ಕ್ರೀಡೆ

ಟಿ20 ವಿಶ್ವಕಪ್‌ನಲ್ಲಿ ಎರಡು ತಂಡಗಳಿಗೆ ನಂದಿನಿ ಪ್ರಾಯೋಜಕತ್ವ: ಇದರಲ್ಲಿ ಟೀಂ ಇಂಡಿಯಾಗಿಲ್ಲ ಸ್ಥಾನ?!

ಮೈಸೂರು: ಇದೇ ಜೂನ್‌ 1ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ನ ಎರಡು ತಂಡಗಳಿಗೆ ಕರ್ನಾಟಕದ ಖ್ಯಾತ ಹಾಲು ಉತ್ಪನ್ನ ಒಕ್ಕೂಟವೊಂದು ಪ್ರಾಯೋಜಕತ್ವವನ್ನು ವಹಿಸಿಕೊಂಡಿದೆ.

ಕರ್ನಾಟಕ ಹಾಲು ಒಕ್ಕೂಟ(ಕೆಎಂಎಫ್‌) ತನ್ನ ಬ್ರಾಂಡ್‌ನ್ನು ಪ್ರಪಂಚದಾದ್ಯಂತ ವಿಸ್ತಾರಗೊಳಿಸಲು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅದರಲ್ಲಿ ಒಂದಾದ ಟಿ20 ವಿಶ್ವಕಪ್‌ ನಲ್ಲಿ ತನ್ನ ಬ್ರಾಂಡ್‌ ಬಗ್ಗೆ ಪ್ರಚಾರ ಮಾಡಲು ಕೆಎಂಎಫ್‌ ಮುಂದಾಗಿದೆ.

ಈ ಬಾರಿಯ ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್‌ ಹಾಗೂ ಐರ್ಲೆಂಡ್‌ ತಂಡಗಳ ಜೆರ್ಸಿ ಮೇಲೆ ಪ್ರಾಯೋಜಕರಾಗಿ ನಂದಿನಿ ಹೆಸರು ಕಾಣಿಸಿಕೊಳ್ಳಲಿದೆ. ಆ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ಬ್ರಾಂಡ್‌ ವ್ಯಾಲೂ ಹೆಚ್ಚಿಸಲು ಕೆಎಂಎಫ್‌ ಮುಂದಾಗಿದೆ.

ಇನ್ನು ಈ ಬಗ್ಗೆ ಮನಿ ಕಂಟ್ರೋಲ್‌ ಜೊತೆ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ ಜಗದೀಶ್‌ ಮಾತನಾಡಿ, ಈ ಬಾರಿಯ ಟಿ20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಕೆಎಂಎಫ್‌ ಸ್ಕಾಡ್ಲೆಂಡ್‌ ಹಾಗೂ ಐರ್ಲೆಂಡ್‌ ತಂಡಗಳಿಗೆ ಪ್ರಾಯೋಜಕತ್ವ ವಹಿಸುವ ಬಗ್ಗೆ ನಿನ್ನೆ (ಏ.20) ಐಟಿಡಬ್ಲ್ಯೂ ಕನ್ಸಲ್ಟಿಂಗ್‌ ಪ್ರೈ.ಲಿಗೆ ಆದೇಶ ನೀಡಿದ್ದೇವೆ.

ಇದರನ್ವಯ ಈ ಎರಡು ತಂಡದ ಆಟಗಾರರ ಜೆರ್ಸಿಯ ಲೀಡ್‌ ಆರ್ಮ್‌ನಲ್ಲಿ (ಬಲಗೈ ಬ್ಯಾಟರ್‌ನ ಎಡ ಭಾಗ ಹಾಗೂ ಎಡಗೈ ಬ್ಯಾಟರ್‌ನ ಬಲ ಭಾಗದಲ್ಲಿ ಲೋಗೋ ಕಂಡು ಬರಲಿದೆ) ನಂದಿನಿ ಲೋಗೋ ಕಾಣಿಸಿಕೊಳ್ಳಲಿದೆ. ಇದು ಪ್ರತಿಯೊಬ್ಬ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈಗಾಗಲೇ ಸಿಂಗಾಪುರ, ಮಿಡಲ್‌ ಈಸ್ಟ್‌ ದೇಶಗಳಲ್ಲಿ ತನ್ನ ಪ್ರಾಬಲ್ಯ ಮೆರೆದಿರುವ ನಂದಿನಿ, ಈ ವಿಶ್ವಕಪ್‌ ಮೂಲಕ ತನ್ನ ಸಿಹಿ ತಿಂಡಿಗಳು ಹಾಗೂ ಉತ್ಪನ್ನಗಳ ಮೂಲಕ ಯುಎಸ್‌ಎ ಮಾರುಕಟ್ಟೆಗೆ ಕಾಲಿಡಲು ಸಜ್ಜಾಗುತ್ತಿದೆ. ಮತ್ತು ಅಲ್ಲಿ ತನ್ನ ಅಸ್ಥಿತ್ವವನ್ನು ಉಳಿಸಿಕೊಳ್ಳಲಿದೆ ಎಂದು ಜಗದೀಶ್‌ ಹೇಳಿದ್ದಾರೆ. ಇದರ ಜೊತೆಗೆ ಟಿ20 ವಿಶ್ವಕಪ್‌ ಸಮಯದಲ್ಲಿ ನಂದಿನಿ ಹಾಲಿನಿಂದ ತಯಾರಾದ “ಸ್ಪ್ಲಾಶ್‌” ಎನರ್ಜಿ ಡ್ರಿಂಕ್‌ ಅನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಂಧನದಲ್ಲಿರುವ ಮುನಿರತ್ನ ಆರೋಗ್ಯದಲ್ಲಿ ದಿಢೀರ್‌ ಏರುಪೇರು: ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ…

1 hour ago

ದಸರಾ ಚಲನಚಿತ್ರೋತ್ಸವ- 2024| ಉತ್ತಮ ಕಿರುಚಿತ್ರ ಆಯ್ಕೆಗೆ ಪರಿಣಿತರಿಂದ ವೀಕ್ಷಣೆ

ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ…

2 hours ago

ಮೈಶುಗರ್: 2.5 ಲಕ್ಷ ಟನ್‌ನಷ್ಟು ಕಬ್ಬು ಅರೆಯಲು ಯಾವುದೇ ತೊಂದರೆ ಇಲ್ಲ: ಡಾ: ಹೆಚ್.ಎಲ್ ನಾಗರಾಜು

ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು…

2 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಆನೆ ಸಾವು

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು…

2 hours ago

ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ…

3 hours ago

ಜೊತೆಗಿದ್ದ ಯುವತಿಗೆ ಲೈಂಗಿಕ ಕಿರುಕುಳ: ಕೊರಿಯೋಗ್ರಾಫರ್‌ ವಿರುದ್ಧ ದೂರು ದಾಖಲು

ಮೈಸೂರು: ಬಾಲಿವುಡ್‌ನಿಂದ ಸ್ಯಾಂಡಲ್‌ವುಡ್‌ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್‌ ನಟರಿಗೆ ಕೊರಿಯೋಗ್ರಾಫರ್‌ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್‌…

3 hours ago