ವಿಶಾಖಪಟ್ಟಣಂ : ಜೋಶ್ ಇಂಗ್ಲಿಸ್(110) ಅವರ ಆಕರ್ಷಕ ಶತಕದಾಟದ ಬಲದಿಂದ ಆಸೀಸ್ ಭಾರತಕ್ಕೆ 208 ರನ್ಗಳ ಬೃಹತ್ ಗುರಿಯನ್ನು ನೀಡಿದೆ.
ಇಲ್ಲಿನ ವೈ ಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಟಿ-20 ಪಂದ್ಯದಲ್ಲಿ ಭಾರತಕ್ಕೆ ಈ ಬೈಹತ್ ಮೊತ್ತದ ಟಾರ್ಗೆಟ್ ನೀಡಿದೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ತಂಡ 31 ರನ್ ಗಳಿಸಿದ್ದಾಗ ರವಿ ಬಿಷ್ಣೋಯಿ ಅವರ ಮೊದಲ ಓವರ್ನಲ್ಲಿಯೇ ಮ್ಯಾಥ್ಯೂ ಶಾರ್ಟ್ (13) ಕ್ಲೀನ್ ಬೋಲ್ಡ್ ಆಗಿ ಹೊರನಡೆದರು. ನಂತರ ಜೊತೆಯಾದ ಸ್ಟೀವ್ ಸ್ಮಿತ್ ಹಾಗೂ ಜೋಶ್ ಇಂಗ್ಲಿಸ್ ಮುರಿಯದ 130 ರನ್ಗಳ ಜೊತೆಯಾಟ ತಂಡಕ್ಕೆ ಆಸರೆಯಾಯಿತು. ಜೋಶ್ ಇಂಗ್ಲಿಸ್ ತಾವೆದುರಿಸಿದ 50 ಎಸೆತಗಳಲ್ಲಿ 11 ಬೌಂಡರಿ ಹಾಗೂ 8೮ ಸಿಕ್ಸರ್ ಸಹಿತ 110 ರನ್ ಕಲೆ ಹಾಕಿದರು. ಇತ್ತ ಸ್ಟೀವ್ ಸ್ಮಿತ್ 41 ಎಸೆತಗಳಲ್ಲಿ 8 ಬೌಂಡರಿ ಸಹಿತ 52 ರನ್ ಕಲೆಹಾಕಿ ತಂಡ 200 ಗಡಿ ದಾಟಲು ಸಹಕರಿಸಿದರು.
ನಂತರ ಬಂದ ಸ್ಟೋಯ್ನಿಸ್ (7), ಟಿಮ್ ಡೇವಿಡ್(19) ರನ್ ಗಳಿಸಿದರು. ಅಂತಿಮವಾಗಿ ಆಸ್ಟ್ರೇಲಿಯಾ 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 3208ನ್ ಗಳಿಸಿ ಎದುರಾಳಿಗೆ ಸ್ಪರ್ಧಾತ್ಮಕ ಟಾರ್ಗೆಟ್ ನೀಡಿದರು.
ಭಾರತ ಪರ ರವಿ ಬಿಷ್ಣೋಯಿ ಹಾಗೂ ಕನ್ನಡಿಗ ಪ್ರಸಿದ್ಧ್ ಕೃಷ್ಣ ತಲಾ 1 ವಿಕೆಟ್ ಪಡೆದರು.
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…
ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…
• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…
ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…
ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸುತ್ತು ಗೋಡೆ ಇಲ್ಲದೇ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲದಂತಾಗಿದೆ. ಕಾಲೇಜಿನ ಪಕ್ಕದ ರಸ್ತೆಗಳಲ್ಲಿ ವಾಹನಗಳು ಚಲಿಸುತ್ತಿರುವ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯದಲ್ಲಿ ಶುಕ್ರವಾರ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ…