ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ 10 ಸಾವಿರ ರನ್‌ ಪೂರ್ಣಗೊಳಿಸಿದ ಜೋಸ್‌ ಬಟ್ಲರ್‌!

ನವದೆಹಲಿ: ಇಂಗ್ಲೆಂಡ್‌ ಟಿ20 ತಂಡದ ನಾಯಕ ಜೋಸ್‌ ಬಟ್ಲರ್ ಅವರು ಚುಟಕು ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಬಟ್ಲರ್‌ 10 ಸಾವಿರ ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ 9ನೇ ಸ್ಥಾನ ಪಡೆದಿದ್ದಾರೆ.

ಪ್ರಸ್ತುತ ವಿಟಾಲಿಟಿ ಬ್ಲಾಸ್ಟ್‌ ಟಿ20 ಟೂರ್ನಿಯಲ್ಲಿ ಲ್ಯಾಂಕಾಷೈರ್‌ ಲೈಟನಿಂಗ್‌ ಪರ ಆಡುತ್ತಿರುವ ಜೋಸ್‌ ಬಟ್ಲರ್‌ ಅವರು ಡರ್ಬಿಷೈರ್‌ ಫಾಲ್ಕನ್ಸ್ ವಿರುದ್ಧದ ಪಂದ್ಯದಲ್ಲಿ 36 ಎಸೆತಗಳಲ್ಲಿ 83 ರನ್‌ ಸಿಡಿಸಿದರು. ಆ ಮೂಲಕ ಲ್ಯಾಂಕಾಷೈರ್‌ ತಂಡದ 27 ರನ್‌ಗಳ ಗೆಲುವಿಗೆ ನೆರವಾದರು. ಈ ಪಂದ್ಯದ ಗೆಲುವಿನ ಮೂಲಕ ಲ್ಯಾಂಕಾಷೈರ್‌ ತಂಡ ಎರಡು ನಿರ್ಣಾಯಕ ಅಂಕಗಳನ್ನು ಪಡೆಯುವ ಮೂಲಕ ಕ್ವಾರ್ಟರ್ ಫೈನಲ್ಸ್‌ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿತು.

https://twitter.com/i/status/1672577388327186433

ಮಳೆ ಅಡ್ಡಿಯಾಗಿದ್ದರಿಂದ ಪಂದ್ಯ ಸ್ವಲ್ಪ ತಡವಾಗಿ ಆರಂಭವಾಗಿತ್ತು. ಜೋಸ್‌ ಬಟ್ಲರ್‌ ಅವರ ಇನಿಂಗ್ಸ್‌ನಲ್ಲಿ 6 ಭರ್ಜರಿ ಸಿಕ್ಸರ್‌ಗಳಿಂದ ಕೂಡಿತ್ತು. ಅಷ್ಟೇ ಅಲ್ಲದೆ ತಮ್ಮ ರಾಷ್ಟ್ರೀಯ ತಂಡದ ಸಹ ಆಟಗಾರ ಲಿಯಾಮ್‌ ಲಿವಿಂಗ್‌ಸ್ಟೋನ್ ಅವರ ಜೊತೆ ಮುರಿಯದ ಎರಡನೇ ವಿಕೆಟ್‌ಗೆ ಜೋಸ್‌ ಬಟ್ಲರ್‌ ಅವರು 41 ಎಸೆತಗಳಲ್ಲಿ 101 ರನ್‌ ಸಿಡಿಸಿದ್ದರು. ಆ ಮೂಲಕ ಲ್ಯಾಂಕಾಷೈರ್‌ ಲೈಟನಿಂಗ್‌ ತಂಡ 15 ಓವರ್‌ಗಳಿಗೆ 4 ವಿಕೆಟ್‌ ನಷ್ಟಕ್ಕೆ 177 ರನ್‌ ಕಲೆ ಹಾಕಿತು.

