ಕ್ರೀಡೆ

ಒಂದೇ ಮಾತಿನಲ್ಲಿ ಟೀಕಾಕಾರರ ಬಾಯಿ ಮುಚ್ಚಿಸಿದ ಕಿಂಗ್ ಕೊಹ್ಲಿ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2023ರ ಅಂತಿಮ ಲೀಗ್ ಪಂದ್ಯದಲ್ಲಿ ಸೋಲನುಭವಿಸಿದೆ. ಈ ಮೂಲಕ ಪ್ಲೇ ಆಫ್ ತಲುಪದೆ ಲೀಗ್ ಹಂತದಲ್ಲೇ ಅಭಿಯಾನ ಕೊನೆಗೊಳಿಸಿದೆ. ವಿರಾಟ್ ಕೊಹ್ಲಿ ದಾಖಲೆಯ ಶತಕದ ಹೊರತಾಗಿಯೂ ಆರ್ ಸಿಬಿ ಸೋಲನುಭವಿಸಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ನಿರ್ಣಾಯಕ ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಆರ್ ಸಿಬಿಗೆ ನೆರವಾಗಿದ್ದ ವಿರಾಟ್ ಕೊಹ್ಲಿ. ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಇತರ ಬ್ಯಾಟರ್ ಗಳು ವಿಕೆಟ್ ಚೆಲ್ಲುತ್ತಿದ್ದರೂ ಗಟ್ಟಿಯಾಗಿ ನಿಂತ ವಿರಾಟ್ ಆಕರ್ಷಕ ಶತಕ ಬಾರಿಸಿದರು. 61 ಎಸೆತ ಎದುರಿಸಿದ ಕೊಹ್ಲಿ ಅಜೇಯ 101 ರನ್ ಗಳಿಸಿ ತಂಡವನ್ನು ಆಧರಿಸಿದರು.

ಮೊದಲ ಇನ್ನಿಂಗ್ ಬಳಿಕ ಮಾತನಾಡಿದ ವಿರಾಟ್, “ನನ್ನ ಟಿ20 ಕ್ರಿಕೆಟ್ ಜೀವನ ಮುಗಿಯಿತು ಎಂದು ಬಹಳಷ್ಟು ಜನರು ಭಾವಿಸಿದ್ದರು, ಆದರೆ ನನಗೆ ಹಾಗೆ ಅನಿಸುವುದಿಲ್ಲ. ನಾನು ಮತ್ತೆ ನನ್ನ ಅತ್ಯುತ್ತಮ ಟಿ20 ಕ್ರಿಕೆಟ್ ಆಡುತ್ತಿದ್ದೇನೆ ಎಂದು ನನಗನಿಸುತ್ತಿದೆ” ಎಂದು ಹೇಳಿದರು.

“ನಾನು ನನ್ನನ್ನು ಆನಂದಿಸುತ್ತಿದ್ದೇನೆ. ನಾನು ಟಿ20 ಕ್ರಿಕೆಟ್ ಅನ್ನು ಹೀಗೆಯೇ ಆಡುತ್ತೇನೆ, ನಾನು ಗ್ಯಾಪ್ ಗಳಲ್ಲಿ ಹೊಡೆಯಲು, ಸಾಕಷ್ಟು ಬೌಂಡರಿಗಳನ್ನು ಬಾರಿಸಲು ಮತ್ತು ನಂತರ ಪರಿಸ್ಥಿತಿಯು ನನಗೆ ಅವಕಾಶ ನೀಡಿದರೆ ಕೊನೆಯಲ್ಲಿ ದೊಡ್ಡ ಹಿಟ್ ಹೊಡೆಯಲು ನೋಡುತ್ತೇನೆ” ಎಂದು ಕೊಹ್ಲಿ ಹೇಳಿದರು.

ಪಂದ್ಯದ ಮೇಲೆ ಮಳೆ ಬೀಳುವ ಅಪಾಯದ ಬಗ್ಗೆ ಯೋಚಿಸಲಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ. “ಈ ರೀತಿಯ ಸಂದರ್ಭಗಳಲ್ಲಿ ಪಂದ್ಯದ ಬಗ್ಗೆ ಯೋಚಿಸಿವುದು ಮುಖ್ಯವಾದುದು. ನಾನು ಮಳೆಯ ಮೇಲೆ ಗಮನ ನೀಡಲಿಲ್ಲ, ನಾನು ತಂಡಕ್ಕಾಗಿ ನಾನು ಏನು ಮಾಡಬೇಕು ಎಂಬುದರ ಮೇಲೆ ಕೇಂದ್ರೀಕರಿಸಿದ್ದೇನೆ” ಎಂದು ಅವರು ಹೇಳಿದರು.

andolanait

Recent Posts

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

12 mins ago

ಸಕಾಲಕ್ಕೆ ಸಿಗದ ಆಂಬುಲೆನ್ಸ್‌ ; ಡೋಲಿಯಲ್ಲಿ ವೃದ್ಧೆಯನ್ನು ಆಸ್ಪತ್ರೆಗೆ ಕರೆದೊಯ್ದ ಗ್ರಾಮಸ್ಥರು

ಹನೂರು : ಮೂರ್ಛೆ ತಪ್ಪಿದ್ದ ವೃದ್ದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಸಿಗದೆ ಡೋಲಿ ಮುಖಾಂತರ ಕರೆದುಕೊಂಡು ಬಂದಿರುವ ಘಟನೆ…

50 mins ago

ಮಾತು ಕೊಟ್ಟಂತೆ ನಡೆದಿದ್ದೇವೆ : ಸಿಎಂ

2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ…

1 hour ago

4 ಕೆ.ಜಿಗೂ ಹೆಚ್ಚು ಹೆರಾಯಿನ್‌ ವಶ : ಪಾಕ್‌ ಕಳ್ಳ ಸಾಗಣಿಕೆ ಪ್ರಯತ್ನ ವಿಫಲ

ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ…

1 hour ago

ಮದ್ದೂರು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ : ಸಚಿವ ಚಲುವರಾಯಸ್ವಾಮಿ ಭರವಸೆ

ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ‌.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…

2 hours ago

ಪುಲ್ವಾಮಾ ದಾಳಿ 7 ವರ್ಷ : ಹುತಾತ್ಮರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ನಮನ

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ…

3 hours ago