ಕ್ರೀಡೆ

ಒಂದು ಶತಕದಲ್ಲಿ ಬರೋಬ್ಬರಿ 15 ದಾಖಲೆ ನಿರ್ಮಾಣಮಾಡಿರುವ ಕಿಂಗ್‌ ಕೊಹ್ಲಿ

ಅಫ್ಘಾನಿಸ್ತಾನ್ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 53 ಎಸೆತಗಳಲ್ಲಿ  ಭರ್ಜರಿ ಶತಕ ಸಿಡಿಸಿದ್ದರು. ಅಷ್ಟೇ ಅಲ್ಲದೆ ಅಂತಿಮ 61 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 12 ಫೋರ್​ನೊಂದಿಗೆ ಅಜೇಯ 122 ರನ್​ ಬಾರಿಸಿ ಮಿಂಚಿದ್ದರು. ವಿಶೇಷ ಎಂದರೆ ಇದು ವಿರಾಟ್ ಕೊಹ್ಲಿ 71ನೇ ಶತಕ.  ಇನ್ನು ಈ ಒಂದು ಭರ್ಜರಿ ಸೆಂಚುರಿಯೊಂದಿಗೆ ಕಿಂಗ್ ಕೊಹ್ಲಿ ಬರೋಬ್ಬರಿ 15 ದಾಖಲೆಗಳನ್ನು ನಿರ್ಮಿಸಿರುವುದು ವಿಶೇಷ. ಹಾಗಿದ್ದರೆ ಆ 15 ದಾಖಲೆಗಳು ಯಾವುವು ನೋಡೋಣ.

