ವಿಶಾಖಪಟ್ಟಣಂ : ಜೋಶ್ ಇಂಗ್ಲಿಸ್(110) ಅವರ ಆಕರ್ಷಕ ಶತಕದಾಟದ ಬಲದಿಂದ ಆಸೀಸ್ ಭಾರತಕ್ಕೆ 208 ರನ್ಗಳ ಬೃಹತ್ ಗುರಿಯನ್ನು ನೀಡಿದೆ.
ಇಲ್ಲಿನ ವೈ ಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಟಿ-20 ಪಂದ್ಯದಲ್ಲಿ ಭಾರತಕ್ಕೆ ಈ ಬೈಹತ್ ಮೊತ್ತದ ಟಾರ್ಗೆಟ್ ನೀಡಿದೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ತಂಡ 31 ರನ್ ಗಳಿಸಿದ್ದಾಗ ರವಿ ಬಿಷ್ಣೋಯಿ ಅವರ ಮೊದಲ ಓವರ್ನಲ್ಲಿಯೇ ಮ್ಯಾಥ್ಯೂ ಶಾರ್ಟ್ (13) ಕ್ಲೀನ್ ಬೋಲ್ಡ್ ಆಗಿ ಹೊರನಡೆದರು. ನಂತರ ಜೊತೆಯಾದ ಸ್ಟೀವ್ ಸ್ಮಿತ್ ಹಾಗೂ ಜೋಶ್ ಇಂಗ್ಲಿಸ್ ಮುರಿಯದ 130 ರನ್ಗಳ ಜೊತೆಯಾಟ ತಂಡಕ್ಕೆ ಆಸರೆಯಾಯಿತು. ಜೋಶ್ ಇಂಗ್ಲಿಸ್ ತಾವೆದುರಿಸಿದ 50 ಎಸೆತಗಳಲ್ಲಿ 11 ಬೌಂಡರಿ ಹಾಗೂ 8೮ ಸಿಕ್ಸರ್ ಸಹಿತ 110 ರನ್ ಕಲೆ ಹಾಕಿದರು. ಇತ್ತ ಸ್ಟೀವ್ ಸ್ಮಿತ್ 41 ಎಸೆತಗಳಲ್ಲಿ 8 ಬೌಂಡರಿ ಸಹಿತ 52 ರನ್ ಕಲೆಹಾಕಿ ತಂಡ 200 ಗಡಿ ದಾಟಲು ಸಹಕರಿಸಿದರು.
ನಂತರ ಬಂದ ಸ್ಟೋಯ್ನಿಸ್ (7), ಟಿಮ್ ಡೇವಿಡ್(19) ರನ್ ಗಳಿಸಿದರು. ಅಂತಿಮವಾಗಿ ಆಸ್ಟ್ರೇಲಿಯಾ 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 3208ನ್ ಗಳಿಸಿ ಎದುರಾಳಿಗೆ ಸ್ಪರ್ಧಾತ್ಮಕ ಟಾರ್ಗೆಟ್ ನೀಡಿದರು.
ಭಾರತ ಪರ ರವಿ ಬಿಷ್ಣೋಯಿ ಹಾಗೂ ಕನ್ನಡಿಗ ಪ್ರಸಿದ್ಧ್ ಕೃಷ್ಣ ತಲಾ 1 ವಿಕೆಟ್ ಪಡೆದರು.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…