ಕ್ರೀಡೆ

ಒಂದೇ ಮಾತಿನಲ್ಲಿ ಟೀಕಾಕಾರರ ಬಾಯಿ ಮುಚ್ಚಿಸಿದ ಕಿಂಗ್ ಕೊಹ್ಲಿ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2023ರ ಅಂತಿಮ ಲೀಗ್ ಪಂದ್ಯದಲ್ಲಿ ಸೋಲನುಭವಿಸಿದೆ. ಈ ಮೂಲಕ ಪ್ಲೇ ಆಫ್ ತಲುಪದೆ ಲೀಗ್ ಹಂತದಲ್ಲೇ ಅಭಿಯಾನ ಕೊನೆಗೊಳಿಸಿದೆ. ವಿರಾಟ್ ಕೊಹ್ಲಿ ದಾಖಲೆಯ ಶತಕದ ಹೊರತಾಗಿಯೂ ಆರ್ ಸಿಬಿ ಸೋಲನುಭವಿಸಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ನಿರ್ಣಾಯಕ ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಆರ್ ಸಿಬಿಗೆ ನೆರವಾಗಿದ್ದ ವಿರಾಟ್ ಕೊಹ್ಲಿ. ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಇತರ ಬ್ಯಾಟರ್ ಗಳು ವಿಕೆಟ್ ಚೆಲ್ಲುತ್ತಿದ್ದರೂ ಗಟ್ಟಿಯಾಗಿ ನಿಂತ ವಿರಾಟ್ ಆಕರ್ಷಕ ಶತಕ ಬಾರಿಸಿದರು. 61 ಎಸೆತ ಎದುರಿಸಿದ ಕೊಹ್ಲಿ ಅಜೇಯ 101 ರನ್ ಗಳಿಸಿ ತಂಡವನ್ನು ಆಧರಿಸಿದರು.

ಮೊದಲ ಇನ್ನಿಂಗ್ ಬಳಿಕ ಮಾತನಾಡಿದ ವಿರಾಟ್, “ನನ್ನ ಟಿ20 ಕ್ರಿಕೆಟ್ ಜೀವನ ಮುಗಿಯಿತು ಎಂದು ಬಹಳಷ್ಟು ಜನರು ಭಾವಿಸಿದ್ದರು, ಆದರೆ ನನಗೆ ಹಾಗೆ ಅನಿಸುವುದಿಲ್ಲ. ನಾನು ಮತ್ತೆ ನನ್ನ ಅತ್ಯುತ್ತಮ ಟಿ20 ಕ್ರಿಕೆಟ್ ಆಡುತ್ತಿದ್ದೇನೆ ಎಂದು ನನಗನಿಸುತ್ತಿದೆ” ಎಂದು ಹೇಳಿದರು.

“ನಾನು ನನ್ನನ್ನು ಆನಂದಿಸುತ್ತಿದ್ದೇನೆ. ನಾನು ಟಿ20 ಕ್ರಿಕೆಟ್ ಅನ್ನು ಹೀಗೆಯೇ ಆಡುತ್ತೇನೆ, ನಾನು ಗ್ಯಾಪ್ ಗಳಲ್ಲಿ ಹೊಡೆಯಲು, ಸಾಕಷ್ಟು ಬೌಂಡರಿಗಳನ್ನು ಬಾರಿಸಲು ಮತ್ತು ನಂತರ ಪರಿಸ್ಥಿತಿಯು ನನಗೆ ಅವಕಾಶ ನೀಡಿದರೆ ಕೊನೆಯಲ್ಲಿ ದೊಡ್ಡ ಹಿಟ್ ಹೊಡೆಯಲು ನೋಡುತ್ತೇನೆ” ಎಂದು ಕೊಹ್ಲಿ ಹೇಳಿದರು.

ಪಂದ್ಯದ ಮೇಲೆ ಮಳೆ ಬೀಳುವ ಅಪಾಯದ ಬಗ್ಗೆ ಯೋಚಿಸಲಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ. “ಈ ರೀತಿಯ ಸಂದರ್ಭಗಳಲ್ಲಿ ಪಂದ್ಯದ ಬಗ್ಗೆ ಯೋಚಿಸಿವುದು ಮುಖ್ಯವಾದುದು. ನಾನು ಮಳೆಯ ಮೇಲೆ ಗಮನ ನೀಡಲಿಲ್ಲ, ನಾನು ತಂಡಕ್ಕಾಗಿ ನಾನು ಏನು ಮಾಡಬೇಕು ಎಂಬುದರ ಮೇಲೆ ಕೇಂದ್ರೀಕರಿಸಿದ್ದೇನೆ” ಎಂದು ಅವರು ಹೇಳಿದರು.

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

3 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

9 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

9 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

9 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

10 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

10 hours ago