ಕ್ರೀಡೆ

ಮಹಾರಾಜ ಟ್ರೋಫಿ 2024: ಮೈಸೂರು ವಾರಿಯರ್ಸ್ ತಂಡಕ್ಕೆ ಕರುಣ್ ನಾಯರ್ ನಾಯಕ

ಬೆಂಗಳೂರು: ಮಹಾರಾಜ ಟ್ರೋಫಿ (ಕೆಎಸ್‌ಸಿಎ) ಟಿ20 2024 ಟೂರ್ನಿಗೆ ಮೈಸೂರು ವಾರಿಯರ್ಸ್ ತಂಡದ ನಾಯಕರಾಗಿ ಕರುಣ್ ನಾಯರ್ ಅವರನ್ನು ಆಯ್ಕೆ ಮಾಡಿದೆ. ಆ ಮೂಲಕ ಸತತ ಮೂರನೇ ಸೀಸನ್‌ಗೂ ತಂಡದ ನಾಯಕರಾಗಿ ಕರುಣ್ ನಾಯರ್ ಆಯ್ಕೆಯಾಗದ್ದಾರೆ. ಇವರು ಕಳೆದ ಸೀಸನ್‌ನಲ್ಲಿ ಮೈಸೂರು ವಾರಿಯರ್ಸ್‌ ತಂಡವನ್ನು ಫೈನಲ್ ವರೆಗೆ ಕೊಂಡೊಯ್ದಿದ್ದರು.

ಕರುಣ್ ನಾಯರ್ ಕರ್ನಾಟಕ ತಂಡದ ಪರವಾಗಿ ಮತ್ತು 2012ರಿಂದ ಐಪಿಎಲ್ ನಲ್ಲಿ ಸಕ್ರಿಯವಾಗಿದ್ದು, 31 ವರ್ಷದ ಈ ಆಟಗಾರ 2016ರಲ್ಲಿ ಜಿಂಬಾಬ್ವೆಯಲ್ಲಿ ನಡೆದ ಒನ್ ಡೇ ಪಂದ್ಯದಲ್ಲಿ ಭಾರತ ತಂಡದ ಪರವಾಗಿ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. ವಿಶೇಷವೆಂದರೆ 2016ರಲ್ಲಿ ಇಂಗ್ಲೆಂಡ್ ವಿರುದ್ಧದ ಮ್ಯಾಚ್ ನಲ್ಲಿ ತ್ರಿಶತಕ ಬಾರಿಸುವ ಮೂಲಕ ವೀರೇಂದ್ರ ಸೆಹವಾಗ್ ಬಳಿಕ ತ್ರಿಶತಕ ಹೊಡೆದ ಎರಡನೇ ಬ್ಯಾಟ್ಸ್ ಮನ್ ಎಂಬ ಖ್ಯಾತಿ ಪಡೆದಿದ್ದಾರೆ.

ಮೈಸೂರು ವಾರಿಯರ್ಸ್ ತಂಡದ ನಾಯಕನಾಗಿ ಆಯ್ಕೆಯಾದ ಕರುಣ್ ನಾಯರ್ ಮೊದಲ ಬಾರಿಗೆ ಮಾತನಾಡಿದ್ದು, ಭಾರತ ತಂಡವನ್ನು ಪ್ರತಿನಿಧಿಸಿರುವ ನಾನು ಈ ಪಂದ್ಯಾವಳಿಯಲ್ಲಿ ಯುವ, ಪ್ರತಿಭಾನ್ವಿತ ಆಟಗಾರರಿಗೆ ಮಾರ್ಗದರ್ಶನ ನೀಡಲು ಎದುರು ನೋಡುತ್ತಿದ್ದೇನೆ. ಆಫ್ ಫೀಲ್ಡ್ ಮತ್ತು ಆನ್ ಫೀಲ್ಡ್ ನಲ್ಲಿ ಶ್ರೇಷ್ಠ ಪ್ರದರ್ಶನ ನೀಡುವ ವಿಶ್ವಾಸ ಹೊಂದಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಳಿಕ ಮಾತನಾಡಿದ ಮೈಸೂರು ವಾರಿಯರ್ಸ್‌ನ ಮಾಲೀಕ ಮತ್ತು ಸೈಕಲ್ ಪ್ಯೂರ್ ಅಗರಬತ್ತಿಯ ವ್ಯವಸ್ಥಾಪಕ ನಿರ್ದೇಶಕ ಅರ್ಜುನ್ ರಂಗ, ಕರುಣ್ ನಾಯರ್ ಅಸಾಧಾರಣ ಕ್ರಿಕೆಟ್ ಸಾಮರ್ಥ್ಯ ಮತ್ತು ಜ್ಞಾನ ಹೊಂದಿದ ಆಟಗಾರ. ಅವರು ನಮ್ಮ ತಂಡವನ್ನು ಯಶಸ್ಸಿನ ಕಡೆಗೆ ಕರೆದೊಯ್ಯುತ್ತಾರೆ ಎಂಬ ನಂಬಿಕೆ ನಮಗಿದೆ. ಪಂದ್ಯಾವಳಿಯ ಗೆಲುವನ್ನು ಎದುರು ನೋಡುತ್ತಿದ್ದೇವೆ ಎಂದು ಹೇಳಿದರು.

ಮಹಾರಾಜ ಟ್ರೋಫಿ ಪಂದ್ಯಾವಳಿಯು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಗಸ್ಟ್ 15ರಿಂದ ಸೆಪ್ಟೆಂಬರ್ 1ರವರೆಗೆ ನಡೆಯಲಿದೆ. ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್, ಹುಬ್ಬಳ್ಳಿ ಟೈಗರ್ಸ್, ಬೆಂಗಳೂರು ಬ್ಲಾಸ್ಟರ್ಸ್, ಮಂಗಳೂರು ಡ್ರಾಗನ್ಸ್, ಗುಲ್ಬರ್ಗಾ ಮಿಸ್ಟಿಕ್ಸ್, ಶಿವಮೊಗ್ಗ ಲಯನ್ಸ್ ಸೇರಿದಂತೆ ಒಟ್ಟು ಆರು ತಂಡಗಳು ಪ್ರಶಸ್ತಿಗಾಗಿ ಸೆಣೆಸಲಿವೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

3 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

5 mins ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

9 mins ago

ಕೊಳ್ಳೇಗಾಲ: ಕೇರಳ ಲಾಟರಿ ಮಾರಾಟ: ವ್ಯಕ್ತಿಯ ಬಂಧನ

ಕೊಳ್ಳೇಗಾಲ: ಅಕ್ರಮವಾಗಿ ಕೇರಳ ಲಾಟರಿಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ ಮಾಂಬಳ್ಳಿ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಜರುಗಿದೆ.…

10 mins ago

ಸ್ವಚ್ಛತೆಗೆ ಮೈಸೂರಿನ ಮಾರ್ಗದರ್ಶನ!

ಕೆ.ಬಿ.ರಮೇಶನಾಯಕ ರಾಯಚೂರು, ಮಸ್ಕಿ ತಂಡಗಳಿಗೆ ತರಬೇತಿ; ಸ್ವಚ್ಛ ಶೆಹರ್ ಯೋಜನೆಯಡಿ ಒಡಂಬಡಿಕೆ ಮೈಸೂರು: ಸ್ವಚ್ಛತೆಯಲ್ಲಿ ಹಲವು ಬಾರಿ ದೇಶದ ಗಮನ…

12 mins ago