ಕ್ರೀಡೆ

ಒಂದೇ ಮಾತಿನಲ್ಲಿ ಟೀಕಾಕಾರರ ಬಾಯಿ ಮುಚ್ಚಿಸಿದ ಕಿಂಗ್ ಕೊಹ್ಲಿ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2023ರ ಅಂತಿಮ ಲೀಗ್ ಪಂದ್ಯದಲ್ಲಿ ಸೋಲನುಭವಿಸಿದೆ. ಈ ಮೂಲಕ ಪ್ಲೇ ಆಫ್ ತಲುಪದೆ ಲೀಗ್ ಹಂತದಲ್ಲೇ ಅಭಿಯಾನ ಕೊನೆಗೊಳಿಸಿದೆ. ವಿರಾಟ್ ಕೊಹ್ಲಿ ದಾಖಲೆಯ ಶತಕದ ಹೊರತಾಗಿಯೂ ಆರ್ ಸಿಬಿ ಸೋಲನುಭವಿಸಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ನಿರ್ಣಾಯಕ ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಆರ್ ಸಿಬಿಗೆ ನೆರವಾಗಿದ್ದ ವಿರಾಟ್ ಕೊಹ್ಲಿ. ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಇತರ ಬ್ಯಾಟರ್ ಗಳು ವಿಕೆಟ್ ಚೆಲ್ಲುತ್ತಿದ್ದರೂ ಗಟ್ಟಿಯಾಗಿ ನಿಂತ ವಿರಾಟ್ ಆಕರ್ಷಕ ಶತಕ ಬಾರಿಸಿದರು. 61 ಎಸೆತ ಎದುರಿಸಿದ ಕೊಹ್ಲಿ ಅಜೇಯ 101 ರನ್ ಗಳಿಸಿ ತಂಡವನ್ನು ಆಧರಿಸಿದರು.

ಮೊದಲ ಇನ್ನಿಂಗ್ ಬಳಿಕ ಮಾತನಾಡಿದ ವಿರಾಟ್, “ನನ್ನ ಟಿ20 ಕ್ರಿಕೆಟ್ ಜೀವನ ಮುಗಿಯಿತು ಎಂದು ಬಹಳಷ್ಟು ಜನರು ಭಾವಿಸಿದ್ದರು, ಆದರೆ ನನಗೆ ಹಾಗೆ ಅನಿಸುವುದಿಲ್ಲ. ನಾನು ಮತ್ತೆ ನನ್ನ ಅತ್ಯುತ್ತಮ ಟಿ20 ಕ್ರಿಕೆಟ್ ಆಡುತ್ತಿದ್ದೇನೆ ಎಂದು ನನಗನಿಸುತ್ತಿದೆ” ಎಂದು ಹೇಳಿದರು.

“ನಾನು ನನ್ನನ್ನು ಆನಂದಿಸುತ್ತಿದ್ದೇನೆ. ನಾನು ಟಿ20 ಕ್ರಿಕೆಟ್ ಅನ್ನು ಹೀಗೆಯೇ ಆಡುತ್ತೇನೆ, ನಾನು ಗ್ಯಾಪ್ ಗಳಲ್ಲಿ ಹೊಡೆಯಲು, ಸಾಕಷ್ಟು ಬೌಂಡರಿಗಳನ್ನು ಬಾರಿಸಲು ಮತ್ತು ನಂತರ ಪರಿಸ್ಥಿತಿಯು ನನಗೆ ಅವಕಾಶ ನೀಡಿದರೆ ಕೊನೆಯಲ್ಲಿ ದೊಡ್ಡ ಹಿಟ್ ಹೊಡೆಯಲು ನೋಡುತ್ತೇನೆ” ಎಂದು ಕೊಹ್ಲಿ ಹೇಳಿದರು.

ಪಂದ್ಯದ ಮೇಲೆ ಮಳೆ ಬೀಳುವ ಅಪಾಯದ ಬಗ್ಗೆ ಯೋಚಿಸಲಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ. “ಈ ರೀತಿಯ ಸಂದರ್ಭಗಳಲ್ಲಿ ಪಂದ್ಯದ ಬಗ್ಗೆ ಯೋಚಿಸಿವುದು ಮುಖ್ಯವಾದುದು. ನಾನು ಮಳೆಯ ಮೇಲೆ ಗಮನ ನೀಡಲಿಲ್ಲ, ನಾನು ತಂಡಕ್ಕಾಗಿ ನಾನು ಏನು ಮಾಡಬೇಕು ಎಂಬುದರ ಮೇಲೆ ಕೇಂದ್ರೀಕರಿಸಿದ್ದೇನೆ” ಎಂದು ಅವರು ಹೇಳಿದರು.

andolanait

Recent Posts

ಅಯೋಧ್ಯೆಯಲ್ಲಿ ಗಣಪತಿ ಆಶ್ರಮ ಶಾಖೆ ಉದ್ಘಾಟನಾ ಕಾರ್ಯಕ್ರಮ

ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…

2 hours ago

ಜನವರಿ.5ಕ್ಕೆ ಮೈಸೂರು ವಿವಿ 106ನೇ ಘಟಿಕೋತ್ಸವ

ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…

2 hours ago

ಗ್ರಾಮೀಣ ಭಾಗದಲ್ಲಿ ಚಳಿಗೆ ತತ್ತರಿಸಿದ ಜನರು

ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ  ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…

2 hours ago

ಒಂದೇ ವರ್ಷದಲ್ಲಿ ಕಿತ್ತು ಬಂದ ರಸ್ತೆಯ ಜಲ್ಲಿ ಕಲ್ಲು!

ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…

2 hours ago

ನಿರಂತರ ಹುಲಿ, ಚಿರತೆಗಳ ಹಾವಳಿ; ಕಂಗಾಲಾದ ರೈತರು

ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…

2 hours ago