ಕ್ರೀಡೆ

ಒಂದು ಶತಕದಲ್ಲಿ ಬರೋಬ್ಬರಿ 15 ದಾಖಲೆ ನಿರ್ಮಾಣಮಾಡಿರುವ ಕಿಂಗ್‌ ಕೊಹ್ಲಿ

ಅಫ್ಘಾನಿಸ್ತಾನ್ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 53 ಎಸೆತಗಳಲ್ಲಿ  ಭರ್ಜರಿ ಶತಕ ಸಿಡಿಸಿದ್ದರು. ಅಷ್ಟೇ ಅಲ್ಲದೆ ಅಂತಿಮ 61 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 12 ಫೋರ್​ನೊಂದಿಗೆ ಅಜೇಯ 122 ರನ್​ ಬಾರಿಸಿ ಮಿಂಚಿದ್ದರು. ವಿಶೇಷ ಎಂದರೆ ಇದು ವಿರಾಟ್ ಕೊಹ್ಲಿ 71ನೇ ಶತಕ.  ಇನ್ನು ಈ ಒಂದು ಭರ್ಜರಿ ಸೆಂಚುರಿಯೊಂದಿಗೆ ಕಿಂಗ್ ಕೊಹ್ಲಿ ಬರೋಬ್ಬರಿ 15 ದಾಖಲೆಗಳನ್ನು ನಿರ್ಮಿಸಿರುವುದು ವಿಶೇಷ. ಹಾಗಿದ್ದರೆ ಆ 15 ದಾಖಲೆಗಳು ಯಾವುವು ನೋಡೋಣ.

