ಕ್ರೀಡೆ

ಒಂದೇ ಮಾತಿನಲ್ಲಿ ಟೀಕಾಕಾರರ ಬಾಯಿ ಮುಚ್ಚಿಸಿದ ಕಿಂಗ್ ಕೊಹ್ಲಿ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2023ರ ಅಂತಿಮ ಲೀಗ್ ಪಂದ್ಯದಲ್ಲಿ ಸೋಲನುಭವಿಸಿದೆ. ಈ ಮೂಲಕ ಪ್ಲೇ ಆಫ್ ತಲುಪದೆ ಲೀಗ್ ಹಂತದಲ್ಲೇ ಅಭಿಯಾನ ಕೊನೆಗೊಳಿಸಿದೆ. ವಿರಾಟ್ ಕೊಹ್ಲಿ ದಾಖಲೆಯ ಶತಕದ ಹೊರತಾಗಿಯೂ ಆರ್ ಸಿಬಿ ಸೋಲನುಭವಿಸಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ನಿರ್ಣಾಯಕ ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಆರ್ ಸಿಬಿಗೆ ನೆರವಾಗಿದ್ದ ವಿರಾಟ್ ಕೊಹ್ಲಿ. ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಇತರ ಬ್ಯಾಟರ್ ಗಳು ವಿಕೆಟ್ ಚೆಲ್ಲುತ್ತಿದ್ದರೂ ಗಟ್ಟಿಯಾಗಿ ನಿಂತ ವಿರಾಟ್ ಆಕರ್ಷಕ ಶತಕ ಬಾರಿಸಿದರು. 61 ಎಸೆತ ಎದುರಿಸಿದ ಕೊಹ್ಲಿ ಅಜೇಯ 101 ರನ್ ಗಳಿಸಿ ತಂಡವನ್ನು ಆಧರಿಸಿದರು.

ಮೊದಲ ಇನ್ನಿಂಗ್ ಬಳಿಕ ಮಾತನಾಡಿದ ವಿರಾಟ್, “ನನ್ನ ಟಿ20 ಕ್ರಿಕೆಟ್ ಜೀವನ ಮುಗಿಯಿತು ಎಂದು ಬಹಳಷ್ಟು ಜನರು ಭಾವಿಸಿದ್ದರು, ಆದರೆ ನನಗೆ ಹಾಗೆ ಅನಿಸುವುದಿಲ್ಲ. ನಾನು ಮತ್ತೆ ನನ್ನ ಅತ್ಯುತ್ತಮ ಟಿ20 ಕ್ರಿಕೆಟ್ ಆಡುತ್ತಿದ್ದೇನೆ ಎಂದು ನನಗನಿಸುತ್ತಿದೆ” ಎಂದು ಹೇಳಿದರು.

“ನಾನು ನನ್ನನ್ನು ಆನಂದಿಸುತ್ತಿದ್ದೇನೆ. ನಾನು ಟಿ20 ಕ್ರಿಕೆಟ್ ಅನ್ನು ಹೀಗೆಯೇ ಆಡುತ್ತೇನೆ, ನಾನು ಗ್ಯಾಪ್ ಗಳಲ್ಲಿ ಹೊಡೆಯಲು, ಸಾಕಷ್ಟು ಬೌಂಡರಿಗಳನ್ನು ಬಾರಿಸಲು ಮತ್ತು ನಂತರ ಪರಿಸ್ಥಿತಿಯು ನನಗೆ ಅವಕಾಶ ನೀಡಿದರೆ ಕೊನೆಯಲ್ಲಿ ದೊಡ್ಡ ಹಿಟ್ ಹೊಡೆಯಲು ನೋಡುತ್ತೇನೆ” ಎಂದು ಕೊಹ್ಲಿ ಹೇಳಿದರು.

ಪಂದ್ಯದ ಮೇಲೆ ಮಳೆ ಬೀಳುವ ಅಪಾಯದ ಬಗ್ಗೆ ಯೋಚಿಸಲಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ. “ಈ ರೀತಿಯ ಸಂದರ್ಭಗಳಲ್ಲಿ ಪಂದ್ಯದ ಬಗ್ಗೆ ಯೋಚಿಸಿವುದು ಮುಖ್ಯವಾದುದು. ನಾನು ಮಳೆಯ ಮೇಲೆ ಗಮನ ನೀಡಲಿಲ್ಲ, ನಾನು ತಂಡಕ್ಕಾಗಿ ನಾನು ಏನು ಮಾಡಬೇಕು ಎಂಬುದರ ಮೇಲೆ ಕೇಂದ್ರೀಕರಿಸಿದ್ದೇನೆ” ಎಂದು ಅವರು ಹೇಳಿದರು.

andolanait

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

3 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

3 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

4 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

5 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

5 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

5 hours ago