ಕ್ರೀಡೆ

Karnataka Budget 2023: ರಾಜ್ಯದ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಲವು ಯೋಜನೆ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಈ ಸರ್ಕಾರದ ಕೊನೆಯ ಬಜೆಟ್ ಮಂಡಿಸುತ್ತಿದ್ದಾರೆ. ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ ಎರಡನೇ ಬಜೆಟ್ ಆಗಿದೆ. 3.09 ಲಕ್ಷ ಕೋಟಿ ಗಾತ್ರದ ಬಜೆಟ್ ಇದಾಗಿದ್ದು, ವಿವಿದ ಕ್ಷೇತ್ರಗಳಿಗೆ ಬರಪೂರ ಅನುದಾನ ನೀಡಲಾಗಿದೆ. ಇದರಲ್ಲಿ ಕ್ರೀಡಾ ವಲಯವೂ ಸೇರಿದ್ದು, ರಾಜ್ಯದ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಮುಖ್ಯಮಂತ್ರಿಗಳು ನಾನಾ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಇದರೊಂದಿಗೆ ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳಾದ ಖೋ-ಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟ ಮುಂತಾದವುಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ನಿಟ್ಟಿನಲ್ಲಿಯೂ ಬೊಮ್ಮಾಯಿ ಹೆಜ್ಜೆ ಇಟ್ಟಿದ್ದಾರೆ. ಹಾಗಿದ್ದರೆ ಬೊಮ್ಮಾಯಿ ಮಂಡಿಸಿದ ಬಜೆಟ್​ನಲ್ಲಿ ಕ್ರೀಡಾ ವಿಭಾಗಕ್ಕೆ ಸಿಕ್ಕಿದ್ದೇನು ಎಂಬುದರ ಪೂರ್ಣ ವಿವರ ಇಲ್ಲಿದೆ.

ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣ, ಮಂಡ್ಯ ಮತ್ತು ಉಡುಪಿ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸುಸಜ್ಜಿತ ಕ್ರೀಡಾ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮುಂದಿನ ವರ್ಷಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕ್ರೀಡಾಂಗಣಗಳ ಸಮಗ್ರ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು. ಈ ಕ್ರೀಡಾಂಗಣಗಳಲ್ಲಿ ಮಹಿಳೆಯರು ಮತ್ತು ವಿಶೇಷಚೇತನರಿಗೆ ಸೂಕ್ತ ಸೌಕರ್ಯಗಳು ಹಾಗೂ ಯುವಜನರಿಗೆ ಹೊರಾಂಗಣ ಜಿಮ್ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಉದ್ದೇಶಕ್ಕಾಗಿ ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ರೂಪಿಸುವ ಅಧಿಕೃತವಾಗಿ ನೋಂದಣಿಯಾಗಿರುವ ಖಾಸಗಿ ಕ್ರೀಡಾ ಸಂಸ್ಥೆಗಳಿಗೆ 25 ಲಕ್ಷ ರೂ. ಗಳವರೆಗೆ ಪ್ರೋತ್ಸಾಹಧನವನ್ನು ನೀಡಲಾಗುವುದು. ಬಾಸ್ಕೆಟ್ ಬಾಲ್ ಮತ್ತು ವಾಲಿ ಬಾಲ್ ಕ್ರೀಡೆಗಳನ್ನು ಹೆಚ್ಚಿನ ಸಂಖ್ಯೆಯ ಮಕ್ಕಳಿಗೆ ಪರಿಚಯಿಸಲು ಹೊಸ ಅಂಕಣಗಳನ್ನು ಮತ್ತು ತರಬೇತಿ ಕೇಂದ್ರಗಳನ್ನು ನಿರ್ಮಿಸಲಾಗುವುದು.

ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳಾದ ಖೋ-ಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟ ಮುಂತಾದವುಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸಲು ಮತ್ತು ಉತ್ತೇಜಿಸಲು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸಲಾಗುವುದು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಸಜ್ಜಿತವಾದ ಕ್ರೀಡಾ ಅಂಕಣವನ್ನು ನರೇಗಾ ಯೋಜನೆಯಡಿ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.
ರಾಜ್ಯದ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಐದು ಯುವ ಜನರಿಗೆ ಪ್ರಸಕ್ತ ಸಾಲಿನಿಂದ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿ ನೀಡಲಾಗುವುದು. ಒಲಿಂಪಿಕ್ಸ್ ಮತ್ತು ಇತರ ಅಂತರರಾಷ್ಟ್ರೀಯ ಕ್ರೀಡೆಗಳಲ್ಲಿ ಪದಕ ಪಡೆಯುವ ಉದ್ದೇಶಕ್ಕೆ ಅತ್ಯುನ್ನತ ತರಬೇತಿ ಹಾಗೂ ಸಲಕರಣೆಗಳನ್ನು ಪಡೆಯಲು ಅನುವಾಗುವಂತೆ 50 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಒಲಿಂಪಿಕ್ ಕನಸಿನ ಯೋಜನಾ ನಿಧಿ ಸ್ಥಾಪಿಸಲಾಗುವುದು. ಈ ಯೋಜನೆಯಡಿ 12 ರಿಂದ 19 ವರ್ಷ ವಯೋಮಾನದ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿದ ಯುವ ಪ್ರತಿಭಾವಂತ ಕ್ರೀಡಾಪಟುಗಳ ಪ್ರಾಯೋಜನೆ ಮಾಡಲಾಗುವುದು.

andolanait

Recent Posts

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

11 mins ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

4 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

5 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

6 hours ago