ಕ್ರೀಡೆ

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ದಾಖಲೆ ನಿರ್ಮಿಸಿದ ಕನ್ನಡಿಗ

ಶಿವಮೊಗ್ಗ: 19 ವರ್ಷದೊಳಗಿನವರ ಕ್ರಿಕೆಟ್ ಫೈನಲ್ ಸೋಮವಾರ ಕೂಚ್ ಬಿಹಾರ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮುಂಬೈ ವಿರುದ್ಧ ಕರ್ನಾಟಕದ ಯುವ ಬ್ಯಾಟರ್ ಪ್ರಖರ್ ಚತುರ್ವೇದಿ ಅಮೋಘ ಪ್ರದರ್ಶನ ನೀಡಿದರು.

ಪಂದ್ಯದಲ್ಲಿ ಅಜೇಯ 404 ರನ್ ಗಳಿಸುವ ಮೂಲಕ ಪ್ರಖರ್ ಚಾರಿತ್ರಿಕ ದಾಖಲೆ ನಿರ್ಮಿಸಿದರು.

ನಾಲ್ಕು ದಿನಗಳ ಈ ಪಂದ್ಯದಲ್ಲಿ 46 ಬೌಂಡರಿ ಹಾಗೂ ಮೂರು ಸಿಕ್ಸ‌ರ್ ಗಳೊಂದಿಗೆ 404 ರನ್ ಗಳಿಸಿದ ಪ್ರಖರ್, ಅಜೇಯವಾಗುಳಿದರು. ಇದರ ಬೆನ್ನಿಗೇ ಕರ್ನಾಟಕ ತಂಡವು ತಂಡದ ಮೊತ್ತ 8 ವಿಕೆಟ್ ನಷ್ಟಕ್ಕೆ 890 ರನ್ ಆಗಿದ್ದಾಗ ಡಿಕೇರ್ ಮಾಡಿಕೊಂಡಿತು.

ಶಿವಮೊಗ್ಗದ ಕೆಎಸ್‌ಸಿಎ ನವುಲೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಮುಂಬೈ ವಿರುದ್ಧ ಬೃಹತ್ 510 ರನ್ ಗಳ ಮುನ್ನಡೆ ಸಾಧಿಸಿದ ಕರ್ನಾಟಕ ತಂಡವು, ನಾಲ್ಕನೆಯ ದಿನ ಡಿಪ್ಲೇರ್ ಮಾಡಿಕೊಂಡಿತು. ನಂತರ ಉಭಯ ತಂಡಗಳು ಡ್ರಾಗೆ ಸಹಮತ ವ್ಯಕ್ತಪಡಿಸಿದವು. ಮೊದಲ ಇನಿಂಗ್ಸ್ ಮುನ್ನಡೆಯ ಆಧಾರದಲ್ಲಿ ಕರ್ನಾಟಕ ತಂಡವು ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿತು.

ಇದಕ್ಕೂ ಮುನ್ನ ಟಾಸ್ ಗೆದ್ದ ಕರ್ನಾಟಕ ತಂಡವು ಮುಂಬೈ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು. ಆಯುಷ್ ಮಹಾತ್ರೆ ಅವರ 145 ರನ್ ಗಳ ನೆರವಿನಿಂದ ಮುಂಬೈ ತಂಡವು 380 ರನ್ ಗಳ ಉತ್ತಮ ಮೊತ್ತವನ್ನೇ ಪೇರಿಸಿತು.

ಕರ್ನಾಟಕದ ಪರವಾಗಿ ಹಾರ್ದಿಕ್ ರಾಜ್ 80 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಹಾಗೂ ಸಮರ್ಥ್ ಎನ್. ತಲಾ ಎರಡು ವಿಕೆಟ್ ಪಡೆದರು.

ಆದರೆ, ಪ್ರಖ‌ರ್ ಚತುರ್ವೇದಿಯ ಅಜೇಯ 404 ರನ್ ಗಳ ಕಾರಣಕ್ಕೆ ಪಂದ್ಯದ ಲೆಕ್ಕಾಚಾರವೆಲ್ಲ ತಲೆಕೆಳಕಾಗಿ, ಕರ್ನಾಟಕ ತಂಡವು ಫೈನಲ್ ಪಂದ್ಯದ ಮೇಲೆ ಬಲವಾದ ನಿಯಂತ್ರಣ ಸಾಧಿಸಿತು. ಕೂಚ್ ಬಿಹಾರ್ ಕ್ರೀಡಾಕೂಟದ ಫೈನಲ್ ಪಂದ್ಯದಲ್ಲಿ 400ಕ್ಕೂ ಹೆಚ್ಚು ರನ್ ಗಳಿಸಿದ ಪ್ರಪ್ರಥಮ ಬ್ಯಾಟರ್ ಎಂಬ ಹಿರಿಮೆಗೆ ಪ್ರಖರ್ ಪಾತ್ರವಾದರು.

ಕರ್ನಾಟಕ ತಂಡದ ಮತ್ತೊಬ್ಬ ಬ್ಯಾಟರ್ ಹರ್ಶಿಲ್ ಧರ್ಮಾನಿ ಕೂಡಾ 169 ರನ್ ಗಳಿಸಿದರಾದರೂ, ಪ್ರಖ‌ರ್ ಅಮೋಘ ಆಟದೆದುರು ಮುಂಬೈ ಪ್ರದರ್ಶನ ನಿಲ್ಲದಾಯಿತು. ಅಂತಿಮವಾಗಿ ಕರ್ನಾಟಕ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

15 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

15 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

15 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

18 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

18 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

18 hours ago