ಕ್ರೀಡೆ

KCC 3rd Season : ಎಲ್ಲರಿಗೂ ಆಹ್ವಾನ ಕೊಡ್ತೀವಿ ಎಂದ ಕಿಚ್ಚಾ

ಬೆಂಗಳೂರು : ‘ಕರ್ನಾಟಕ ಚಲನಚಿತ್ರ ಕಪ್’ನಿಂದ (KCC). ಈಗಾಗಲೇ ಎರಡೂ ಸೀಸನ್ ಯಶಸ್ವಿ ಆಗಿದ್ದು, ಈಗ ಮೂರನೇ ಸೀಸನ್​ಗೆ ಚಾಲನೆ ನೀಡಲಾಗುತ್ತಿದೆ. ಈ ವರ್ಷ ನಡೆಯಲಿರುವ ಕೆಸಿಸಿ 3ನೇ ಆವೃತ್ತಿಯಲ್ಲಿ ಏನೆಲ್ಲ ಇರಲಿದೆ ಎನ್ನುವ ಬಗ್ಗೆ ಕಿಚ್ಚಾ ಸುದೀಪ್ ಅವರು ಮಾಹಿತಿ ನೀಡಿದ್ದಾರೆ.

ಎಲ್ಲರಿಗೂ ಆಹ್ವಾನ ಕೊಡ್ತೀವಿ
ಕಳೆದ ಎರಡು ಸೀಸನ್​ಗಳಲ್ಲಿ ಅನೇಕರು ಕೆಸಿಸಿಯಲ್ಲಿ ಆಡಿದ್ದಾರೆ. ಇನ್ನೂ ಕೆಲವರು ಇದರಲ್ಲಿ ಪಾಲ್ಗೊಂಡಿಲ್ಲ.‘ಕೆಲವರಿಗೆ ಸುದೀಪ್ ಕಡೆಯಿಂದ ಆಹ್ವಾನ ಹೋಗಿಲ್ಲ’ ಎನ್ನುವ ಮಾತುಗಳು ಬಂದಿದ್ದವು. ಇದಕ್ಕೆ ಸುದೀಪ್ ಈ ವರ್ಷ ಆರಂಭದಲ್ಲೇ ಉತ್ತರ ನೀಡಿದ್ದಾರೆ. ‘ನಾವು ಚಿತ್ರರಂಗದ ಎಲ್ಲರಿಗೂ ಆಹ್ವಾನ ನೀಡುತ್ತಿದ್ದೇವೆ. ಕೆಲವರಿಗೆ ಈ ಟೂರ್ನಿಯಲ್ಲಿ ಆಡೋಕೆ ಇಷ್ಟ ಇರಲ್ಲ. ಅಂಥವರು ಬರಲ್ಲ. ಅವರು ಯಾಕೆ ಬಂದಿಲ್ಲ, ಇವರು ಯಾಕೆ ಬಂದಿಲ್ಲ ಅಂತ ಕೇಳಬೇಡಿ. ಚಿತ್ರರಂಗ ನನ್ನ ಸ್ವತ್ತಲ್ಲ. ಹೀಗಾಗಿ, ನಾವು ಎಲ್ಲರಿಗೂ ಆಹ್ವಾನ ನೀಡುತ್ತಿದ್ದೇವೆ. ಅವರವರ ಶೆಡ್ಯೂಲ್ ನೋಡಿಕೊಂಡು ಬರುತ್ತಾರೆ’ ಎಂದಿದ್ದಾರೆ ಸುದೀಪ್.

ಯಾರಿಗೆಲ್ಲ ಅವಕಾಶ?
ಕಳೆದ ವರ್ಷದಂತೆ ಈ ವರ್ಷವೂ ಅಂತಾರಾಷ್ಟ್ರೀಯಮಟ್ಟದಲ್ಲಿ ಆಡಿದ ಕ್ರಿಕೆಟ್ ಆಟಗಾರರು ಇರಲಿದ್ದಾರೆ. ಈ ಬಗ್ಗೆ ಸುದೀಪ್ ಅವರು ಮಾಹಿತಿ ನೀಡಿದ್ದಾರೆ. ‘ಆರು ಅಂತಾರಾಷ್ಟ್ರೀಯ ಆಟಗಾರರು ಇರುತ್ತಾರೆ. ಸಿನಿಮಾ ರಂಗದವರು ಇರುತ್ತಾರೆ. ಬೇರೆ ಚಿತ್ರರಂಗದವರೂ ಆಡೋಕೆ ಬರಬಹುದು. ರಾಜಕೀಯ ಹಾಗೂ ಮಾಧ್ಯಮದವರು ಕೂಡ ಇದರಲ್ಲಿ ಭಾಗಿ ಆಗಬಹುದು’ ಎಂದು ಸುದೀಪ್ ಹೇಳಿದ್ದಾರೆ.

ಕ್ಯಾಪ್ಟನ್ ಆಯ್ಕೆ ಹೇಗೆ?
‘ಎಲ್ಲ ತಂಡ ರಚನೆ ಆದ ನಂತರದಲ್ಲಿ ಕ್ಯಾಪ್ಟನ್ ಆಯ್ಕೆ ಆಗುತ್ತದೆ. ಅವರವರ ತಂಡದ ಕ್ಯಾಪ್ಟನ್​ನ ಅವರೇ ಆಯ್ಕೆ ಮಾಡಿಕೊಳ್ಳಬೇಕು. ಒಮ್ಮತದಿಂದ ಕ್ಯಾಪ್ಟನ್ ಆಯ್ಕೆ ನಡೆಯುತ್ತದೆ. ಒತ್ತಾಯ ಪೂರ್ವಕವಾಗಿ ಯಾರೂ ಇಲ್ಲಿ ನಾಯಕ ಆಗೋಕೆ ಆಗಲ್ಲ’ ಎಂದಿದ್ದಾರೆ ಸುದೀಪ್.

ಅದ್ದೂರಿ ಚಾಲನೆ
‘ಕೆಸಿಸಿ 3ನೇ ಸೀಸನ್​​’ಗೆ ಅದ್ದೂರಿ ಚಾಲನೆ ನೀಡಲು ಸುದೀಪ್ ನಿರ್ಧರಿಸಿದ್ದಾರೆ. ಸಾಕಷ್ಟು ಮನರಂಜನೆ ಕಾರ್ಯಕ್ರಮ ಆಯೋಜನೆ ಮಾಡಲು ಅವರು ಪ್ಲ್ಯಾನ್ ಮಾಡಿದ್ದಾರೆ. ಅನೇಕ ಗಾಯಕರು​ ಇದರಲ್ಲಿ ಭಾಗಿ ಆಗಲಿದ್ದಾರೆ.

ಕೆಸಿಸಿ ಲೈವ್​ ಇರುತ್ತೆ
‘ಕೆಸಿಸಿ ಟಿವಿಯಲ್ಲಿ ಲೈವ್ ಇರುತ್ತದೆ. ವೃತ್ತಿಪರ ಕ್ಯಾಮೆರಾಮೆನ್​​ಗಳು ಬರುತ್ತವೆ. ಎರಡು ದಿನ ಮ್ಯಾಚ್ ಇರುತ್ತದೆ. ಫೆಬ್ರವರಿ 11 ಹಾಗೂ 12ರಂದು ಮ್ಯಾಚ್​​ಗಳು ಮೈಸೂರಿನಲ್ಲಿ ನಡೆಯಲಿದೆ’ ಎಂದು ಸುದೀಪ್ ಹೇಳಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

19 hours ago