ಕ್ರೀಡೆ

ಜೋಶ್‌ ಇಂಗ್ಲಿಸ್‌ ಶತಕ: ಭಾರತಕ್ಕೆ 208 ರನ್ ಟಾರ್ಗೆಟ್‌ ನೀಡಿದ ಆಸೀಸ್‌

ವಿಶಾಖಪಟ್ಟಣಂ : ಜೋಶ್‌ ಇಂಗ್ಲಿಸ್‌(110) ಅವರ ಆಕರ್ಷಕ ಶತಕದಾಟದ ಬಲದಿಂದ ಆಸೀಸ್‌ ಭಾರತಕ್ಕೆ 208 ರನ್‌ಗಳ ಬೃಹತ್‌ ಗುರಿಯನ್ನು ನೀಡಿದೆ.

ಇಲ್ಲಿನ ವೈ ಎಸ್‌ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಟಿ-20 ಪಂದ್ಯದಲ್ಲಿ ಭಾರತಕ್ಕೆ ಈ ಬೈಹತ್‌ ಮೊತ್ತದ ಟಾರ್ಗೆಟ್‌ ನೀಡಿದೆ.

ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ತಂಡ 31 ರನ್‌ ಗಳಿಸಿದ್ದಾಗ ರವಿ ಬಿಷ್ಣೋಯಿ ಅವರ ಮೊದಲ ಓವರ್‌ನಲ್ಲಿಯೇ ಮ್ಯಾಥ್ಯೂ ಶಾರ್ಟ್‌ (13) ಕ್ಲೀನ್‌ ಬೋಲ್ಡ್‌ ಆಗಿ ಹೊರನಡೆದರು. ನಂತರ ಜೊತೆಯಾದ ಸ್ಟೀವ್‌ ಸ್ಮಿತ್‌ ಹಾಗೂ ಜೋಶ್‌ ಇಂಗ್ಲಿಸ್‌ ಮುರಿಯದ 130 ರನ್‌ಗಳ ಜೊತೆಯಾಟ ತಂಡಕ್ಕೆ ಆಸರೆಯಾಯಿತು. ಜೋಶ್‌ ಇಂಗ್ಲಿಸ್‌ ತಾವೆದುರಿಸಿದ 50 ಎಸೆತಗಳಲ್ಲಿ 11 ಬೌಂಡರಿ ಹಾಗೂ 8೮ ಸಿಕ್ಸರ್‌ ಸಹಿತ 110 ರನ್‌ ಕಲೆ ಹಾಕಿದರು. ಇತ್ತ ಸ್ಟೀವ್‌ ಸ್ಮಿತ್‌ 41 ಎಸೆತಗಳಲ್ಲಿ 8 ಬೌಂಡರಿ ಸಹಿತ 52 ರನ್‌ ಕಲೆಹಾಕಿ ತಂಡ 200 ಗಡಿ ದಾಟಲು ಸಹಕರಿಸಿದರು.

ನಂತರ ಬಂದ ಸ್ಟೋಯ್ನಿಸ್‌ (7), ಟಿಮ್‌ ಡೇವಿಡ್‌(19) ರನ್‌ ಗಳಿಸಿದರು. ಅಂತಿಮವಾಗಿ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 3208ನ್‌ ಗಳಿಸಿ ಎದುರಾಳಿಗೆ ಸ್ಪರ್ಧಾತ್ಮಕ ಟಾರ್ಗೆಟ್‌ ನೀಡಿದರು.

ಭಾರತ ಪರ ರವಿ ಬಿಷ್ಣೋಯಿ ಹಾಗೂ ಕನ್ನಡಿಗ ಪ್ರಸಿದ್ಧ್‌ ಕೃಷ್ಣ ತಲಾ 1 ವಿಕೆಟ್‌ ಪಡೆದರು.

andolanait

Recent Posts

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

50 mins ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

1 hour ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

1 hour ago

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

2 hours ago

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…

2 hours ago

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…

2 hours ago