ಕ್ರೀಡೆ

ಕನ್ನಡಿಗರ ಹೆಮ್ಮೆಯ ಸ್ಟಾರ್‌ ಕ್ರಿಕಿಟಿಗ ಅನಿಲ್‌ ಕುಂಬ್ಳೆಯ ಹುಟ್ಟು ಹಬ್ಬ..

ಇಂದು ಭಾರತದ ಮಾಜಿ ಸ್ಟಾರ್ ಕ್ರಿಕೆಟಿಗ ಹಾಗೂ ಕನ್ನಡಿಗ ಅನಿಲ್ ಕುಂಬ್ಳೆ 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಟೀಂ ಇಂಡಿಯಾ ಕಂಡ ಲೆಜೆಂಡರಿ ಸ್ಪಿನ್ನರ್​ಗಳಲ್ಲಿ ಕುಂಬ್ಳೆ ಮೊದಲಿಗರು. ಟೆಸ್ಟ್ ಕ್ರಿಕೆಟ್​ನಲ್ಲಿ ಪಾಕ್ ವಿರುದ್ಧದ ಪಂದ್ಯದಲ್ಲಿ ಕುಂಬ್ಳೆ ಮಾಡಿದ್ದ 10 ವಿಕೆಟ್​ಗಳ ದಾಖಲೆಯನ್ನು ಯಾರಾದರು ಮರೆಯುವುದುಂಟ. ಹೀಗೆ ದಶಕಗಳ ಕಾಲ ಟೀಂ ಇಂಡಿಯಾವನ್ನು ಆಳಿದ ಅನಿಲ್ ಕುಂಬ್ಳೆ, ಲೆಗ್ ಸ್ಪಿನ್‌ಗೆ ವೇಗ ಮತ್ತು ಬೌನ್ಸ್ ಸೇರಿಸಿ ಬ್ಯಾಟ್ಸ್‌ಮನ್‌ಗಳನ್ನು ಒತ್ತಡಕ್ಕೆ ಸಿಲುಕಿಸುವಲ್ಲಿ ಮಾಸ್ಟರ್ ಆಗಿದ್ದರು. ಇದರಿಂದಾಗಿಯೇ ಈ ಸ್ಪಿನ್ ಲೋಕದ ಮಾಂತ್ರಿಕನಿಗೆ ‘ಜಂಬೋ’ (Jumbo) ಎಂಬ ಅಡ್ಡ ಹೆಸರು ಕೂಡ ಇದೆ. ಅಷ್ಟಕ್ಕೂ ಕುಂಬ್ಳೆಗೆ ಜಂಬೋ ಎಂದು ಹೆಸರಿಟ್ಟವರು ಯಾರು ಗೊತ್ತ? ಹಾಗೆಯೇ ಈ ಹೆಸರನ್ನು ಅವರಿಗೆ ಯಾಕೆ ಇಡಲಾಯಿತು ಗೊತ್ತ? ಇಲ್ಲಿದೆ ನೋಡಿ ಕುತೂಹಲಕಾರಿ ಮಾಹಿತಿ.

ಕುಂಬ್ಳೆ ತಮ್ಮ 18 ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನದಲ್ಲಿ ಹಲವಾರು ಸ್ಮರಣೀಯ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಏಪ್ರಿಲ್ 1990 ರಲ್ಲಿ ಟೀಂ ಇಂಡಿಯಾ ಪರ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕುಂಬ್ಳೆ ಆ ವರ್ಷದ ಆಗಸ್ಟ್‌ನಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. 132 ಟೆಸ್ಟ್ ಮತ್ತು 271 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಕುಂಬ್ಳೆ ಕ್ರಮವಾಗಿ 619 ಮತ್ತು 337 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಅವರು 132 ಟೆಸ್ಟ್‌ಗಳಲ್ಲಿ 2506 ರನ್ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟೆಸ್ಟ್‌ನಲ್ಲಿ ಅವರ ಬ್ಯಾಟ್‌ನಿಂದ 1 ಶತಕ ಮತ್ತು 5 ಅರ್ಧ ಶತಕಗಳು ಬಂದಿವೆ. ಜೊತೆಗೆ 271 ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಕುಂಬ್ಳೆ 938 ರನ್ ಗಳಿಸಿದ್ದಾರೆ.

ಕುಂಬ್ಳೆ ತಮ್ಮ 18 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನದಲ್ಲಿ ಹಲವಾರು ಸ್ಮರಣೀಯ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಏಪ್ರಿಲ್ 1990 ರಲ್ಲಿ ಟೀಂ ಇಂಡಿಯಾ ಪರ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕುಂಬ್ಳೆ ಆ ವರ್ಷದ ಆಗಸ್ಟ್‌ನಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. 132 ಟೆಸ್ಟ್ ಮತ್ತು 271 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಕುಂಬ್ಳೆ ಕ್ರಮವಾಗಿ 619 ಮತ್ತು 337 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಅವರು 132 ಟೆಸ್ಟ್‌ಗಳಲ್ಲಿ 2506 ರನ್ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟೆಸ್ಟ್‌ನಲ್ಲಿ ಅವರ ಬ್ಯಾಟ್‌ನಿಂದ 1 ಶತಕ ಮತ್ತು 5 ಅರ್ಧ ಶತಕಗಳು ಬಂದಿವೆ. ಜೊತೆಗೆ 271 ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಕುಂಬ್ಳೆ 938 ರನ್ ಗಳಿಸಿದ್ದಾರೆ.

andolana

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

8 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

8 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

8 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

8 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

8 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

8 hours ago