ಗುರುಗ್ರಾಮ್ : ಭಾರತದ ಖೋ ಖೋ ಫೆಡರೇಷನ್ (ಕೆಕೆಎಫ್ಐ) ಮುಂದಿನ ಮೂರನೇ ಸೀಸನ್ ನ ಅಲ್ಟಿಮೇಟ್ ಖೋ ಖೋ (ಯುಕೆಕೆ) ಆಟಗಾರರ ಹರಾಜಿಗೆ ಮೊದಲ ಬಾರಿಗೆ ಅಂತರರಾಷ್ಟ್ರೀಯ ಆಟಗಾರರನ್ನು ಸೇರಿಸಲಾಗುವುದು ಎಂದು ಘೋಷಿಸಿದೆ.
ಗುರು ಗೋಬಿಂದ್ ಸಿಂಗ್ ಟೆರ್ಸೆಂಟೆನರಿ (SGT) ವಿಶ್ವವಿದ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ KKFI ಅಧ್ಯಕ್ಷ ಸುಧಾಂಶು ಮಿತ್ತಲ್, ಮಿತ್ತಲ್ ‘ಖೋ ಖೋ ಭಾರತದ ಕ್ರೀಡಾ ನಾವೀನ್ಯತೆ ಮತ್ತು ಮಹತ್ವಾಕಾಂಕ್ಷೆಯ ಪ್ರತೀಕವಾಗಿದೆ. ಅಲ್ಟಿಮೇಟ್ ಖೋ ಖೋ ಸೀಸನ್ 3 ನವೆಂಬರ್ 29, 2025 ರಿಂದ ಪ್ರಾರಂಭವಾಗಲಿದೆ. ಮೊದಲ ಬಾರಿಗೆ ಲೀಗ್ ಗೆ ಅಂತರರಾಷ್ಟ್ರೀಯ ಆಟಗಾರರನ್ನು ಸೇರಿಸುವ ಮೂಲಕ ನಾವು ಇನ್ನೊಂದು ದೊಡ್ಡ ಹೆಜ್ಜೆ ಇಡುತ್ತಿದ್ದೇವೆ ಎಂದರು.
ಹರಿಯಾಣ ಸರ್ಕಾರದ ರಾಜ್ಯ ಸಚಿವ ಗೌರವ್ ಗೌತಮ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೆಕೆಎಫ್ಐಯು ಖೋ ಖೋವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡುವ ಮತ್ತು ಹರಿಯಾಣದಲ್ಲಿ ಕ್ರೀಡಾ ಅಭಿವೃದ್ಧಿಯ ಸ್ಥಿತಿಯನ್ನು ಸುಧಾರಿಸುವ ಪ್ರಯತ್ನಗಳನ್ನು ಪ್ರಶಂಸಿಸಿದರು.
ಇದೇ ಸಂದರ್ಭದಲ್ಲಿ KKFI ಮತ್ತು SGT ವಿಶ್ವವಿದ್ಯಾಲಯವು ದೇಶೀಯ ಕ್ರೀಡೆಗಳಿಗಾಗಿ ಶಿಕ್ಷಣ ಮತ್ತು ವೈಜ್ಞಾನಿಕ ಸಂಪತ್ತು ಅಭಿವೃದ್ಧಿಗೆ ಒಟ್ಟಾಗಿ ಕೆಲಸ ಮಾಡುವ ಉದ್ದೇಶದಿಂದ ಒಪ್ಪಂದ ಪತ್ರವೊಂದಕ್ಕೆ ಸಹಿ ಮಾಡಲಾಗಿದೆ.
2022ರಲ್ಲಿ ಆರಂಭವಾದ UKK ಈಗಾಗಲೇ ಪ್ರಖ್ಯಾತಿಯನ್ನು ಗಳಿಸಿದ್ದು, ಪ್ರೋ ಕಬಡ್ಡಿ ಲೀಗ್ ಮತ್ತು ಇಂಡಿಯನ್ ಸೂಪರ್ ಲೀಗ್ ನಂತರದ ದೇಶದ ಮೂರನೇ ಅತ್ಯಧಿಕ ವೀಕ್ಷಿತ ಕ್ರೀಡಾ ಲೀಗ್ ಆಗಿದೆ. ಮೊದಲ ಸೀಸನ್ನಲ್ಲಿ ಒಡಿಶಾ ಜಗರ್ನಾಟ್ಸ್ ವಿಜೇತರಾದರೆ, 2023–24ರಲ್ಲಿ ಗುಜರಾತ್ ಜೈಂಟ್ಸ್ ಚಾಂಪಿಯನ್ ಆಗಿದ್ದಾರೆ.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…