ಕ್ರೀಡೆ

ಬಿಸಿಸಿಐ ನ ನೂತನ ಅಧ್ಯಕ್ಷರಾಗಿ ಕನ್ನಡಿಗ ರೋಜರ್‌ ಬಿನ್ನಿ ನೇಮಕ

ಭಾರತ ತಂಡದ ಮಾಜಿ ಕ್ರಿಕೆಟಿಗ ಹಾಗೂ 1983ರ ವಿಶ್ವಕಪ್‌ ವಿಜೇತ ತಂಡದ ಸದಸ್ಯರಾಗಿದ್ದ ಕರ್ನಾಟಕದ ರೋಜರ್‌ ಬಿನ್ನಿ ಅವರು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ(ಬಿಸಿಸಿಐ) ನೂತನ ಅಧ್ಯಕ್ಷರಾಗಲಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ ಬಿನ್ನಿ ಸೌರವ್‌ ಗಂಗೂಲಿ ಅವರ ಸ್ಥಾನವನ್ನು ತುಂಬಲಿದ್ದಾರೆಂದು ಬಿಸಿಸಿಐ ಮೂಲಗಳು ತಿಳಿಸಿವೆ. ಜಯ್ ಶಾ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ.

ಬಿಸಿಸಿಐನ ಹಾಲಿ ಅಧ್ಯಕ್ಷರಾದ ಸೌರವ್ ಗಂಗೂಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಇನ್ನು ರಾಜಿವ್ ಶುಕ್ಲಾ ಬಿಸಿಸಿಐ ಉಪಾಧ್ಯಕ್ಷರಾಗಲಿದ್ದು, ಐಪಿಎಲ್ ಅಧ್ಯಕ್ಷರಾಗಿ ಅರುಣ್ ಧುಮಾಲ್ ಇರಲಿದ್ದಾರೆ. ಖಜಾಂಚಿ ಸ್ಥಾನಕ್ಕೆ ಆಶಿಶ್ ಶೆಲರ್ ಆಯ್ಕೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಆದರೆ, ಬಿಸಿಸಿಐ ಕಡೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ರೋಜರ್ ಬಿನ್ನಿ ಈ ಹಿಂದೆ ಬಿಸಿಸಿಐ ಆಯ್ಕೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್‌ 11 ಮತ್ತು 12 ರಂದು ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಬಹುದು. ಅಕ್ಟೋಬರ್‌ 13 ರಂದು ಎಲ್ಲಾ ನಾಮಪತ್ರಗಳ ಪರಿಶೀಲನೆ ಕಾರ್ಯ ಜರುಗಲಿದೆ. ತದನಂತರ ಅಕ್ಟೋಬರ್‌ 14 ರಂದು ಅಭ್ಯರ್ಥಿಗಳು ತಮ್ಮ-ತಮ್ಮ ನಾಮಪತ್ರಗಳನ್ನು ವಾಪಸ್‌ ಪಡೆಯಲು ಅವಕಾಶ ನೀಡಲಾಗಿದೆ. ಅಂದಹಾಗೆ ಬಿಸಿಸಿಐ ಚುನಾವಣೆ ಅಕ್ಟೋಬರ್‌ 18 ರಂದು ಮುಂಬೈನಲ್ಲಿ ನಡೆಯಲಿದೆ.

1955 ಜುಲೈ 19ರಂದು ಜನಿಸಿರುವ ರೋಜರ್ ಬಿನ್ನಿ 1979ರಿಂದ 1987ರವರೆಗೆ ಭಾರತ ಕ್ರಿಕೆಟ್ ತಂಡದ ಸದಸ್ಯರಾಗಿದ್ದರು. ಬಲಗೈ ಬ್ಯಾಟಿಂಗ್ ಶೈಲಿ ಮತ್ತು ಬಲಗೈ ಮಧ್ಯಮ ವೇಗದ ಬೌಲರ್ ಆಗಿದ್ದರು. ತವರು ಅಂಗಣ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ 1979ಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ರೋಜರ್‌ ಬಿನ್ನಿ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ತಮ್ಮ ಚೊಚ್ಚಲ ಟೆಸ್ಟ್‌ ಪಂದ್ಯದಲ್ಲಿ ಅವರು 46 ರನ್‌ ಗಳಿಸಿದ್ದರು. ಆ ಮೂಲಕ ಎಲ್ಲರ ಗಮನ ಸೆಳೆದಿದ್ದರು.

ಭಾರತದ ಪರ 27 ಟೆಸ್ಟ್ ಪಂದ್ಯಗಳನ್ನು ಆಡಿರುವ ರೋಜರ್ ಬಿನ್ನಿ ಬ್ಯಾಟಿಂಗ್‌ನಲ್ಲಿ 23.06 ಸರಾಸರಿಯಲ್ಲಿ 830 ರನ್ ಗಳಿಸಿದ್ದಾರೆ ಮತ್ತು 5 ಅರ್ಧಶತಕ ಬಾರಿಸಿದ್ದಾರೆ. ಇನ್ನು 72 ಏಕದಿನ ಪಂದ್ಯಗಳನ್ನು ಆಡಿರುವ ಅವರು, 16.13 ಸರಾಸರಿಯಲ್ಲಿ 629 ರನ್ ಗಳಿಸಿದ್ದಾರೆ ಮತ್ತು 1 ಅರ್ಧಶತಕ ಬಾರಿಸಿದ್ದಾರೆ. ಬೌಲಿಂಗ್‌ನಲ್ಲಿ 27 ಟೆಸ್ಟ್ ಪಂದ್ಯಗಳಿಂದ 47 ವಿಕೆಟ್ ಪಡೆದುಕೊಂಡಿದ್ದಾರೆ ಮತ್ತು 2 ಬಾರಿ 5 ವಿಕೆಟ್ ಗೊಂಚಲು ಗಳಿಸಿದ್ದಾರೆ. ಇನ್ನು 72 ಏಕದಿನ ಪಂದ್ಯಗಳಿಂದ 77 ವಿಕೆಟ್ ಪಡೆದುಕೊಂಡ ಸಾಧನೆ ಮಾಡಿದ್ದಾರೆ.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

2 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

8 hours ago