  1. ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ 4ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕೂಡ ಕೊಹ್ಲಿ ಬರೆದಿದ್ದಾರೆ.
  2. ವಿಶೇಷ ಎಂದರೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆ ಟ್​ನಲ್ಲಿ ಅತ್ಯಧಿಕ ಮೊತ್ತ ಬಾರಿಸಿದ ದಾಖಲೆ ಕೂಡ ಕೊಹ್ಲಿ ಪಾಲಾಗಿದೆ. ಈ ಹಿಂದೆ ಈ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿತ್ತು. ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ದ 118 ರನ್​ ಬಾರಿಸಿದ್ದು ದಾಖಲೆಯಾಗಿತ್ತು.ಇದೀಗ ವಿರಾಟ್ ಕೊಹ್ಲಿ 122 ರನ್ ಬಾರಿಸಿ ಹೊಸ ದಾಖಲೆ ಬರೆದಿದ್ದಾರೆ.
  3. ಇನ್ನು ಅಫ್ಘಾನಿಸ್ತಾನ್ ವಿರುದ್ದ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನೂ ಕೊಹ್ಲಿ ಬರೆದಿದ್ದಾರೆ.
  4. ಇದಲ್ಲದೆ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಶತಕ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನೂ ಕೂಡ ಕೊಹ್ಲಿ ನಿರ್ಮಿಸಿದ್ದಾರೆ.ಸದ್ಯ ಈ ಪಟ್ಟಿಯಲ್ಲಿ 100 ಶತಕ ಬಾರಿಸಿದ ಸಚಿನ್ ಅಗ್ರಸ್ಥಾನದಲ್ಲಿದ್ದಾರೆ. ಇದೀಗ ಕೊಹ್ಲಿ 71 ಶತಕ ಬಾರಿಸಿ 2ನೇ ಸ್ಥಾನಕ್ಕೇರಿದ್ದಾರೆ.
  5. ಇನ್ನು ಟಿ20 ಕ್ರಿಕೆಟ್​ನಲ್ಲಿ ಇದು ವಿರಾಟ್ ಕೊಹ್ಲಿಯ ಅತ್ಯಧಿಕ ಮೊತ್ತ ಎಂಬುದು ವಿಶೇಷ. ಅಂದರೆ ಈ ಹಿಂದೆ ಆರ್​ಸಿಬಿ ಪರ ಕೊಹ್ಲಿ 113 ರನ್​ ಬಾರಿಸಿದ್ದರು. ಇದೀಗ 122 ರನ್ ಬಾರಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.
  6. ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ 50 ಪ್ಲಸ್ ರನ್ ಬಾರಿಸಿದ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕೊಹ್ಲಿ ಬರೆದಿದ್ದಾರೆ. ಅಂದರೆ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 32 ಅರ್ಧಶತಕ ಹಾಗೂ 1 ಶತಕ ಬಾರಿಸಿ ಈ ದಾಖಲೆ ನಿರ್ಮಿಸಿದ್ದಾರೆ.
  7. ಇದಲ್ಲದೆ ಟಿ20 ಕ್ರಿಕೆಟ್​ನಲ್ಲಿ 3500 ರನ್​ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕೂಡ ವಿರಾಟ್ ಕೊಹ್ಲಿ ನಿರ್ಮಿಸಿದ್ದಾರೆ.
  8. ಹಾಗೆಯೇ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ಶತಕ ಸಿಡಿಸಿ ಅಜೇಯರಾಗಿ ಉಳಿದ ದಾಖಲೆಯನ್ನೂ ಸಹ ವಿರಾಟ್ ಕೊಹ್ಲಿ ನಿರ್ಮಿಸಿದ್ದಾರೆ.
  9. ಇನ್ನು ಏಷ್ಯಾಕಪ್ ಟಿ20 ಯಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನೂ ಕೂಡ ಕೊಹ್ಲಿ ಬರೆದಿದ್ದಾರೆ.
  10. ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪಗಳಲ್ಲಿ ಶತಕ ಗಳಿಸಿದ ನಾಲ್ಕನೇ ಭಾರತೀಯ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ಸುರೇಶ್ ರೈನಾ, ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಈ ಸಾಧನೆ ಮಾಡಿದ್ದರು.
  11. ಟಿ20 ಕ್ರಿಕೆಟ್​ನಲ್ಲಿ 100 ಸಿಕ್ಸ್​ಗಳನ್ನು ಸಿಡಿಸಿದ 2ನೇ ಭಾರತೀಯ ಆಟಗಾರ ಹಾಗೂ ವಿಶ್ವದ 10ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನೂ ಕೂಡ ವಿರಾಟ್ ಕೊಹ್ಲಿ ನಿರ್ಮಿಸಿದ್ದಾರೆ.
  12. ಯುಎಇ ಮೈದಾನದಲ್ಲಿ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಮೊತ್ತ ಬಾರಿಸಿದ ಬ್ಯಾಟ್ಸ್​ಮನ್ ಎಂಬ ದಾಖಲೆ ಕೂಡ ಇದೀಗ ವಿರಾಟ್ ಕೊಹ್ಲಿ (122)ಯ ಪಾಲಾಗಿದೆ.
  13. ಈ ಶತಕದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 24 ಸಾವಿರ ರನ್​ಗಳ ಗಡಿದಾಟಿದ 7ನೇ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡರು. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ 3ನೇ ಭಾರತೀಯ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ ಮಾತ್ರ ಈ ಸಾಧನೆ ಮಾಡಿದ್ದರು.
  14. ಅತೀ ಕಡಿಮೆ ಇನಿಂಗ್ಸ್​ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 24 ಸಾವಿರ ರನ್ ಪೂರೈಸಿದ ದಾಖಲೆ ಕೂಡ ಈ ಶತಕದೊಂದಿಗೆ ಕೊಹ್ಲಿ ತಮ್ಮದಾಗಿಸಿಕೊಂಡಿರುವುದು ವಿಶೇಷ. ಕಿಂಗ್ ಕೊಹ್ಲಿ ಕೇವಲ 522 ಇನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ್ದಾರೆ.
  15. ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಭಾರತೀಯ ಆಟಗಾರ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಟಿ20ಯಲ್ಲಿ 13 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿರುವ ಕೊಹ್ಲಿ ಅಫ್ಘಾನಿಸ್ತಾನದ ಮೊಹಮ್ಮದ್ ನಬಿಯ ಈ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

ಒಟ್ಟಿನಲ್ಲಿ 1 ಶತಕದ ಮೂಲಕ ಕಿಂಗ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಹಲವು ದಾಖಲೆ ಬರೆದು ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ.

andolana

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

8 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

8 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

8 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

9 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

9 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

9 hours ago