ಕ್ರೀಡೆ

KCC 3rd Season : ಎಲ್ಲರಿಗೂ ಆಹ್ವಾನ ಕೊಡ್ತೀವಿ ಎಂದ ಕಿಚ್ಚಾ

ಬೆಂಗಳೂರು : ‘ಕರ್ನಾಟಕ ಚಲನಚಿತ್ರ ಕಪ್’ನಿಂದ (KCC). ಈಗಾಗಲೇ ಎರಡೂ ಸೀಸನ್ ಯಶಸ್ವಿ ಆಗಿದ್ದು, ಈಗ ಮೂರನೇ ಸೀಸನ್​ಗೆ ಚಾಲನೆ ನೀಡಲಾಗುತ್ತಿದೆ. ಈ ವರ್ಷ ನಡೆಯಲಿರುವ ಕೆಸಿಸಿ 3ನೇ ಆವೃತ್ತಿಯಲ್ಲಿ ಏನೆಲ್ಲ ಇರಲಿದೆ ಎನ್ನುವ ಬಗ್ಗೆ ಕಿಚ್ಚಾ ಸುದೀಪ್ ಅವರು ಮಾಹಿತಿ ನೀಡಿದ್ದಾರೆ.

ಎಲ್ಲರಿಗೂ ಆಹ್ವಾನ ಕೊಡ್ತೀವಿ
ಕಳೆದ ಎರಡು ಸೀಸನ್​ಗಳಲ್ಲಿ ಅನೇಕರು ಕೆಸಿಸಿಯಲ್ಲಿ ಆಡಿದ್ದಾರೆ. ಇನ್ನೂ ಕೆಲವರು ಇದರಲ್ಲಿ ಪಾಲ್ಗೊಂಡಿಲ್ಲ.‘ಕೆಲವರಿಗೆ ಸುದೀಪ್ ಕಡೆಯಿಂದ ಆಹ್ವಾನ ಹೋಗಿಲ್ಲ’ ಎನ್ನುವ ಮಾತುಗಳು ಬಂದಿದ್ದವು. ಇದಕ್ಕೆ ಸುದೀಪ್ ಈ ವರ್ಷ ಆರಂಭದಲ್ಲೇ ಉತ್ತರ ನೀಡಿದ್ದಾರೆ. ‘ನಾವು ಚಿತ್ರರಂಗದ ಎಲ್ಲರಿಗೂ ಆಹ್ವಾನ ನೀಡುತ್ತಿದ್ದೇವೆ. ಕೆಲವರಿಗೆ ಈ ಟೂರ್ನಿಯಲ್ಲಿ ಆಡೋಕೆ ಇಷ್ಟ ಇರಲ್ಲ. ಅಂಥವರು ಬರಲ್ಲ. ಅವರು ಯಾಕೆ ಬಂದಿಲ್ಲ, ಇವರು ಯಾಕೆ ಬಂದಿಲ್ಲ ಅಂತ ಕೇಳಬೇಡಿ. ಚಿತ್ರರಂಗ ನನ್ನ ಸ್ವತ್ತಲ್ಲ. ಹೀಗಾಗಿ, ನಾವು ಎಲ್ಲರಿಗೂ ಆಹ್ವಾನ ನೀಡುತ್ತಿದ್ದೇವೆ. ಅವರವರ ಶೆಡ್ಯೂಲ್ ನೋಡಿಕೊಂಡು ಬರುತ್ತಾರೆ’ ಎಂದಿದ್ದಾರೆ ಸುದೀಪ್.

ಯಾರಿಗೆಲ್ಲ ಅವಕಾಶ?
ಕಳೆದ ವರ್ಷದಂತೆ ಈ ವರ್ಷವೂ ಅಂತಾರಾಷ್ಟ್ರೀಯಮಟ್ಟದಲ್ಲಿ ಆಡಿದ ಕ್ರಿಕೆಟ್ ಆಟಗಾರರು ಇರಲಿದ್ದಾರೆ. ಈ ಬಗ್ಗೆ ಸುದೀಪ್ ಅವರು ಮಾಹಿತಿ ನೀಡಿದ್ದಾರೆ. ‘ಆರು ಅಂತಾರಾಷ್ಟ್ರೀಯ ಆಟಗಾರರು ಇರುತ್ತಾರೆ. ಸಿನಿಮಾ ರಂಗದವರು ಇರುತ್ತಾರೆ. ಬೇರೆ ಚಿತ್ರರಂಗದವರೂ ಆಡೋಕೆ ಬರಬಹುದು. ರಾಜಕೀಯ ಹಾಗೂ ಮಾಧ್ಯಮದವರು ಕೂಡ ಇದರಲ್ಲಿ ಭಾಗಿ ಆಗಬಹುದು’ ಎಂದು ಸುದೀಪ್ ಹೇಳಿದ್ದಾರೆ.

ಕ್ಯಾಪ್ಟನ್ ಆಯ್ಕೆ ಹೇಗೆ?
‘ಎಲ್ಲ ತಂಡ ರಚನೆ ಆದ ನಂತರದಲ್ಲಿ ಕ್ಯಾಪ್ಟನ್ ಆಯ್ಕೆ ಆಗುತ್ತದೆ. ಅವರವರ ತಂಡದ ಕ್ಯಾಪ್ಟನ್​ನ ಅವರೇ ಆಯ್ಕೆ ಮಾಡಿಕೊಳ್ಳಬೇಕು. ಒಮ್ಮತದಿಂದ ಕ್ಯಾಪ್ಟನ್ ಆಯ್ಕೆ ನಡೆಯುತ್ತದೆ. ಒತ್ತಾಯ ಪೂರ್ವಕವಾಗಿ ಯಾರೂ ಇಲ್ಲಿ ನಾಯಕ ಆಗೋಕೆ ಆಗಲ್ಲ’ ಎಂದಿದ್ದಾರೆ ಸುದೀಪ್.

ಅದ್ದೂರಿ ಚಾಲನೆ
‘ಕೆಸಿಸಿ 3ನೇ ಸೀಸನ್​​’ಗೆ ಅದ್ದೂರಿ ಚಾಲನೆ ನೀಡಲು ಸುದೀಪ್ ನಿರ್ಧರಿಸಿದ್ದಾರೆ. ಸಾಕಷ್ಟು ಮನರಂಜನೆ ಕಾರ್ಯಕ್ರಮ ಆಯೋಜನೆ ಮಾಡಲು ಅವರು ಪ್ಲ್ಯಾನ್ ಮಾಡಿದ್ದಾರೆ. ಅನೇಕ ಗಾಯಕರು​ ಇದರಲ್ಲಿ ಭಾಗಿ ಆಗಲಿದ್ದಾರೆ.

ಕೆಸಿಸಿ ಲೈವ್​ ಇರುತ್ತೆ
‘ಕೆಸಿಸಿ ಟಿವಿಯಲ್ಲಿ ಲೈವ್ ಇರುತ್ತದೆ. ವೃತ್ತಿಪರ ಕ್ಯಾಮೆರಾಮೆನ್​​ಗಳು ಬರುತ್ತವೆ. ಎರಡು ದಿನ ಮ್ಯಾಚ್ ಇರುತ್ತದೆ. ಫೆಬ್ರವರಿ 11 ಹಾಗೂ 12ರಂದು ಮ್ಯಾಚ್​​ಗಳು ಮೈಸೂರಿನಲ್ಲಿ ನಡೆಯಲಿದೆ’ ಎಂದು ಸುದೀಪ್ ಹೇಳಿದ್ದಾರೆ.

andolanait

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

9 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

11 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

13 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

13 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

14 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

14 hours ago