ಕ್ರೀಡೆ

KCC 3rd Season : ಎಲ್ಲರಿಗೂ ಆಹ್ವಾನ ಕೊಡ್ತೀವಿ ಎಂದ ಕಿಚ್ಚಾ

ಬೆಂಗಳೂರು : ‘ಕರ್ನಾಟಕ ಚಲನಚಿತ್ರ ಕಪ್’ನಿಂದ (KCC). ಈಗಾಗಲೇ ಎರಡೂ ಸೀಸನ್ ಯಶಸ್ವಿ ಆಗಿದ್ದು, ಈಗ ಮೂರನೇ ಸೀಸನ್​ಗೆ ಚಾಲನೆ ನೀಡಲಾಗುತ್ತಿದೆ. ಈ ವರ್ಷ ನಡೆಯಲಿರುವ ಕೆಸಿಸಿ 3ನೇ ಆವೃತ್ತಿಯಲ್ಲಿ ಏನೆಲ್ಲ ಇರಲಿದೆ ಎನ್ನುವ ಬಗ್ಗೆ ಕಿಚ್ಚಾ ಸುದೀಪ್ ಅವರು ಮಾಹಿತಿ ನೀಡಿದ್ದಾರೆ.

ಎಲ್ಲರಿಗೂ ಆಹ್ವಾನ ಕೊಡ್ತೀವಿ
ಕಳೆದ ಎರಡು ಸೀಸನ್​ಗಳಲ್ಲಿ ಅನೇಕರು ಕೆಸಿಸಿಯಲ್ಲಿ ಆಡಿದ್ದಾರೆ. ಇನ್ನೂ ಕೆಲವರು ಇದರಲ್ಲಿ ಪಾಲ್ಗೊಂಡಿಲ್ಲ.‘ಕೆಲವರಿಗೆ ಸುದೀಪ್ ಕಡೆಯಿಂದ ಆಹ್ವಾನ ಹೋಗಿಲ್ಲ’ ಎನ್ನುವ ಮಾತುಗಳು ಬಂದಿದ್ದವು. ಇದಕ್ಕೆ ಸುದೀಪ್ ಈ ವರ್ಷ ಆರಂಭದಲ್ಲೇ ಉತ್ತರ ನೀಡಿದ್ದಾರೆ. ‘ನಾವು ಚಿತ್ರರಂಗದ ಎಲ್ಲರಿಗೂ ಆಹ್ವಾನ ನೀಡುತ್ತಿದ್ದೇವೆ. ಕೆಲವರಿಗೆ ಈ ಟೂರ್ನಿಯಲ್ಲಿ ಆಡೋಕೆ ಇಷ್ಟ ಇರಲ್ಲ. ಅಂಥವರು ಬರಲ್ಲ. ಅವರು ಯಾಕೆ ಬಂದಿಲ್ಲ, ಇವರು ಯಾಕೆ ಬಂದಿಲ್ಲ ಅಂತ ಕೇಳಬೇಡಿ. ಚಿತ್ರರಂಗ ನನ್ನ ಸ್ವತ್ತಲ್ಲ. ಹೀಗಾಗಿ, ನಾವು ಎಲ್ಲರಿಗೂ ಆಹ್ವಾನ ನೀಡುತ್ತಿದ್ದೇವೆ. ಅವರವರ ಶೆಡ್ಯೂಲ್ ನೋಡಿಕೊಂಡು ಬರುತ್ತಾರೆ’ ಎಂದಿದ್ದಾರೆ ಸುದೀಪ್.

ಯಾರಿಗೆಲ್ಲ ಅವಕಾಶ?
ಕಳೆದ ವರ್ಷದಂತೆ ಈ ವರ್ಷವೂ ಅಂತಾರಾಷ್ಟ್ರೀಯಮಟ್ಟದಲ್ಲಿ ಆಡಿದ ಕ್ರಿಕೆಟ್ ಆಟಗಾರರು ಇರಲಿದ್ದಾರೆ. ಈ ಬಗ್ಗೆ ಸುದೀಪ್ ಅವರು ಮಾಹಿತಿ ನೀಡಿದ್ದಾರೆ. ‘ಆರು ಅಂತಾರಾಷ್ಟ್ರೀಯ ಆಟಗಾರರು ಇರುತ್ತಾರೆ. ಸಿನಿಮಾ ರಂಗದವರು ಇರುತ್ತಾರೆ. ಬೇರೆ ಚಿತ್ರರಂಗದವರೂ ಆಡೋಕೆ ಬರಬಹುದು. ರಾಜಕೀಯ ಹಾಗೂ ಮಾಧ್ಯಮದವರು ಕೂಡ ಇದರಲ್ಲಿ ಭಾಗಿ ಆಗಬಹುದು’ ಎಂದು ಸುದೀಪ್ ಹೇಳಿದ್ದಾರೆ.

ಕ್ಯಾಪ್ಟನ್ ಆಯ್ಕೆ ಹೇಗೆ?
‘ಎಲ್ಲ ತಂಡ ರಚನೆ ಆದ ನಂತರದಲ್ಲಿ ಕ್ಯಾಪ್ಟನ್ ಆಯ್ಕೆ ಆಗುತ್ತದೆ. ಅವರವರ ತಂಡದ ಕ್ಯಾಪ್ಟನ್​ನ ಅವರೇ ಆಯ್ಕೆ ಮಾಡಿಕೊಳ್ಳಬೇಕು. ಒಮ್ಮತದಿಂದ ಕ್ಯಾಪ್ಟನ್ ಆಯ್ಕೆ ನಡೆಯುತ್ತದೆ. ಒತ್ತಾಯ ಪೂರ್ವಕವಾಗಿ ಯಾರೂ ಇಲ್ಲಿ ನಾಯಕ ಆಗೋಕೆ ಆಗಲ್ಲ’ ಎಂದಿದ್ದಾರೆ ಸುದೀಪ್.

ಅದ್ದೂರಿ ಚಾಲನೆ
‘ಕೆಸಿಸಿ 3ನೇ ಸೀಸನ್​​’ಗೆ ಅದ್ದೂರಿ ಚಾಲನೆ ನೀಡಲು ಸುದೀಪ್ ನಿರ್ಧರಿಸಿದ್ದಾರೆ. ಸಾಕಷ್ಟು ಮನರಂಜನೆ ಕಾರ್ಯಕ್ರಮ ಆಯೋಜನೆ ಮಾಡಲು ಅವರು ಪ್ಲ್ಯಾನ್ ಮಾಡಿದ್ದಾರೆ. ಅನೇಕ ಗಾಯಕರು​ ಇದರಲ್ಲಿ ಭಾಗಿ ಆಗಲಿದ್ದಾರೆ.

ಕೆಸಿಸಿ ಲೈವ್​ ಇರುತ್ತೆ
‘ಕೆಸಿಸಿ ಟಿವಿಯಲ್ಲಿ ಲೈವ್ ಇರುತ್ತದೆ. ವೃತ್ತಿಪರ ಕ್ಯಾಮೆರಾಮೆನ್​​ಗಳು ಬರುತ್ತವೆ. ಎರಡು ದಿನ ಮ್ಯಾಚ್ ಇರುತ್ತದೆ. ಫೆಬ್ರವರಿ 11 ಹಾಗೂ 12ರಂದು ಮ್ಯಾಚ್​​ಗಳು ಮೈಸೂರಿನಲ್ಲಿ ನಡೆಯಲಿದೆ’ ಎಂದು ಸುದೀಪ್ ಹೇಳಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

4 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

5 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago