ಕ್ರೀಡೆ

ಜೋಶ್‌ ಇಂಗ್ಲಿಸ್‌ ಶತಕ: ಭಾರತಕ್ಕೆ 208 ರನ್ ಟಾರ್ಗೆಟ್‌ ನೀಡಿದ ಆಸೀಸ್‌

ವಿಶಾಖಪಟ್ಟಣಂ : ಜೋಶ್‌ ಇಂಗ್ಲಿಸ್‌(110) ಅವರ ಆಕರ್ಷಕ ಶತಕದಾಟದ ಬಲದಿಂದ ಆಸೀಸ್‌ ಭಾರತಕ್ಕೆ 208 ರನ್‌ಗಳ ಬೃಹತ್‌ ಗುರಿಯನ್ನು ನೀಡಿದೆ.

ಇಲ್ಲಿನ ವೈ ಎಸ್‌ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಟಿ-20 ಪಂದ್ಯದಲ್ಲಿ ಭಾರತಕ್ಕೆ ಈ ಬೈಹತ್‌ ಮೊತ್ತದ ಟಾರ್ಗೆಟ್‌ ನೀಡಿದೆ.

ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ತಂಡ 31 ರನ್‌ ಗಳಿಸಿದ್ದಾಗ ರವಿ ಬಿಷ್ಣೋಯಿ ಅವರ ಮೊದಲ ಓವರ್‌ನಲ್ಲಿಯೇ ಮ್ಯಾಥ್ಯೂ ಶಾರ್ಟ್‌ (13) ಕ್ಲೀನ್‌ ಬೋಲ್ಡ್‌ ಆಗಿ ಹೊರನಡೆದರು. ನಂತರ ಜೊತೆಯಾದ ಸ್ಟೀವ್‌ ಸ್ಮಿತ್‌ ಹಾಗೂ ಜೋಶ್‌ ಇಂಗ್ಲಿಸ್‌ ಮುರಿಯದ 130 ರನ್‌ಗಳ ಜೊತೆಯಾಟ ತಂಡಕ್ಕೆ ಆಸರೆಯಾಯಿತು. ಜೋಶ್‌ ಇಂಗ್ಲಿಸ್‌ ತಾವೆದುರಿಸಿದ 50 ಎಸೆತಗಳಲ್ಲಿ 11 ಬೌಂಡರಿ ಹಾಗೂ 8೮ ಸಿಕ್ಸರ್‌ ಸಹಿತ 110 ರನ್‌ ಕಲೆ ಹಾಕಿದರು. ಇತ್ತ ಸ್ಟೀವ್‌ ಸ್ಮಿತ್‌ 41 ಎಸೆತಗಳಲ್ಲಿ 8 ಬೌಂಡರಿ ಸಹಿತ 52 ರನ್‌ ಕಲೆಹಾಕಿ ತಂಡ 200 ಗಡಿ ದಾಟಲು ಸಹಕರಿಸಿದರು.

ನಂತರ ಬಂದ ಸ್ಟೋಯ್ನಿಸ್‌ (7), ಟಿಮ್‌ ಡೇವಿಡ್‌(19) ರನ್‌ ಗಳಿಸಿದರು. ಅಂತಿಮವಾಗಿ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 3208ನ್‌ ಗಳಿಸಿ ಎದುರಾಳಿಗೆ ಸ್ಪರ್ಧಾತ್ಮಕ ಟಾರ್ಗೆಟ್‌ ನೀಡಿದರು.

ಭಾರತ ಪರ ರವಿ ಬಿಷ್ಣೋಯಿ ಹಾಗೂ ಕನ್ನಡಿಗ ಪ್ರಸಿದ್ಧ್‌ ಕೃಷ್ಣ ತಲಾ 1 ವಿಕೆಟ್‌ ಪಡೆದರು.

andolanait

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

6 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

6 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

7 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

7 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

12 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

15 hours ago