ಕ್ರೀಡೆ

ಮಹಾರಾಜ ಟ್ರೋಫಿ 2024: ಮೈಸೂರು ವಾರಿಯರ್ಸ್ ತಂಡಕ್ಕೆ ಕರುಣ್ ನಾಯರ್ ನಾಯಕ

ಬೆಂಗಳೂರು: ಮಹಾರಾಜ ಟ್ರೋಫಿ (ಕೆಎಸ್‌ಸಿಎ) ಟಿ20 2024 ಟೂರ್ನಿಗೆ ಮೈಸೂರು ವಾರಿಯರ್ಸ್ ತಂಡದ ನಾಯಕರಾಗಿ ಕರುಣ್ ನಾಯರ್ ಅವರನ್ನು ಆಯ್ಕೆ ಮಾಡಿದೆ. ಆ ಮೂಲಕ ಸತತ ಮೂರನೇ ಸೀಸನ್‌ಗೂ ತಂಡದ ನಾಯಕರಾಗಿ ಕರುಣ್ ನಾಯರ್ ಆಯ್ಕೆಯಾಗದ್ದಾರೆ. ಇವರು ಕಳೆದ ಸೀಸನ್‌ನಲ್ಲಿ ಮೈಸೂರು ವಾರಿಯರ್ಸ್‌ ತಂಡವನ್ನು ಫೈನಲ್ ವರೆಗೆ ಕೊಂಡೊಯ್ದಿದ್ದರು.

ಕರುಣ್ ನಾಯರ್ ಕರ್ನಾಟಕ ತಂಡದ ಪರವಾಗಿ ಮತ್ತು 2012ರಿಂದ ಐಪಿಎಲ್ ನಲ್ಲಿ ಸಕ್ರಿಯವಾಗಿದ್ದು, 31 ವರ್ಷದ ಈ ಆಟಗಾರ 2016ರಲ್ಲಿ ಜಿಂಬಾಬ್ವೆಯಲ್ಲಿ ನಡೆದ ಒನ್ ಡೇ ಪಂದ್ಯದಲ್ಲಿ ಭಾರತ ತಂಡದ ಪರವಾಗಿ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. ವಿಶೇಷವೆಂದರೆ 2016ರಲ್ಲಿ ಇಂಗ್ಲೆಂಡ್ ವಿರುದ್ಧದ ಮ್ಯಾಚ್ ನಲ್ಲಿ ತ್ರಿಶತಕ ಬಾರಿಸುವ ಮೂಲಕ ವೀರೇಂದ್ರ ಸೆಹವಾಗ್ ಬಳಿಕ ತ್ರಿಶತಕ ಹೊಡೆದ ಎರಡನೇ ಬ್ಯಾಟ್ಸ್ ಮನ್ ಎಂಬ ಖ್ಯಾತಿ ಪಡೆದಿದ್ದಾರೆ.

ಮೈಸೂರು ವಾರಿಯರ್ಸ್ ತಂಡದ ನಾಯಕನಾಗಿ ಆಯ್ಕೆಯಾದ ಕರುಣ್ ನಾಯರ್ ಮೊದಲ ಬಾರಿಗೆ ಮಾತನಾಡಿದ್ದು, ಭಾರತ ತಂಡವನ್ನು ಪ್ರತಿನಿಧಿಸಿರುವ ನಾನು ಈ ಪಂದ್ಯಾವಳಿಯಲ್ಲಿ ಯುವ, ಪ್ರತಿಭಾನ್ವಿತ ಆಟಗಾರರಿಗೆ ಮಾರ್ಗದರ್ಶನ ನೀಡಲು ಎದುರು ನೋಡುತ್ತಿದ್ದೇನೆ. ಆಫ್ ಫೀಲ್ಡ್ ಮತ್ತು ಆನ್ ಫೀಲ್ಡ್ ನಲ್ಲಿ ಶ್ರೇಷ್ಠ ಪ್ರದರ್ಶನ ನೀಡುವ ವಿಶ್ವಾಸ ಹೊಂದಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಳಿಕ ಮಾತನಾಡಿದ ಮೈಸೂರು ವಾರಿಯರ್ಸ್‌ನ ಮಾಲೀಕ ಮತ್ತು ಸೈಕಲ್ ಪ್ಯೂರ್ ಅಗರಬತ್ತಿಯ ವ್ಯವಸ್ಥಾಪಕ ನಿರ್ದೇಶಕ ಅರ್ಜುನ್ ರಂಗ, ಕರುಣ್ ನಾಯರ್ ಅಸಾಧಾರಣ ಕ್ರಿಕೆಟ್ ಸಾಮರ್ಥ್ಯ ಮತ್ತು ಜ್ಞಾನ ಹೊಂದಿದ ಆಟಗಾರ. ಅವರು ನಮ್ಮ ತಂಡವನ್ನು ಯಶಸ್ಸಿನ ಕಡೆಗೆ ಕರೆದೊಯ್ಯುತ್ತಾರೆ ಎಂಬ ನಂಬಿಕೆ ನಮಗಿದೆ. ಪಂದ್ಯಾವಳಿಯ ಗೆಲುವನ್ನು ಎದುರು ನೋಡುತ್ತಿದ್ದೇವೆ ಎಂದು ಹೇಳಿದರು.

ಮಹಾರಾಜ ಟ್ರೋಫಿ ಪಂದ್ಯಾವಳಿಯು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಗಸ್ಟ್ 15ರಿಂದ ಸೆಪ್ಟೆಂಬರ್ 1ರವರೆಗೆ ನಡೆಯಲಿದೆ. ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್, ಹುಬ್ಬಳ್ಳಿ ಟೈಗರ್ಸ್, ಬೆಂಗಳೂರು ಬ್ಲಾಸ್ಟರ್ಸ್, ಮಂಗಳೂರು ಡ್ರಾಗನ್ಸ್, ಗುಲ್ಬರ್ಗಾ ಮಿಸ್ಟಿಕ್ಸ್, ಶಿವಮೊಗ್ಗ ಲಯನ್ಸ್ ಸೇರಿದಂತೆ ಒಟ್ಟು ಆರು ತಂಡಗಳು ಪ್ರಶಸ್ತಿಗಾಗಿ ಸೆಣೆಸಲಿವೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

24 mins ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

1 hour ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

2 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

3 hours ago

​ಮೈಸೂರು ವಿ.ವಿ | ಸಂಶೋಧಕರ ಶಿಷ್ಯವೇತನ ಬಿಕ್ಕಟ್ಟು ಬಗೆಹರಿಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…

3 hours ago

ಮೈಸೂರು | ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ; ಫುಟ್‌ಪಾತ್ ಆಕ್ರಮಿಸಿದ್ದ 30 ಅಂಗಡಿಗಳಿಗೆ ಶಾಕ್‌

ಮೈಸೂರು : ಫುಟ್‌ಪಾತ್‌ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…

6 hours ago