ಕ್ರೀಡೆ

ಟಿ20 ವಿಶ್ವಕಪ್‌ನಲ್ಲಿ ಎರಡು ತಂಡಗಳಿಗೆ ನಂದಿನಿ ಪ್ರಾಯೋಜಕತ್ವ: ಇದರಲ್ಲಿ ಟೀಂ ಇಂಡಿಯಾಗಿಲ್ಲ ಸ್ಥಾನ?!

ಮೈಸೂರು: ಇದೇ ಜೂನ್‌ 1ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ನ ಎರಡು ತಂಡಗಳಿಗೆ ಕರ್ನಾಟಕದ ಖ್ಯಾತ ಹಾಲು ಉತ್ಪನ್ನ ಒಕ್ಕೂಟವೊಂದು ಪ್ರಾಯೋಜಕತ್ವವನ್ನು ವಹಿಸಿಕೊಂಡಿದೆ.

ಕರ್ನಾಟಕ ಹಾಲು ಒಕ್ಕೂಟ(ಕೆಎಂಎಫ್‌) ತನ್ನ ಬ್ರಾಂಡ್‌ನ್ನು ಪ್ರಪಂಚದಾದ್ಯಂತ ವಿಸ್ತಾರಗೊಳಿಸಲು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅದರಲ್ಲಿ ಒಂದಾದ ಟಿ20 ವಿಶ್ವಕಪ್‌ ನಲ್ಲಿ ತನ್ನ ಬ್ರಾಂಡ್‌ ಬಗ್ಗೆ ಪ್ರಚಾರ ಮಾಡಲು ಕೆಎಂಎಫ್‌ ಮುಂದಾಗಿದೆ.

ಈ ಬಾರಿಯ ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್‌ ಹಾಗೂ ಐರ್ಲೆಂಡ್‌ ತಂಡಗಳ ಜೆರ್ಸಿ ಮೇಲೆ ಪ್ರಾಯೋಜಕರಾಗಿ ನಂದಿನಿ ಹೆಸರು ಕಾಣಿಸಿಕೊಳ್ಳಲಿದೆ. ಆ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ಬ್ರಾಂಡ್‌ ವ್ಯಾಲೂ ಹೆಚ್ಚಿಸಲು ಕೆಎಂಎಫ್‌ ಮುಂದಾಗಿದೆ.

ಇನ್ನು ಈ ಬಗ್ಗೆ ಮನಿ ಕಂಟ್ರೋಲ್‌ ಜೊತೆ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ ಜಗದೀಶ್‌ ಮಾತನಾಡಿ, ಈ ಬಾರಿಯ ಟಿ20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಕೆಎಂಎಫ್‌ ಸ್ಕಾಡ್ಲೆಂಡ್‌ ಹಾಗೂ ಐರ್ಲೆಂಡ್‌ ತಂಡಗಳಿಗೆ ಪ್ರಾಯೋಜಕತ್ವ ವಹಿಸುವ ಬಗ್ಗೆ ನಿನ್ನೆ (ಏ.20) ಐಟಿಡಬ್ಲ್ಯೂ ಕನ್ಸಲ್ಟಿಂಗ್‌ ಪ್ರೈ.ಲಿಗೆ ಆದೇಶ ನೀಡಿದ್ದೇವೆ.

ಇದರನ್ವಯ ಈ ಎರಡು ತಂಡದ ಆಟಗಾರರ ಜೆರ್ಸಿಯ ಲೀಡ್‌ ಆರ್ಮ್‌ನಲ್ಲಿ (ಬಲಗೈ ಬ್ಯಾಟರ್‌ನ ಎಡ ಭಾಗ ಹಾಗೂ ಎಡಗೈ ಬ್ಯಾಟರ್‌ನ ಬಲ ಭಾಗದಲ್ಲಿ ಲೋಗೋ ಕಂಡು ಬರಲಿದೆ) ನಂದಿನಿ ಲೋಗೋ ಕಾಣಿಸಿಕೊಳ್ಳಲಿದೆ. ಇದು ಪ್ರತಿಯೊಬ್ಬ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈಗಾಗಲೇ ಸಿಂಗಾಪುರ, ಮಿಡಲ್‌ ಈಸ್ಟ್‌ ದೇಶಗಳಲ್ಲಿ ತನ್ನ ಪ್ರಾಬಲ್ಯ ಮೆರೆದಿರುವ ನಂದಿನಿ, ಈ ವಿಶ್ವಕಪ್‌ ಮೂಲಕ ತನ್ನ ಸಿಹಿ ತಿಂಡಿಗಳು ಹಾಗೂ ಉತ್ಪನ್ನಗಳ ಮೂಲಕ ಯುಎಸ್‌ಎ ಮಾರುಕಟ್ಟೆಗೆ ಕಾಲಿಡಲು ಸಜ್ಜಾಗುತ್ತಿದೆ. ಮತ್ತು ಅಲ್ಲಿ ತನ್ನ ಅಸ್ಥಿತ್ವವನ್ನು ಉಳಿಸಿಕೊಳ್ಳಲಿದೆ ಎಂದು ಜಗದೀಶ್‌ ಹೇಳಿದ್ದಾರೆ. ಇದರ ಜೊತೆಗೆ ಟಿ20 ವಿಶ್ವಕಪ್‌ ಸಮಯದಲ್ಲಿ ನಂದಿನಿ ಹಾಲಿನಿಂದ ತಯಾರಾದ “ಸ್ಪ್ಲಾಶ್‌” ಎನರ್ಜಿ ಡ್ರಿಂಕ್‌ ಅನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

4 mins ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

11 mins ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

59 mins ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

3 hours ago

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

6 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

6 hours ago