ಕ್ರೀಡೆ

ನವೆಂಬರ್ 29 ರಿಂದ ಅಲ್ಟಿಮೇಟ್ ಖೋ ಖೋ ಸೀಸನ್ 3 ಪ್ರಾರಂಭ

ಗುರುಗ್ರಾಮ್ : ಭಾರತದ ಖೋ ಖೋ ಫೆಡರೇಷನ್ (ಕೆಕೆಎಫ್ಐ) ಮುಂದಿನ ಮೂರನೇ ಸೀಸನ್ ನ ಅಲ್ಟಿಮೇಟ್ ಖೋ ಖೋ (ಯುಕೆಕೆ) ಆಟಗಾರರ ಹರಾಜಿಗೆ ಮೊದಲ ಬಾರಿಗೆ ಅಂತರರಾಷ್ಟ್ರೀಯ ಆಟಗಾರರನ್ನು ಸೇರಿಸಲಾಗುವುದು ಎಂದು ಘೋಷಿಸಿದೆ.

ಗುರು ಗೋಬಿಂದ್ ಸಿಂಗ್ ಟೆರ್ಸೆಂಟೆನರಿ (SGT) ವಿಶ್ವವಿದ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ KKFI ಅಧ್ಯಕ್ಷ ಸುಧಾಂಶು ಮಿತ್ತಲ್, ಮಿತ್ತಲ್ ‘ಖೋ ಖೋ ಭಾರತದ ಕ್ರೀಡಾ ನಾವೀನ್ಯತೆ ಮತ್ತು ಮಹತ್ವಾಕಾಂಕ್ಷೆಯ ಪ್ರತೀಕವಾಗಿದೆ. ಅಲ್ಟಿಮೇಟ್ ಖೋ ಖೋ ಸೀಸನ್ 3 ನವೆಂಬರ್ 29, 2025 ರಿಂದ ಪ್ರಾರಂಭವಾಗಲಿದೆ. ಮೊದಲ ಬಾರಿಗೆ ಲೀಗ್ ಗೆ ಅಂತರರಾಷ್ಟ್ರೀಯ ಆಟಗಾರರನ್ನು ಸೇರಿಸುವ ಮೂಲಕ ನಾವು ಇನ್ನೊಂದು ದೊಡ್ಡ ಹೆಜ್ಜೆ ಇಡುತ್ತಿದ್ದೇವೆ ಎಂದರು.

ಹರಿಯಾಣ ಸರ್ಕಾರದ ರಾಜ್ಯ ಸಚಿವ ಗೌರವ್ ಗೌತಮ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೆಕೆಎಫ್ಐಯು ಖೋ ಖೋವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡುವ ಮತ್ತು ಹರಿಯಾಣದಲ್ಲಿ ಕ್ರೀಡಾ ಅಭಿವೃದ್ಧಿಯ ಸ್ಥಿತಿಯನ್ನು ಸುಧಾರಿಸುವ ಪ್ರಯತ್ನಗಳನ್ನು ಪ್ರಶಂಸಿಸಿದರು.

ಇದೇ ಸಂದರ್ಭದಲ್ಲಿ KKFI ಮತ್ತು SGT ವಿಶ್ವವಿದ್ಯಾಲಯವು ದೇಶೀಯ ಕ್ರೀಡೆಗಳಿಗಾಗಿ ಶಿಕ್ಷಣ ಮತ್ತು ವೈಜ್ಞಾನಿಕ ಸಂಪತ್ತು ಅಭಿವೃದ್ಧಿಗೆ ಒಟ್ಟಾಗಿ ಕೆಲಸ ಮಾಡುವ ಉದ್ದೇಶದಿಂದ ಒಪ್ಪಂದ ಪತ್ರವೊಂದಕ್ಕೆ ಸಹಿ ಮಾಡಲಾಗಿದೆ.
2022ರಲ್ಲಿ ಆರಂಭವಾದ UKK ಈಗಾಗಲೇ ಪ್ರಖ್ಯಾತಿಯನ್ನು ಗಳಿಸಿದ್ದು, ಪ್ರೋ ಕಬಡ್ಡಿ ಲೀಗ್ ಮತ್ತು ಇಂಡಿಯನ್ ಸೂಪರ್ ಲೀಗ್ ನಂತರದ ದೇಶದ ಮೂರನೇ ಅತ್ಯಧಿಕ ವೀಕ್ಷಿತ ಕ್ರೀಡಾ ಲೀಗ್ ಆಗಿದೆ. ಮೊದಲ ಸೀಸನ್ನಲ್ಲಿ ಒಡಿಶಾ ಜಗರ್ನಾಟ್ಸ್ ವಿಜೇತರಾದರೆ, 2023–24ರಲ್ಲಿ ಗುಜರಾತ್ ಜೈಂಟ್ಸ್ ಚಾಂಪಿಯನ್ ಆಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

11 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

11 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

12 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

12 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

13 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

14 hours ago