ಕ್ರೀಡೆ

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ದಾಖಲೆ ನಿರ್ಮಿಸಿದ ಕನ್ನಡಿಗ

ಶಿವಮೊಗ್ಗ: 19 ವರ್ಷದೊಳಗಿನವರ ಕ್ರಿಕೆಟ್ ಫೈನಲ್ ಸೋಮವಾರ ಕೂಚ್ ಬಿಹಾರ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮುಂಬೈ ವಿರುದ್ಧ ಕರ್ನಾಟಕದ ಯುವ ಬ್ಯಾಟರ್ ಪ್ರಖರ್ ಚತುರ್ವೇದಿ ಅಮೋಘ ಪ್ರದರ್ಶನ ನೀಡಿದರು.

ಪಂದ್ಯದಲ್ಲಿ ಅಜೇಯ 404 ರನ್ ಗಳಿಸುವ ಮೂಲಕ ಪ್ರಖರ್ ಚಾರಿತ್ರಿಕ ದಾಖಲೆ ನಿರ್ಮಿಸಿದರು.

ನಾಲ್ಕು ದಿನಗಳ ಈ ಪಂದ್ಯದಲ್ಲಿ 46 ಬೌಂಡರಿ ಹಾಗೂ ಮೂರು ಸಿಕ್ಸ‌ರ್ ಗಳೊಂದಿಗೆ 404 ರನ್ ಗಳಿಸಿದ ಪ್ರಖರ್, ಅಜೇಯವಾಗುಳಿದರು. ಇದರ ಬೆನ್ನಿಗೇ ಕರ್ನಾಟಕ ತಂಡವು ತಂಡದ ಮೊತ್ತ 8 ವಿಕೆಟ್ ನಷ್ಟಕ್ಕೆ 890 ರನ್ ಆಗಿದ್ದಾಗ ಡಿಕೇರ್ ಮಾಡಿಕೊಂಡಿತು.

ಶಿವಮೊಗ್ಗದ ಕೆಎಸ್‌ಸಿಎ ನವುಲೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಮುಂಬೈ ವಿರುದ್ಧ ಬೃಹತ್ 510 ರನ್ ಗಳ ಮುನ್ನಡೆ ಸಾಧಿಸಿದ ಕರ್ನಾಟಕ ತಂಡವು, ನಾಲ್ಕನೆಯ ದಿನ ಡಿಪ್ಲೇರ್ ಮಾಡಿಕೊಂಡಿತು. ನಂತರ ಉಭಯ ತಂಡಗಳು ಡ್ರಾಗೆ ಸಹಮತ ವ್ಯಕ್ತಪಡಿಸಿದವು. ಮೊದಲ ಇನಿಂಗ್ಸ್ ಮುನ್ನಡೆಯ ಆಧಾರದಲ್ಲಿ ಕರ್ನಾಟಕ ತಂಡವು ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿತು.

ಇದಕ್ಕೂ ಮುನ್ನ ಟಾಸ್ ಗೆದ್ದ ಕರ್ನಾಟಕ ತಂಡವು ಮುಂಬೈ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು. ಆಯುಷ್ ಮಹಾತ್ರೆ ಅವರ 145 ರನ್ ಗಳ ನೆರವಿನಿಂದ ಮುಂಬೈ ತಂಡವು 380 ರನ್ ಗಳ ಉತ್ತಮ ಮೊತ್ತವನ್ನೇ ಪೇರಿಸಿತು.

ಕರ್ನಾಟಕದ ಪರವಾಗಿ ಹಾರ್ದಿಕ್ ರಾಜ್ 80 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಹಾಗೂ ಸಮರ್ಥ್ ಎನ್. ತಲಾ ಎರಡು ವಿಕೆಟ್ ಪಡೆದರು.

ಆದರೆ, ಪ್ರಖ‌ರ್ ಚತುರ್ವೇದಿಯ ಅಜೇಯ 404 ರನ್ ಗಳ ಕಾರಣಕ್ಕೆ ಪಂದ್ಯದ ಲೆಕ್ಕಾಚಾರವೆಲ್ಲ ತಲೆಕೆಳಕಾಗಿ, ಕರ್ನಾಟಕ ತಂಡವು ಫೈನಲ್ ಪಂದ್ಯದ ಮೇಲೆ ಬಲವಾದ ನಿಯಂತ್ರಣ ಸಾಧಿಸಿತು. ಕೂಚ್ ಬಿಹಾರ್ ಕ್ರೀಡಾಕೂಟದ ಫೈನಲ್ ಪಂದ್ಯದಲ್ಲಿ 400ಕ್ಕೂ ಹೆಚ್ಚು ರನ್ ಗಳಿಸಿದ ಪ್ರಪ್ರಥಮ ಬ್ಯಾಟರ್ ಎಂಬ ಹಿರಿಮೆಗೆ ಪ್ರಖರ್ ಪಾತ್ರವಾದರು.

ಕರ್ನಾಟಕ ತಂಡದ ಮತ್ತೊಬ್ಬ ಬ್ಯಾಟರ್ ಹರ್ಶಿಲ್ ಧರ್ಮಾನಿ ಕೂಡಾ 169 ರನ್ ಗಳಿಸಿದರಾದರೂ, ಪ್ರಖ‌ರ್ ಅಮೋಘ ಆಟದೆದುರು ಮುಂಬೈ ಪ್ರದರ್ಶನ ನಿಲ್ಲದಾಯಿತು. ಅಂತಿಮವಾಗಿ ಕರ್ನಾಟಕ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

andolanait

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

3 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

3 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

3 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

3 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

3 hours ago