ಕ್ರೀಡೆ

ಟಿ20 ವಿಶ್ವಕಪ್‌ನಲ್ಲಿ ಎರಡು ತಂಡಗಳಿಗೆ ನಂದಿನಿ ಪ್ರಾಯೋಜಕತ್ವ: ಇದರಲ್ಲಿ ಟೀಂ ಇಂಡಿಯಾಗಿಲ್ಲ ಸ್ಥಾನ?!

ಮೈಸೂರು: ಇದೇ ಜೂನ್‌ 1ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ನ ಎರಡು ತಂಡಗಳಿಗೆ ಕರ್ನಾಟಕದ ಖ್ಯಾತ ಹಾಲು ಉತ್ಪನ್ನ ಒಕ್ಕೂಟವೊಂದು ಪ್ರಾಯೋಜಕತ್ವವನ್ನು ವಹಿಸಿಕೊಂಡಿದೆ.

ಕರ್ನಾಟಕ ಹಾಲು ಒಕ್ಕೂಟ(ಕೆಎಂಎಫ್‌) ತನ್ನ ಬ್ರಾಂಡ್‌ನ್ನು ಪ್ರಪಂಚದಾದ್ಯಂತ ವಿಸ್ತಾರಗೊಳಿಸಲು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅದರಲ್ಲಿ ಒಂದಾದ ಟಿ20 ವಿಶ್ವಕಪ್‌ ನಲ್ಲಿ ತನ್ನ ಬ್ರಾಂಡ್‌ ಬಗ್ಗೆ ಪ್ರಚಾರ ಮಾಡಲು ಕೆಎಂಎಫ್‌ ಮುಂದಾಗಿದೆ.

ಈ ಬಾರಿಯ ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್‌ ಹಾಗೂ ಐರ್ಲೆಂಡ್‌ ತಂಡಗಳ ಜೆರ್ಸಿ ಮೇಲೆ ಪ್ರಾಯೋಜಕರಾಗಿ ನಂದಿನಿ ಹೆಸರು ಕಾಣಿಸಿಕೊಳ್ಳಲಿದೆ. ಆ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ಬ್ರಾಂಡ್‌ ವ್ಯಾಲೂ ಹೆಚ್ಚಿಸಲು ಕೆಎಂಎಫ್‌ ಮುಂದಾಗಿದೆ.

ಇನ್ನು ಈ ಬಗ್ಗೆ ಮನಿ ಕಂಟ್ರೋಲ್‌ ಜೊತೆ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ ಜಗದೀಶ್‌ ಮಾತನಾಡಿ, ಈ ಬಾರಿಯ ಟಿ20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಕೆಎಂಎಫ್‌ ಸ್ಕಾಡ್ಲೆಂಡ್‌ ಹಾಗೂ ಐರ್ಲೆಂಡ್‌ ತಂಡಗಳಿಗೆ ಪ್ರಾಯೋಜಕತ್ವ ವಹಿಸುವ ಬಗ್ಗೆ ನಿನ್ನೆ (ಏ.20) ಐಟಿಡಬ್ಲ್ಯೂ ಕನ್ಸಲ್ಟಿಂಗ್‌ ಪ್ರೈ.ಲಿಗೆ ಆದೇಶ ನೀಡಿದ್ದೇವೆ.

ಇದರನ್ವಯ ಈ ಎರಡು ತಂಡದ ಆಟಗಾರರ ಜೆರ್ಸಿಯ ಲೀಡ್‌ ಆರ್ಮ್‌ನಲ್ಲಿ (ಬಲಗೈ ಬ್ಯಾಟರ್‌ನ ಎಡ ಭಾಗ ಹಾಗೂ ಎಡಗೈ ಬ್ಯಾಟರ್‌ನ ಬಲ ಭಾಗದಲ್ಲಿ ಲೋಗೋ ಕಂಡು ಬರಲಿದೆ) ನಂದಿನಿ ಲೋಗೋ ಕಾಣಿಸಿಕೊಳ್ಳಲಿದೆ. ಇದು ಪ್ರತಿಯೊಬ್ಬ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈಗಾಗಲೇ ಸಿಂಗಾಪುರ, ಮಿಡಲ್‌ ಈಸ್ಟ್‌ ದೇಶಗಳಲ್ಲಿ ತನ್ನ ಪ್ರಾಬಲ್ಯ ಮೆರೆದಿರುವ ನಂದಿನಿ, ಈ ವಿಶ್ವಕಪ್‌ ಮೂಲಕ ತನ್ನ ಸಿಹಿ ತಿಂಡಿಗಳು ಹಾಗೂ ಉತ್ಪನ್ನಗಳ ಮೂಲಕ ಯುಎಸ್‌ಎ ಮಾರುಕಟ್ಟೆಗೆ ಕಾಲಿಡಲು ಸಜ್ಜಾಗುತ್ತಿದೆ. ಮತ್ತು ಅಲ್ಲಿ ತನ್ನ ಅಸ್ಥಿತ್ವವನ್ನು ಉಳಿಸಿಕೊಳ್ಳಲಿದೆ ಎಂದು ಜಗದೀಶ್‌ ಹೇಳಿದ್ದಾರೆ. ಇದರ ಜೊತೆಗೆ ಟಿ20 ವಿಶ್ವಕಪ್‌ ಸಮಯದಲ್ಲಿ ನಂದಿನಿ ಹಾಲಿನಿಂದ ತಯಾರಾದ “ಸ್ಪ್ಲಾಶ್‌” ಎನರ್ಜಿ ಡ್ರಿಂಕ್‌ ಅನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

25 mins ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

42 mins ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

2 hours ago

ಕಾಂತಾರ ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ರಣವೀರ್‌ ಸಿಂಗ್‌

ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…

2 hours ago

ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…

3 hours ago

ಮೇಕೆದಾಟು ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಗಣಿಗ ರವಿಕುಮಾರ್‌

ಮಂಡ್ಯ: ವಿಜಯ್‌ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…

4 hours ago