ಬೆಂಗಳೂರು: ಮಹಾರಾಜ ಟ್ರೋಫಿ (ಕೆಎಸ್ಸಿಎ) ಟಿ20 2024 ಟೂರ್ನಿಗೆ ಮೈಸೂರು ವಾರಿಯರ್ಸ್ ತಂಡದ ನಾಯಕರಾಗಿ ಕರುಣ್ ನಾಯರ್ ಅವರನ್ನು ಆಯ್ಕೆ ಮಾಡಿದೆ. ಆ ಮೂಲಕ ಸತತ ಮೂರನೇ ಸೀಸನ್ಗೂ ತಂಡದ ನಾಯಕರಾಗಿ ಕರುಣ್ ನಾಯರ್ ಆಯ್ಕೆಯಾಗದ್ದಾರೆ. ಇವರು ಕಳೆದ ಸೀಸನ್ನಲ್ಲಿ ಮೈಸೂರು ವಾರಿಯರ್ಸ್ ತಂಡವನ್ನು ಫೈನಲ್ ವರೆಗೆ ಕೊಂಡೊಯ್ದಿದ್ದರು.
ಕರುಣ್ ನಾಯರ್ ಕರ್ನಾಟಕ ತಂಡದ ಪರವಾಗಿ ಮತ್ತು 2012ರಿಂದ ಐಪಿಎಲ್ ನಲ್ಲಿ ಸಕ್ರಿಯವಾಗಿದ್ದು, 31 ವರ್ಷದ ಈ ಆಟಗಾರ 2016ರಲ್ಲಿ ಜಿಂಬಾಬ್ವೆಯಲ್ಲಿ ನಡೆದ ಒನ್ ಡೇ ಪಂದ್ಯದಲ್ಲಿ ಭಾರತ ತಂಡದ ಪರವಾಗಿ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. ವಿಶೇಷವೆಂದರೆ 2016ರಲ್ಲಿ ಇಂಗ್ಲೆಂಡ್ ವಿರುದ್ಧದ ಮ್ಯಾಚ್ ನಲ್ಲಿ ತ್ರಿಶತಕ ಬಾರಿಸುವ ಮೂಲಕ ವೀರೇಂದ್ರ ಸೆಹವಾಗ್ ಬಳಿಕ ತ್ರಿಶತಕ ಹೊಡೆದ ಎರಡನೇ ಬ್ಯಾಟ್ಸ್ ಮನ್ ಎಂಬ ಖ್ಯಾತಿ ಪಡೆದಿದ್ದಾರೆ.
ಮೈಸೂರು ವಾರಿಯರ್ಸ್ ತಂಡದ ನಾಯಕನಾಗಿ ಆಯ್ಕೆಯಾದ ಕರುಣ್ ನಾಯರ್ ಮೊದಲ ಬಾರಿಗೆ ಮಾತನಾಡಿದ್ದು, ಭಾರತ ತಂಡವನ್ನು ಪ್ರತಿನಿಧಿಸಿರುವ ನಾನು ಈ ಪಂದ್ಯಾವಳಿಯಲ್ಲಿ ಯುವ, ಪ್ರತಿಭಾನ್ವಿತ ಆಟಗಾರರಿಗೆ ಮಾರ್ಗದರ್ಶನ ನೀಡಲು ಎದುರು ನೋಡುತ್ತಿದ್ದೇನೆ. ಆಫ್ ಫೀಲ್ಡ್ ಮತ್ತು ಆನ್ ಫೀಲ್ಡ್ ನಲ್ಲಿ ಶ್ರೇಷ್ಠ ಪ್ರದರ್ಶನ ನೀಡುವ ವಿಶ್ವಾಸ ಹೊಂದಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಳಿಕ ಮಾತನಾಡಿದ ಮೈಸೂರು ವಾರಿಯರ್ಸ್ನ ಮಾಲೀಕ ಮತ್ತು ಸೈಕಲ್ ಪ್ಯೂರ್ ಅಗರಬತ್ತಿಯ ವ್ಯವಸ್ಥಾಪಕ ನಿರ್ದೇಶಕ ಅರ್ಜುನ್ ರಂಗ, ಕರುಣ್ ನಾಯರ್ ಅಸಾಧಾರಣ ಕ್ರಿಕೆಟ್ ಸಾಮರ್ಥ್ಯ ಮತ್ತು ಜ್ಞಾನ ಹೊಂದಿದ ಆಟಗಾರ. ಅವರು ನಮ್ಮ ತಂಡವನ್ನು ಯಶಸ್ಸಿನ ಕಡೆಗೆ ಕರೆದೊಯ್ಯುತ್ತಾರೆ ಎಂಬ ನಂಬಿಕೆ ನಮಗಿದೆ. ಪಂದ್ಯಾವಳಿಯ ಗೆಲುವನ್ನು ಎದುರು ನೋಡುತ್ತಿದ್ದೇವೆ ಎಂದು ಹೇಳಿದರು.
ಮಹಾರಾಜ ಟ್ರೋಫಿ ಪಂದ್ಯಾವಳಿಯು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಗಸ್ಟ್ 15ರಿಂದ ಸೆಪ್ಟೆಂಬರ್ 1ರವರೆಗೆ ನಡೆಯಲಿದೆ. ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್, ಹುಬ್ಬಳ್ಳಿ ಟೈಗರ್ಸ್, ಬೆಂಗಳೂರು ಬ್ಲಾಸ್ಟರ್ಸ್, ಮಂಗಳೂರು ಡ್ರಾಗನ್ಸ್, ಗುಲ್ಬರ್ಗಾ ಮಿಸ್ಟಿಕ್ಸ್, ಶಿವಮೊಗ್ಗ ಲಯನ್ಸ್ ಸೇರಿದಂತೆ ಒಟ್ಟು ಆರು ತಂಡಗಳು ಪ್ರಶಸ್ತಿಗಾಗಿ ಸೆಣೆಸಲಿವೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…