ಕ್ರೀಡೆ

KCC 3rd Season : ಎಲ್ಲರಿಗೂ ಆಹ್ವಾನ ಕೊಡ್ತೀವಿ ಎಂದ ಕಿಚ್ಚಾ

ಬೆಂಗಳೂರು : ‘ಕರ್ನಾಟಕ ಚಲನಚಿತ್ರ ಕಪ್’ನಿಂದ (KCC). ಈಗಾಗಲೇ ಎರಡೂ ಸೀಸನ್ ಯಶಸ್ವಿ ಆಗಿದ್ದು, ಈಗ ಮೂರನೇ ಸೀಸನ್​ಗೆ ಚಾಲನೆ ನೀಡಲಾಗುತ್ತಿದೆ. ಈ ವರ್ಷ ನಡೆಯಲಿರುವ ಕೆಸಿಸಿ 3ನೇ ಆವೃತ್ತಿಯಲ್ಲಿ ಏನೆಲ್ಲ ಇರಲಿದೆ ಎನ್ನುವ ಬಗ್ಗೆ ಕಿಚ್ಚಾ ಸುದೀಪ್ ಅವರು ಮಾಹಿತಿ ನೀಡಿದ್ದಾರೆ.

ಎಲ್ಲರಿಗೂ ಆಹ್ವಾನ ಕೊಡ್ತೀವಿ
ಕಳೆದ ಎರಡು ಸೀಸನ್​ಗಳಲ್ಲಿ ಅನೇಕರು ಕೆಸಿಸಿಯಲ್ಲಿ ಆಡಿದ್ದಾರೆ. ಇನ್ನೂ ಕೆಲವರು ಇದರಲ್ಲಿ ಪಾಲ್ಗೊಂಡಿಲ್ಲ.‘ಕೆಲವರಿಗೆ ಸುದೀಪ್ ಕಡೆಯಿಂದ ಆಹ್ವಾನ ಹೋಗಿಲ್ಲ’ ಎನ್ನುವ ಮಾತುಗಳು ಬಂದಿದ್ದವು. ಇದಕ್ಕೆ ಸುದೀಪ್ ಈ ವರ್ಷ ಆರಂಭದಲ್ಲೇ ಉತ್ತರ ನೀಡಿದ್ದಾರೆ. ‘ನಾವು ಚಿತ್ರರಂಗದ ಎಲ್ಲರಿಗೂ ಆಹ್ವಾನ ನೀಡುತ್ತಿದ್ದೇವೆ. ಕೆಲವರಿಗೆ ಈ ಟೂರ್ನಿಯಲ್ಲಿ ಆಡೋಕೆ ಇಷ್ಟ ಇರಲ್ಲ. ಅಂಥವರು ಬರಲ್ಲ. ಅವರು ಯಾಕೆ ಬಂದಿಲ್ಲ, ಇವರು ಯಾಕೆ ಬಂದಿಲ್ಲ ಅಂತ ಕೇಳಬೇಡಿ. ಚಿತ್ರರಂಗ ನನ್ನ ಸ್ವತ್ತಲ್ಲ. ಹೀಗಾಗಿ, ನಾವು ಎಲ್ಲರಿಗೂ ಆಹ್ವಾನ ನೀಡುತ್ತಿದ್ದೇವೆ. ಅವರವರ ಶೆಡ್ಯೂಲ್ ನೋಡಿಕೊಂಡು ಬರುತ್ತಾರೆ’ ಎಂದಿದ್ದಾರೆ ಸುದೀಪ್.

ಯಾರಿಗೆಲ್ಲ ಅವಕಾಶ?
ಕಳೆದ ವರ್ಷದಂತೆ ಈ ವರ್ಷವೂ ಅಂತಾರಾಷ್ಟ್ರೀಯಮಟ್ಟದಲ್ಲಿ ಆಡಿದ ಕ್ರಿಕೆಟ್ ಆಟಗಾರರು ಇರಲಿದ್ದಾರೆ. ಈ ಬಗ್ಗೆ ಸುದೀಪ್ ಅವರು ಮಾಹಿತಿ ನೀಡಿದ್ದಾರೆ. ‘ಆರು ಅಂತಾರಾಷ್ಟ್ರೀಯ ಆಟಗಾರರು ಇರುತ್ತಾರೆ. ಸಿನಿಮಾ ರಂಗದವರು ಇರುತ್ತಾರೆ. ಬೇರೆ ಚಿತ್ರರಂಗದವರೂ ಆಡೋಕೆ ಬರಬಹುದು. ರಾಜಕೀಯ ಹಾಗೂ ಮಾಧ್ಯಮದವರು ಕೂಡ ಇದರಲ್ಲಿ ಭಾಗಿ ಆಗಬಹುದು’ ಎಂದು ಸುದೀಪ್ ಹೇಳಿದ್ದಾರೆ.

ಕ್ಯಾಪ್ಟನ್ ಆಯ್ಕೆ ಹೇಗೆ?
‘ಎಲ್ಲ ತಂಡ ರಚನೆ ಆದ ನಂತರದಲ್ಲಿ ಕ್ಯಾಪ್ಟನ್ ಆಯ್ಕೆ ಆಗುತ್ತದೆ. ಅವರವರ ತಂಡದ ಕ್ಯಾಪ್ಟನ್​ನ ಅವರೇ ಆಯ್ಕೆ ಮಾಡಿಕೊಳ್ಳಬೇಕು. ಒಮ್ಮತದಿಂದ ಕ್ಯಾಪ್ಟನ್ ಆಯ್ಕೆ ನಡೆಯುತ್ತದೆ. ಒತ್ತಾಯ ಪೂರ್ವಕವಾಗಿ ಯಾರೂ ಇಲ್ಲಿ ನಾಯಕ ಆಗೋಕೆ ಆಗಲ್ಲ’ ಎಂದಿದ್ದಾರೆ ಸುದೀಪ್.

ಅದ್ದೂರಿ ಚಾಲನೆ
‘ಕೆಸಿಸಿ 3ನೇ ಸೀಸನ್​​’ಗೆ ಅದ್ದೂರಿ ಚಾಲನೆ ನೀಡಲು ಸುದೀಪ್ ನಿರ್ಧರಿಸಿದ್ದಾರೆ. ಸಾಕಷ್ಟು ಮನರಂಜನೆ ಕಾರ್ಯಕ್ರಮ ಆಯೋಜನೆ ಮಾಡಲು ಅವರು ಪ್ಲ್ಯಾನ್ ಮಾಡಿದ್ದಾರೆ. ಅನೇಕ ಗಾಯಕರು​ ಇದರಲ್ಲಿ ಭಾಗಿ ಆಗಲಿದ್ದಾರೆ.

ಕೆಸಿಸಿ ಲೈವ್​ ಇರುತ್ತೆ
‘ಕೆಸಿಸಿ ಟಿವಿಯಲ್ಲಿ ಲೈವ್ ಇರುತ್ತದೆ. ವೃತ್ತಿಪರ ಕ್ಯಾಮೆರಾಮೆನ್​​ಗಳು ಬರುತ್ತವೆ. ಎರಡು ದಿನ ಮ್ಯಾಚ್ ಇರುತ್ತದೆ. ಫೆಬ್ರವರಿ 11 ಹಾಗೂ 12ರಂದು ಮ್ಯಾಚ್​​ಗಳು ಮೈಸೂರಿನಲ್ಲಿ ನಡೆಯಲಿದೆ’ ಎಂದು ಸುದೀಪ್ ಹೇಳಿದ್ದಾರೆ.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

2 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

15 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

15 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

15 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

15 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

15 hours ago