ಕ್ರೀಡೆ

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ದಾಖಲೆ ನಿರ್ಮಿಸಿದ ಕನ್ನಡಿಗ

ಶಿವಮೊಗ್ಗ: 19 ವರ್ಷದೊಳಗಿನವರ ಕ್ರಿಕೆಟ್ ಫೈನಲ್ ಸೋಮವಾರ ಕೂಚ್ ಬಿಹಾರ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮುಂಬೈ ವಿರುದ್ಧ ಕರ್ನಾಟಕದ ಯುವ ಬ್ಯಾಟರ್ ಪ್ರಖರ್ ಚತುರ್ವೇದಿ ಅಮೋಘ ಪ್ರದರ್ಶನ ನೀಡಿದರು.

ಪಂದ್ಯದಲ್ಲಿ ಅಜೇಯ 404 ರನ್ ಗಳಿಸುವ ಮೂಲಕ ಪ್ರಖರ್ ಚಾರಿತ್ರಿಕ ದಾಖಲೆ ನಿರ್ಮಿಸಿದರು.

ನಾಲ್ಕು ದಿನಗಳ ಈ ಪಂದ್ಯದಲ್ಲಿ 46 ಬೌಂಡರಿ ಹಾಗೂ ಮೂರು ಸಿಕ್ಸ‌ರ್ ಗಳೊಂದಿಗೆ 404 ರನ್ ಗಳಿಸಿದ ಪ್ರಖರ್, ಅಜೇಯವಾಗುಳಿದರು. ಇದರ ಬೆನ್ನಿಗೇ ಕರ್ನಾಟಕ ತಂಡವು ತಂಡದ ಮೊತ್ತ 8 ವಿಕೆಟ್ ನಷ್ಟಕ್ಕೆ 890 ರನ್ ಆಗಿದ್ದಾಗ ಡಿಕೇರ್ ಮಾಡಿಕೊಂಡಿತು.

ಶಿವಮೊಗ್ಗದ ಕೆಎಸ್‌ಸಿಎ ನವುಲೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಮುಂಬೈ ವಿರುದ್ಧ ಬೃಹತ್ 510 ರನ್ ಗಳ ಮುನ್ನಡೆ ಸಾಧಿಸಿದ ಕರ್ನಾಟಕ ತಂಡವು, ನಾಲ್ಕನೆಯ ದಿನ ಡಿಪ್ಲೇರ್ ಮಾಡಿಕೊಂಡಿತು. ನಂತರ ಉಭಯ ತಂಡಗಳು ಡ್ರಾಗೆ ಸಹಮತ ವ್ಯಕ್ತಪಡಿಸಿದವು. ಮೊದಲ ಇನಿಂಗ್ಸ್ ಮುನ್ನಡೆಯ ಆಧಾರದಲ್ಲಿ ಕರ್ನಾಟಕ ತಂಡವು ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿತು.

ಇದಕ್ಕೂ ಮುನ್ನ ಟಾಸ್ ಗೆದ್ದ ಕರ್ನಾಟಕ ತಂಡವು ಮುಂಬೈ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು. ಆಯುಷ್ ಮಹಾತ್ರೆ ಅವರ 145 ರನ್ ಗಳ ನೆರವಿನಿಂದ ಮುಂಬೈ ತಂಡವು 380 ರನ್ ಗಳ ಉತ್ತಮ ಮೊತ್ತವನ್ನೇ ಪೇರಿಸಿತು.

ಕರ್ನಾಟಕದ ಪರವಾಗಿ ಹಾರ್ದಿಕ್ ರಾಜ್ 80 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಹಾಗೂ ಸಮರ್ಥ್ ಎನ್. ತಲಾ ಎರಡು ವಿಕೆಟ್ ಪಡೆದರು.

ಆದರೆ, ಪ್ರಖ‌ರ್ ಚತುರ್ವೇದಿಯ ಅಜೇಯ 404 ರನ್ ಗಳ ಕಾರಣಕ್ಕೆ ಪಂದ್ಯದ ಲೆಕ್ಕಾಚಾರವೆಲ್ಲ ತಲೆಕೆಳಕಾಗಿ, ಕರ್ನಾಟಕ ತಂಡವು ಫೈನಲ್ ಪಂದ್ಯದ ಮೇಲೆ ಬಲವಾದ ನಿಯಂತ್ರಣ ಸಾಧಿಸಿತು. ಕೂಚ್ ಬಿಹಾರ್ ಕ್ರೀಡಾಕೂಟದ ಫೈನಲ್ ಪಂದ್ಯದಲ್ಲಿ 400ಕ್ಕೂ ಹೆಚ್ಚು ರನ್ ಗಳಿಸಿದ ಪ್ರಪ್ರಥಮ ಬ್ಯಾಟರ್ ಎಂಬ ಹಿರಿಮೆಗೆ ಪ್ರಖರ್ ಪಾತ್ರವಾದರು.

ಕರ್ನಾಟಕ ತಂಡದ ಮತ್ತೊಬ್ಬ ಬ್ಯಾಟರ್ ಹರ್ಶಿಲ್ ಧರ್ಮಾನಿ ಕೂಡಾ 169 ರನ್ ಗಳಿಸಿದರಾದರೂ, ಪ್ರಖ‌ರ್ ಅಮೋಘ ಆಟದೆದುರು ಮುಂಬೈ ಪ್ರದರ್ಶನ ನಿಲ್ಲದಾಯಿತು. ಅಂತಿಮವಾಗಿ ಕರ್ನಾಟಕ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

andolanait

Recent Posts

ಮೇ.13 ರಿಂದ 3 ದಿನಗಳ ಕಾಲ ಟ್ರಂಪ್‌ ಚೀನಾ ಪ್ರವಾಸ

ವಾಷಿಂಗ್ಟನ್:‌ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇ.13ರಿಂದ 15ರವರೆಗೆ ಚೀನಾಗೆ…

2 mins ago

ʻಪ್ರೀತಿ ಎಲ್ಲಕ್ಕಿಂತ ಶಕ್ತಿಶಾಲಿʼ ವಿಜಯ್‌ ಮುಖ್ಯಮಂತ್ರಿ ಆದ ಬೆನ್ನಲ್ಲೇ ತ್ರಿಶಾ ಪೋಸ್ಟ್‌

ಚೆನ್ನೈ : ಜೋಸೆಫ್‌ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…

42 mins ago

ಚಿನ್ನ ಖರೀದಿ ನಿಲ್ಸಿ ; ಇಂಧನ ಕಡಿಮೆ ಬಳಸಿ : ಬೆಲೆ ಏರಿಕೆ ಮುನ್ಸೂಚನೆ ಕೊಟ್ರಾ ಪ್ರಧಾನಿ ಮೋದಿ?

ಹೈದರಾಬಾದ್‌ : ಅಮೆರಿಕ-ಇರಾನ್‌ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…

2 hours ago

ದ ಗ್ರೇಟ್‌ ನಿಕೋಬಾರ್‌ ಯೋಜನೆ : ವಿಕಾಸವೋ? ವಿನಾಶವೋ?

ಶುಭಾ ಖಟಾವಕರ ಮ್ಹೆತ್ರಸ್‌ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…

3 hours ago

ಕಳೆದ ಚುನಾವಣೆ : ಇಬ್ಬರು ಪರಿಣಿತರ ವಿಶ್ಲೇಷಣೆ

ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…

4 hours ago

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

4 hours ago