ಕ್ರೀಡೆ

ಒಂದೇ ಮಾತಿನಲ್ಲಿ ಟೀಕಾಕಾರರ ಬಾಯಿ ಮುಚ್ಚಿಸಿದ ಕಿಂಗ್ ಕೊಹ್ಲಿ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2023ರ ಅಂತಿಮ ಲೀಗ್ ಪಂದ್ಯದಲ್ಲಿ ಸೋಲನುಭವಿಸಿದೆ. ಈ ಮೂಲಕ ಪ್ಲೇ ಆಫ್ ತಲುಪದೆ ಲೀಗ್ ಹಂತದಲ್ಲೇ ಅಭಿಯಾನ ಕೊನೆಗೊಳಿಸಿದೆ. ವಿರಾಟ್ ಕೊಹ್ಲಿ ದಾಖಲೆಯ ಶತಕದ ಹೊರತಾಗಿಯೂ ಆರ್ ಸಿಬಿ ಸೋಲನುಭವಿಸಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ನಿರ್ಣಾಯಕ ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಆರ್ ಸಿಬಿಗೆ ನೆರವಾಗಿದ್ದ ವಿರಾಟ್ ಕೊಹ್ಲಿ. ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಇತರ ಬ್ಯಾಟರ್ ಗಳು ವಿಕೆಟ್ ಚೆಲ್ಲುತ್ತಿದ್ದರೂ ಗಟ್ಟಿಯಾಗಿ ನಿಂತ ವಿರಾಟ್ ಆಕರ್ಷಕ ಶತಕ ಬಾರಿಸಿದರು. 61 ಎಸೆತ ಎದುರಿಸಿದ ಕೊಹ್ಲಿ ಅಜೇಯ 101 ರನ್ ಗಳಿಸಿ ತಂಡವನ್ನು ಆಧರಿಸಿದರು.

ಮೊದಲ ಇನ್ನಿಂಗ್ ಬಳಿಕ ಮಾತನಾಡಿದ ವಿರಾಟ್, “ನನ್ನ ಟಿ20 ಕ್ರಿಕೆಟ್ ಜೀವನ ಮುಗಿಯಿತು ಎಂದು ಬಹಳಷ್ಟು ಜನರು ಭಾವಿಸಿದ್ದರು, ಆದರೆ ನನಗೆ ಹಾಗೆ ಅನಿಸುವುದಿಲ್ಲ. ನಾನು ಮತ್ತೆ ನನ್ನ ಅತ್ಯುತ್ತಮ ಟಿ20 ಕ್ರಿಕೆಟ್ ಆಡುತ್ತಿದ್ದೇನೆ ಎಂದು ನನಗನಿಸುತ್ತಿದೆ” ಎಂದು ಹೇಳಿದರು.

“ನಾನು ನನ್ನನ್ನು ಆನಂದಿಸುತ್ತಿದ್ದೇನೆ. ನಾನು ಟಿ20 ಕ್ರಿಕೆಟ್ ಅನ್ನು ಹೀಗೆಯೇ ಆಡುತ್ತೇನೆ, ನಾನು ಗ್ಯಾಪ್ ಗಳಲ್ಲಿ ಹೊಡೆಯಲು, ಸಾಕಷ್ಟು ಬೌಂಡರಿಗಳನ್ನು ಬಾರಿಸಲು ಮತ್ತು ನಂತರ ಪರಿಸ್ಥಿತಿಯು ನನಗೆ ಅವಕಾಶ ನೀಡಿದರೆ ಕೊನೆಯಲ್ಲಿ ದೊಡ್ಡ ಹಿಟ್ ಹೊಡೆಯಲು ನೋಡುತ್ತೇನೆ” ಎಂದು ಕೊಹ್ಲಿ ಹೇಳಿದರು.

ಪಂದ್ಯದ ಮೇಲೆ ಮಳೆ ಬೀಳುವ ಅಪಾಯದ ಬಗ್ಗೆ ಯೋಚಿಸಲಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ. “ಈ ರೀತಿಯ ಸಂದರ್ಭಗಳಲ್ಲಿ ಪಂದ್ಯದ ಬಗ್ಗೆ ಯೋಚಿಸಿವುದು ಮುಖ್ಯವಾದುದು. ನಾನು ಮಳೆಯ ಮೇಲೆ ಗಮನ ನೀಡಲಿಲ್ಲ, ನಾನು ತಂಡಕ್ಕಾಗಿ ನಾನು ಏನು ಮಾಡಬೇಕು ಎಂಬುದರ ಮೇಲೆ ಕೇಂದ್ರೀಕರಿಸಿದ್ದೇನೆ” ಎಂದು ಅವರು ಹೇಳಿದರು.

andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

8 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

9 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

10 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

10 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

11 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

12 hours ago