ಬೆಂಗಳೂರು : ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಒಂದೊಂದು ವಿಶೇಷತೆಗಳಿಗೆ ಸಾಕ್ಷಿಯಾಗಿದ್ದು, ಇಂದು ನಡೆದ ಭಾರತ ಮತ್ತು ನೆದರ್ಲ್ಯಾಂಡ್ಸ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಚೊಚ್ಚಲ ವಿಕೆಟ್ ಪಡೆದು ಸಂಭ್ರಮಿಸಿದ್ದಾರೆ.
ಭಾರತ ನೀಡಿದ 411ರನ್ಗಳ ಗುರಿ ಬೆನ್ನತ್ತಿದ ನೆದರ್ಲ್ಯಾಂಡ್ಸ್ ತಂಡವು ಅವನತಿಯತ್ತ ಹೆಜ್ಜೆಹಾಕಿದೆ. 72 ರನ್ಗಳಿಗೆ ಎರಡು ವಿಕೆಟ್ ಕಳೆದುಕೊಂಡು ನಂತರ ನಾಯಕ ಸ್ಕಾಟ್ ಎಡ್ವರ್ಡ್ಸ್ ಹಾಗೂ ಸೈಬ್ರಾಂಡ್ ಉತ್ತಮ ಜತೆಯಾಟವಾಡುತ್ತಿದ್ದರು. ಈ ಜತೆಯಾಟ ಬೇರ್ಪಡಿಸುವಲ್ಲಿ ವಿರಾಟ್ ಯಶಸ್ವಿಯಾಗಿದ್ದಾರೆ.
25ನೇ ಓವರ್ ಬೌಲ್ ಮಾಡಿದ ಕೊಹ್ಲಿ ತಾವು ಮಾಡಿದ ಮೂರನೇ ಎಸೆತದಲ್ಲಿ ನಾಯಕ ಎಡ್ವರ್ಡ್ಸ್ ರನ್ನು ಔಟ್ ಮಾಡಿದರು. ಕೀಪರ್ ಕೆ ಎಲ್ ರಾಹುಲ್ ಕೈಗೆ ಕ್ಯಾಚಿತ್ತು ನಿರ್ಗಮಿಸಿದರು. ಆ ಮೂಲಕ ವಿರಾಟ್ ಕೊಹ್ಲಿ ತಮ್ಮ ಚೊಚ್ಚಲ ವಿಕೆಟ್ ಪಡೆದು ಸಂಭ್ರಮಿಸಿದರು.
ಈ ಪಂದ್ಯದಲ್ಲಿ ವಿರಾಟ್ 3 ಓವರ್ ಬೌಲ್ ಮಾಡಿ 13 ರನ್ ನೀಡಿ 1 ವಿಕೆಟ್ ಕಬಳಿಸಿದರು. ವಿರಾಟ್ ಜೊತೆ ಶುಭ್ಮನ್ ಗಿಲ್ ಹಾಗೂ ಸೂರ್ಯ ಕುಮಾರ್ ಯಾದವ್ ಕೂಡ ಬೌಲ್ ಮಾಡಿದ್ದು ವಿಶೇಷವಾಗಿತ್ತು.
ಟೂರ್ನಿ ಆರಂಭವಾಗುವ ಮುನ್ನವೇ ರೋಹಿತ್ ಶರ್ಮಾ ವಿರಾಟ್ ಅವರನ್ನು ನಾವು 6ನೇ ಬೌಲರ್ ಅಗಿ ಬಳಸಲಿದ್ದೇವೆ ಎಂದು ಹೇಳಿಕೆ ನೀಡಿದ್ದನ್ನು ನೆನೆಯಬಹುದಾಗಿದೆ.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…