ್ಟೇ ಅಲ್ಲದೆ ತಮ್ಮ ರಾಷ್ಟ್ರೀಯ ತಂಡದ ಸಹ ಆಟಗಾರ ಲಿಯಾಮ್‌ ಲಿವಿಂಗ್‌ಸ್ಟೋನ್ ಅವರ ಜೊತೆ ಮುರಿಯದ ಎರಡನೇ ವಿಕೆಟ್‌ಗೆ ಜೋಸ್‌ ಬಟ್ಲರ್‌ ಅವರು 41 ಎಸೆತಗಳಲ್ಲಿ 101 ರನ್‌ ಸಿಡಿಸಿದ್ದರು. ಆ ಮೂಲಕ ಲ್ಯಾಂಕಾಷೈರ್‌ ಲೈಟನಿಂಗ್‌ ತಂಡ 15 ಓವರ್‌ಗಳಿಗೆ 4 ವಿಕೆಟ್‌ ನಷ್ಟಕ್ಕೆ 177 ರನ್‌ ಕಲೆ ಹಾಕಿತು.

ಝಮಾನ್‌ ಖಾನ್ ಅವರ ಬೌಲಿಂಗ್‌ನಲ್ಲಿ ಕ್ಯಾಚಿತ್ತು ಔಟ್‌ ಆದ ಜೋಸ್‌ ಬಟ್ಲರ್‌ ಅವರು ಕೇವಲ 17 ಅಂತರದಲ್ಲಿ ಶತಕ ವಂಚಿತರಾದರು. ಇದರ ಹೊರತಾಗಿಯೂ ಅವರು ಟಿ20 ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದರು. ಟಿ20 ಕ್ರಿಕೆಟ್‌ನಲ್ಲಿ 10 ಸಾವಿರ ರನ್‌ ಗಳಿಸಿದ ವಿಶ್ವದ ಒಂಬತ್ತನೇ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ 14,562 ರನ್‌ಗಳನ್ನು ಕಲೆ ಹಾಕಿರುವ ವೆಸ್ಟ್ ಇಂಡೀಸ್‌ ದಿಗ್ಗಜ ಕ್ರಿಸ್‌ ಗೇಲ್ ಅವರು ಈ ಪಟ್ಟಿಯಲ್ಲಿ ಅಗ್ರ ಸ್ಥಾನ ಅಲಂಕರಿಸಿದ್ದಾರೆ. 12,528 ರನ್‌ ಗಳಿಸಿರುವ ಶೋಯೆಬ್‌ ಮಲಿಕ್‌ ಎರಡನೇ ಸ್ಥಾನ ಅಲಂಕರಿಸಿದ್ದಾರೆ. ವಿಂಡೀಸ್‌ನ ಮತ್ತೊಬ್ಬ ದಿಗ್ಗಜ ಕೈರೊನ್‌ ಪೊಲಾರ್ಡ್‌ ಅವರು 12,175 ರನ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನು ಟೀಮ್‌ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ 11,965 ರನ್‌ಗಳೊಂದಿಗೆ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ. ಇನ್ನುಳಿದ ಎರಡು ಸ್ಥಾನಗಳಲ್ಲಿ ಡೇವಿಡ್‌ ವಾರ್ನರ್‌ ಹಾಗೂ ಟೀಮ್‌ ಇಂಡಿಯಾ ನಾಯಕ ರೋಹಿತ್ ಶರ್ಮಾ ಇದ್ದಾರೆ.

ಪಂದ್ಯದ ಬಳಿಕ ಇಎಸ್‌ಪಿಎನ್‌ ಕ್ರಿಕ್‌ಇನ್ಪೋ ಜೊತೆ ಮಾತನಾಡಿದ ಜೋಸ್‌ ಬಟ್ಲರ್‌ ಈ ಸಾಧನೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. “ನನ್ನ ಬ್ಯಾಟಿಂಗ್ ಅನ್ನು ನಾನು ನಿಜವಾಗಿಯೂ ಆನಂದಿಸಿದ್ದೇನೆ. ಲಿಯಾಮ್‌ ಲಿವಿಂಗ್‌ಸ್ಟೋನ್‌ ಜೊತೆ ಬ್ಯಾಟಿಂಗ್ ತುಂಬಾ ಮೋಜಿನಿಂದ ಕೂಡಿತ್ತು. ಅವರು ಬೌಲರ್‌ಗಳ ಮೇಲೆ ಸಾಕಷ್ಟು ಒತ್ತಡವನ್ನು ಹಾಕಿದ್ದರು. ಎಲ್ಲ ಸಮಯದಲ್ಲಿಯೂ ರನ್‌ ರೇಟ್‌ ಏರಿಕೆ ಮಾಡುವಂತೆ ಇವತ್ತಿನ ರಾತ್ರಿ ಕೂಡ ನಾವು ರನ್‌ ರೇಟ್‌ ಏರಿಸಿದ್ದೇವೆ,” ಎಂದು ಹೇಳಿದ್ದಾರೆ.

andolanait

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

2 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

2 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

2 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

2 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

2 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

2 hours ago