ಝಮಾನ್‌ ಖಾನ್ ಅವರ ಬೌಲಿಂಗ್‌ನಲ್ಲಿ ಕ್ಯಾಚಿತ್ತು ಔಟ್‌ ಆದ ಜೋಸ್‌ ಬಟ್ಲರ್‌ ಅವರು ಕೇವಲ 17 ಅಂತರದಲ್ಲಿ ಶತಕ ವಂಚಿತರಾದರು. ಇದರ ಹೊರತಾಗಿಯೂ ಅವರು ಟಿ20 ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದರು. ಟಿ20 ಕ್ರಿಕೆಟ್‌ನಲ್ಲಿ 10 ಸಾವಿರ ರನ್‌ ಗಳಿಸಿದ ವಿಶ್ವದ ಒಂಬತ್ತನೇ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ 14,562 ರನ್‌ಗಳನ್ನು ಕಲೆ ಹಾಕಿರುವ ವೆಸ್ಟ್ ಇಂಡೀಸ್‌ ದಿಗ್ಗಜ ಕ್ರಿಸ್‌ ಗೇಲ್ ಅವರು ಈ ಪಟ್ಟಿಯಲ್ಲಿ ಅಗ್ರ ಸ್ಥಾನ ಅಲಂಕರಿಸಿದ್ದಾರೆ. 12,528 ರನ್‌ ಗಳಿಸಿರುವ ಶೋಯೆಬ್‌ ಮಲಿಕ್‌ ಎರಡನೇ ಸ್ಥಾನ ಅಲಂಕರಿಸಿದ್ದಾರೆ. ವಿಂಡೀಸ್‌ನ ಮತ್ತೊಬ್ಬ ದಿಗ್ಗಜ ಕೈರೊನ್‌ ಪೊಲಾರ್ಡ್‌ ಅವರು 12,175 ರನ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನು ಟೀಮ್‌ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ 11,965 ರನ್‌ಗಳೊಂದಿಗೆ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ. ಇನ್ನುಳಿದ ಎರಡು ಸ್ಥಾನಗಳಲ್ಲಿ ಡೇವಿಡ್‌ ವಾರ್ನರ್‌ ಹಾಗೂ ಟೀಮ್‌ ಇಂಡಿಯಾ ನಾಯಕ ರೋಹಿತ್ ಶರ್ಮಾ ಇದ್ದಾರೆ.

ಪಂದ್ಯದ ಬಳಿಕ ಇಎಸ್‌ಪಿಎನ್‌ ಕ್ರಿಕ್‌ಇನ್ಪೋ ಜೊತೆ ಮಾತನಾಡಿದ ಜೋಸ್‌ ಬಟ್ಲರ್‌ ಈ ಸಾಧನೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. “ನನ್ನ ಬ್ಯಾಟಿಂಗ್ ಅನ್ನು ನಾನು ನಿಜವಾಗಿಯೂ ಆನಂದಿಸಿದ್ದೇನೆ. ಲಿಯಾಮ್‌ ಲಿವಿಂಗ್‌ಸ್ಟೋನ್‌ ಜೊತೆ ಬ್ಯಾಟಿಂಗ್ ತುಂಬಾ ಮೋಜಿನಿಂದ ಕೂಡಿತ್ತು. ಅವರು ಬೌಲರ್‌ಗಳ ಮೇಲೆ ಸಾಕಷ್ಟು ಒತ್ತಡವನ್ನು ಹಾಕಿದ್ದರು. ಎಲ್ಲ ಸಮಯದಲ್ಲಿಯೂ ರನ್‌ ರೇಟ್‌ ಏರಿಕೆ ಮಾಡುವಂತೆ ಇವತ್ತಿನ ರಾತ್ರಿ ಕೂಡ ನಾವು ರನ್‌ ರೇಟ್‌ ಏರಿಸಿದ್ದೇವೆ,” ಎಂದು ಹೇಳಿದ್ದಾರೆ.

andolanait

Recent Posts

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

3 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

4 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

4 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

8 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

9 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

9 hours ago