  1. ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ 4ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕೂಡ ಕೊಹ್ಲಿ ಬರೆದಿದ್ದಾರೆ.
  2. ವಿಶೇಷ ಎಂದರೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆ ಟ್​ನಲ್ಲಿ ಅತ್ಯಧಿಕ ಮೊತ್ತ ಬಾರಿಸಿದ ದಾಖಲೆ ಕೂಡ ಕೊಹ್ಲಿ ಪಾಲಾಗಿದೆ. ಈ ಹಿಂದೆ ಈ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿತ್ತು. ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ದ 118 ರನ್​ ಬಾರಿಸಿದ್ದು ದಾಖಲೆಯಾಗಿತ್ತು.ಇದೀಗ ವಿರಾಟ್ ಕೊಹ್ಲಿ 122 ರನ್ ಬಾರಿಸಿ ಹೊಸ ದಾಖಲೆ ಬರೆದಿದ್ದಾರೆ.
  3. ಇನ್ನು ಅಫ್ಘಾನಿಸ್ತಾನ್ ವಿರುದ್ದ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನೂ ಕೊಹ್ಲಿ ಬರೆದಿದ್ದಾರೆ.
  4. ಇದಲ್ಲದೆ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಶತಕ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನೂ ಕೂಡ ಕೊಹ್ಲಿ ನಿರ್ಮಿಸಿದ್ದಾರೆ.ಸದ್ಯ ಈ ಪಟ್ಟಿಯಲ್ಲಿ 100 ಶತಕ ಬಾರಿಸಿದ ಸಚಿನ್ ಅಗ್ರಸ್ಥಾನದಲ್ಲಿದ್ದಾರೆ. ಇದೀಗ ಕೊಹ್ಲಿ 71 ಶತಕ ಬಾರಿಸಿ 2ನೇ ಸ್ಥಾನಕ್ಕೇರಿದ್ದಾರೆ.
  5. ಇನ್ನು ಟಿ20 ಕ್ರಿಕೆಟ್​ನಲ್ಲಿ ಇದು ವಿರಾಟ್ ಕೊಹ್ಲಿಯ ಅತ್ಯಧಿಕ ಮೊತ್ತ ಎಂಬುದು ವಿಶೇಷ. ಅಂದರೆ ಈ ಹಿಂದೆ ಆರ್​ಸಿಬಿ ಪರ ಕೊಹ್ಲಿ 113 ರನ್​ ಬಾರಿಸಿದ್ದರು. ಇದೀಗ 122 ರನ್ ಬಾರಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.
  6. ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ 50 ಪ್ಲಸ್ ರನ್ ಬಾರಿಸಿದ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕೊಹ್ಲಿ ಬರೆದಿದ್ದಾರೆ. ಅಂದರೆ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 32 ಅರ್ಧಶತಕ ಹಾಗೂ 1 ಶತಕ ಬಾರಿಸಿ ಈ ದಾಖಲೆ ನಿರ್ಮಿಸಿದ್ದಾರೆ.
  7. ಇದಲ್ಲದೆ ಟಿ20 ಕ್ರಿಕೆಟ್​ನಲ್ಲಿ 3500 ರನ್​ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕೂಡ ವಿರಾಟ್ ಕೊಹ್ಲಿ ನಿರ್ಮಿಸಿದ್ದಾರೆ.
  8. ಹಾಗೆಯೇ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ಶತಕ ಸಿಡಿಸಿ ಅಜೇಯರಾಗಿ ಉಳಿದ ದಾಖಲೆಯನ್ನೂ ಸಹ ವಿರಾಟ್ ಕೊಹ್ಲಿ ನಿರ್ಮಿಸಿದ್ದಾರೆ.
  9. ಇನ್ನು ಏಷ್ಯಾಕಪ್ ಟಿ20 ಯಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನೂ ಕೂಡ ಕೊಹ್ಲಿ ಬರೆದಿದ್ದಾರೆ.
  10. ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪಗಳಲ್ಲಿ ಶತಕ ಗಳಿಸಿದ ನಾಲ್ಕನೇ ಭಾರತೀಯ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ಸುರೇಶ್ ರೈನಾ, ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಈ ಸಾಧನೆ ಮಾಡಿದ್ದರು.
  11. ಟಿ20 ಕ್ರಿಕೆಟ್​ನಲ್ಲಿ 100 ಸಿಕ್ಸ್​ಗಳನ್ನು ಸಿಡಿಸಿದ 2ನೇ ಭಾರತೀಯ ಆಟಗಾರ ಹಾಗೂ ವಿಶ್ವದ 10ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನೂ ಕೂಡ ವಿರಾಟ್ ಕೊಹ್ಲಿ ನಿರ್ಮಿಸಿದ್ದಾರೆ.
  12. ಯುಎಇ ಮೈದಾನದಲ್ಲಿ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಮೊತ್ತ ಬಾರಿಸಿದ ಬ್ಯಾಟ್ಸ್​ಮನ್ ಎಂಬ ದಾಖಲೆ ಕೂಡ ಇದೀಗ ವಿರಾಟ್ ಕೊಹ್ಲಿ (122)ಯ ಪಾಲಾಗಿದೆ.
  13. ಈ ಶತಕದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 24 ಸಾವಿರ ರನ್​ಗಳ ಗಡಿದಾಟಿದ 7ನೇ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡರು. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ 3ನೇ ಭಾರತೀಯ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ ಮಾತ್ರ ಈ ಸಾಧನೆ ಮಾಡಿದ್ದರು.
  14. ಅತೀ ಕಡಿಮೆ ಇನಿಂಗ್ಸ್​ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 24 ಸಾವಿರ ರನ್ ಪೂರೈಸಿದ ದಾಖಲೆ ಕೂಡ ಈ ಶತಕದೊಂದಿಗೆ ಕೊಹ್ಲಿ ತಮ್ಮದಾಗಿಸಿಕೊಂಡಿರುವುದು ವಿಶೇಷ. ಕಿಂಗ್ ಕೊಹ್ಲಿ ಕೇವಲ 522 ಇನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ್ದಾರೆ.
  15. ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಭಾರತೀಯ ಆಟಗಾರ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಟಿ20ಯಲ್ಲಿ 13 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿರುವ ಕೊಹ್ಲಿ ಅಫ್ಘಾನಿಸ್ತಾನದ ಮೊಹಮ್ಮದ್ ನಬಿಯ ಈ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

ಒಟ್ಟಿನಲ್ಲಿ 1 ಶತಕದ ಮೂಲಕ ಕಿಂಗ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಹಲವು ದಾಖಲೆ ಬರೆದು ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ.

andolana

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

3 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago